AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಸವಕಲ್ಯಾಣದಲ್ಲಿ ಮಟಕಾ ಬರೆದುಕೊಳ್ಳುತಿದ್ದ ದಂಪತಿಗೆ 4 ತಿಂಗಳ ಸಾದಾ ಶಿಕ್ಷೆ, ಬಸ್ ನಿಲ್ದಾಣದಲ್ಲಿ ವೃದ್ದೆಯ ಚಿನ್ನದ ಸರ ಕಳ್ಳತನ

ಪ್ರಕರಣದ ಕುರಿತು ಪಿಎಸ್ಐ ಖಾಜಾ ಹುಸೇನ್ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದರು. ಪ್ರಕರಣದ ಕುರಿತು ವಾದ, ಪ್ರತಿವಾದ ಆಲಿಸಿದ ಇಲ್ಲಿಯ ಪ್ರಧಾನ ಸಿವಿಲ್ ಮತ್ತು ಜೆಎಮ್ಎಫ್ ಸಿ ನ್ಯಾಯಾಲಯ ಆರೋಪಿಗಳಿಗೆ 4 ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

Crime News: ಬಸವಕಲ್ಯಾಣದಲ್ಲಿ ಮಟಕಾ ಬರೆದುಕೊಳ್ಳುತಿದ್ದ ದಂಪತಿಗೆ 4 ತಿಂಗಳ ಸಾದಾ ಶಿಕ್ಷೆ, ಬಸ್ ನಿಲ್ದಾಣದಲ್ಲಿ ವೃದ್ದೆಯ ಚಿನ್ನದ ಸರ ಕಳ್ಳತನ
ಬಸವಕಲ್ಯಾಣದಲ್ಲಿ ಮಟಕಾ ಬರೆದುಕೊಳ್ಳುತಿದ್ದ ದಂಪತಿಗೆ 4 ತಿಂಗಳ ಸಾದಾ ಶಿಕ್ಷೆ, ಬಸ್ ನಿಲ್ದಾಣದಲ್ಲಿ ವೃದ್ದೆಯ ಚಿನ್ನದ ಸರ ಕಳ್ಳತನ
TV9 Web
| Edited By: |

Updated on: Jun 22, 2022 | 4:39 PM

Share

ಬೀದರ್: ಬಸವಕಲ್ಯಾಣದಲ್ಲಿ ಮಟಕಾ ಬರೆದುಕೊಳ್ಳುತಿದ್ದ ದಂಪತಿಗೆ 4 ತಿಂಗಳ ಸಾದಾ ಶಿಕ್ಷೆ ಹಾಗೂ ನಗದು ದಂಡ ವಿಧಿಸಿ ಬಸವಕಲ್ಯಾಣದ ಪ್ರಧಾನ ಸಿವಿಲ್ ಮತ್ತು ಜೆಎಮ್ಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬಸವಕಲ್ಯಾಣ ತಾಲೂಕಿನ ಸಸ್ತಾಪೂರ ಗ್ರಾಮದ ನಿವಾಸಿ ಶಿವಾಜಿ ನಾಮದೇವರಾವ ಮೂಳೆ ಹಾಗೂ ಈತನ ಪತ್ನಿ ಸುಜಾತಾ ಶಿವಾಜಿ ಮೂಳೆ ಶಿಕ್ಷೆಗೆ ಗುರಿಯಾದ ದಂಪತಿಯಾಗಿದ್ದಾರೆ.

ಕಳೆದ 2015ರ ಏಪ್ರಿಲ್ 4ರಂದು ಸಸ್ತಾಪೂರ ಬಂಗ್ಲಾದಲ್ಲಿ ತಮ್ಮ ಕಿರಾಣಿ ಅಂಗಡಿಯಲ್ಲಿ ಸಾರ್ವಜನಿಕರಿಂದ ಮಟಕಾ ಚೀಟಿ ಬರೆದುಕೊಳ್ಳುತಿದ್ದಾಗ ಅಂದಿನ ಪ್ರಭಾರಿ ಪಿಎಸ್ಐ ಟಿ.ಎಸ್.ನಾಯಕ ನೇತೃತ್ವದಲ್ಲಿ ದಾಳಿ ನಡೆಸಿದ ನಗರ ಠಾಣೆ ಪೊಲೀಸರ ತಂಡ ಈ ದಂಪತಿಯನ್ನು ಬಂಧಿಸಿತ್ತು. ಅವರಿಂದ 4.53 ಲಕ್ಷ ರೂ. ಜಪ್ತಿ ಮಾಡಿಕೊಂಡಿತು.

ಪ್ರಕರಣದ ಕುರಿತು ಪಿಎಸ್ಐ ಖಾಜಾ ಹುಸೇನ್ ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದರು. ಪ್ರಕರಣದ ಕುರಿತು ವಾದ, ಪ್ರತಿವಾದ ಆಲಿಸಿದ ಇಲ್ಲಿಯ ಪ್ರಧಾನ ಸಿವಿಲ್ ಮತ್ತು ಜೆಎಮ್ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಗಂಗವ್ವ ಆಯಟ್ಟಿ ಅವರು ಆರೋಪಿಗಳಿಗೆ 4 ತಿಂಗಳು ಸಾದಾ ಶಿಕ್ಷೆ ಹಾಗೂ 600 ರೂ. ನಗದು ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಫಿರಿಯಾದಿ ಪರ ಸರ್ಕಾರಿ ಸಹಾಯಕ ಅಭಿಯೋಕರಾದ ಜಗದೇವಿ ಚೊಂಡೆ ವಾದ ಮಂಡಿಸಿದ್ದರು.

ಬಸ್ ನಿಲ್ದಾಣದಲ್ಲಿ ವೃದ್ದೆಯ 3 ಲಕ್ಷ ಮೌಲ್ಯದ ಚಿನ್ನದ ಸರ ಕದ್ದು ಪರಾರಿ..

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ಬಸ್ ನಿಲ್ದಾಣದಲ್ಲಿ ಹಾಡುಹಗಲೆ ವೃದ್ದೆಯೊಬ್ಬರ ಕೊರಳಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಬಾಪಿರೆಡ್ಡಿ ಕ್ಯಾಂಪ್ ನಿವಾಸಿ ಕನಕರತ್ನ ಎಂಬ ವೃದ್ದೆ ಚಿನ್ನದ ಸರ ಕಳೆದುಕೊಂಡವರು. ಅದು ಸುಮಾರು ಮೂರು ಲಕ್ಷ ಮೌಲ್ಯದ ಚಿನ್ನದ ಸರವಾಗಿದೆ. ಗಂಗಾವತಿ ಇಂದ ಬಾಪಿರೆಡ್ಡಿ ಕ್ಯಾಂಪ್ ಗೆ ಹೊರಟಿದ್ದಾಗ, ಬಸ್ ನಿಲ್ದಾಣದಲ್ಲಿ ಕನಕರತ್ನ ಅವರ ಚಿನ್ನದ ಸರವನ್ನು ಕಳ್ಳರು ಎಗುರಿಸಿದ್ದಾರೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಅಪರಿಚಿತ ಮಹಿಳೆಯರಿಬ್ಬರ ಮೃತದೇಹ ಪತ್ತೆ ಪ್ರಕರಣ: ಸುಳಿವು ಕೊಟ್ಟವರಿಗೆ ಮಂಡ್ಯ ಪೊಲೀಸರಿಂದ 1 ಲಕ್ಷ ಬಹುಮಾನ

Follow Us
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್