AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar: ಲತಾ ಮಂಗೇಶ್ಕರ್ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣದಿಂದ ಕಾಲೇಜು ನಿರ್ಮಾಣ ಮಾಡಲಾಗಿತ್ತು

1980ರಲ್ಲಿ ದೀನಾನಾಥ್ ಮಂಗೇಶ್ಕರ್ ಮಹಾವಿದ್ಯಾಲಯ ಆರಂಭ ಆಗಿತ್ತು. ಗಾನ ಕೋಗಿಲೆ ಲತಾ ಮಂಗೇಶ್ಕರ್ ಮಹಾವಿದ್ಯಾಲಯ ಆರಂಭಿಸಿದ್ದರು. ಇದೀಗ ಲತಾ ನಿಧನದ ಹಿನ್ನೆಲೆ ದೀನಾನಾಥ್ ಮಹಾವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

Lata Mangeshkar: ಲತಾ ಮಂಗೇಶ್ಕರ್ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣದಿಂದ ಕಾಲೇಜು ನಿರ್ಮಾಣ ಮಾಡಲಾಗಿತ್ತು
ಲತಾ ಮಂಗೇಶ್ಕರ್
Follow us
TV9 Web
| Updated By: ganapathi bhat

Updated on:Feb 06, 2022 | 5:15 PM

ಬೀದರ್: ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ಇಂದು (ಫೆಬ್ರವರಿ 6) ಬೆಳಗ್ಗೆ ನಿಧನ ಹೊಂದಿದ್ದಾರೆ. ಭಾರತದಾದ್ಯಂತ ಲತಾ ಮಂಗೇಶ್ಕರ್ ನಿಧನದಿಂದ ಶೋಕ ವಾತಾವರಣ ತುಂಬಿದೆ. ಗಣ್ಯರು, ಜನಸಾಮಾನ್ಯರು ಖ್ಯಾತ ಗಾಯಕಿಯ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಇತ್ತ ಲತಾ ತಂದೆ ಹೆಸರಿನ ಮಹಾವಿದ್ಯಾಲಯದಲ್ಲಿ ಕೂಡ ಶೋಕ ಮಡುಗಟ್ಟಿದೆ. ಲತಾ ಮಂಗೇಶ್ಕರ್ ತಂದೆ ಹೆಸರಿನ ಮಾಸ್ಟರ್​ ದೀನಾನಾಥ್ ಮಂಗೇಶ್ಕರ್ ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಮಹಾರಾಷ್ಟ್ರದ ಲಾತೂರ್​ ಜಿಲ್ಲೆ ನಿಲಂಗಾ ತಾಲೂಕಿನ ದೀನಾನಾಥ್ ಕಾಲೇಜಿನಲ್ಲಿ ಶೋಕಾಚರಣೆ ಮಾಡಲಾಗಿದೆ.

1972, 1976 ರಲ್ಲಿ ಲತಾ ಮಂಗೇಶ್ಕರ್ ಇಲ್ಲಿ ಎರಡು ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಊರಿನ ಜನರ ಮನವಿ ಮೇರೆಗೆ ಗ್ರಾಮಕ್ಕೆ ಆಗಮಿಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಬಳಿಕ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣದಿಂದ ಕಾಲೇಜು ನಿರ್ಮಾಣ ಮಾಡಲಾಗಿತ್ತು. 1980ರಲ್ಲಿ ದೀನಾನಾಥ್ ಮಂಗೇಶ್ಕರ್ ಮಹಾವಿದ್ಯಾಲಯ ಆರಂಭ ಆಗಿತ್ತು. ಗಾನ ಕೋಗಿಲೆ ಲತಾ ಮಂಗೇಶ್ಕರ್ ಮಹಾವಿದ್ಯಾಲಯ ಆರಂಭಿಸಿದ್ದರು. ಇದೀಗ ಲತಾ ನಿಧನದ ಹಿನ್ನೆಲೆ ದೀನಾನಾಥ್ ಮಹಾವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್(92) ನಿಧನವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ದೀನಾನಾಥ್ ಮಂಗೇಶ್ಕರ್ ಕಾಲೇಜು ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಲಾತೂರ್​ ಜಿಲ್ಲೆ ನಿಲಂಗಾ ತಾಲೂಕಿನ ಶಹಜಾನಿ ಔರಾದ್​ ಗ್ರಾಮದಲ್ಲಿರುವ ದೀನಾನಾಥ್ ಕಾಲೇಜಿನ ಅಧ್ಯಕ್ಷರು ಗಾಯಕಿಯ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಕೋಗಿಲೆಗಳ ಸಾಮ್ರಾಜ್ಯದ ಮಹಾರಾಣಿ ಲತಾ ಮಂಗೇಶ್ಕರ್

ಲತಾ ಮಂಗೇಶ್ಕರ್ ನಿಧನಕ್ಕೆ ಚಿತ್ರಸಾಹಿತಿ ಕೆ.ಕಲ್ಯಾಣ್ ಸಂತಾಪ ವ್ಯಕ್ತಪಡಿಸಿದ್ದಾರೆ. ಕೋಗಿಲೆಗಳ ಸಾಮ್ರಾಜ್ಯದ ಮಹಾರಾಣಿ ಲತಾ ಮಂಗೇಶ್ಕರ್. ಲತಾ ಮಂಗೇಶ್ಕರ್ ಹಾಡುಗಳಿಂದ ಕಾಯಿಲೆ ವಾಸಿಯಾಗುತ್ತವೆ. ದೈವಿಕ ಕಂಟ, ಮಹಾನ್ ಸರಸ್ವತಿ ಲತಾ ಮಂಗೇಶ್ಕರ್. ಲತಾ ಮಂಗೇಶ್ಕರ್ ನಿಧನ ಸಂಗೀತ ಲೋಕಕ್ಕಾದ ದೊಡ್ಡ ನಷ್ಟ. ಕನ್ನಡದ ನಾಡಗೀತೆ ಹಾಡಿಸಬೇಕು ಅನ್ನೋ ಪ್ರಯತ್ನ ಇತ್ತು. ಇದು ಆಸೆಯಾಗಿಯೇ ಉಳಿದುಕೊಂಡಿತು ಎಂದು ಬೆಳಗಾವಿಯಲ್ಲಿ ಹೆಸರಾಂತ ಚಿತ್ರಸಾಹಿತಿ ಕೆ. ಕಲ್ಯಾಣ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Lata Mangeshkar: ಲತಾ ಮಂಗೇಶ್ಕರ್ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರದಿಂದ 2 ದಿನಗಳ ಕಾಲ ಶೋಕಾಚರಣೆ

ಇದನ್ನೂ ಓದಿ: Lata Mangeshkar; ‘ನನ್ನಿಂದ ತಪ್ಪಾಗಿದೆ ಕ್ಷಮಿಸಿ ಲತಾಜೀ, ನಿಮ್ಮನ್ನು ಬೆಂಗಳೂರಿಗೆ ಕರೆಸಿಕೊಳ್ಳುವ ಕನಸು ಹಾಗೇ ಉಳಿಯಿತು’

Published On - 4:44 pm, Sun, 6 February 22

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ