AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಮ್ಮಾಯಿ ಸಂಘ ಪರಿವಾರದಿಂದ ಬಂದಿಲ್ಲ, ಕಮ್ಯುನಿಸ್ಟ್ ಪಕ್ಷದಿಂದ ಬಂದಿದವರು; ಸಿಎಂ ವಿರುದ್ಧ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಆಕ್ರೋಶ

ದೇವಸ್ಥಾನ ಒಡೆಸುವ ಮುಖ್ಯಮಂತ್ರಿ ಬೊಮ್ಮಾಯಿ ನಡೆ ರಾಜ್ಯದ ಹಿಂದೂಗಳ ಮನಸಿಗೆ ನೋವು ತಂದಿದೆ. ಒಂದು ಧರ್ಮಕ್ಕೆ ಸೀಮಿತವಾಗಿ ದೇವಾಲಯ ಒಡೆಯುವಂತೆ ಸುಪ್ರೀಂ ಎಲ್ಲಿಯೂ ಹೇಳಿಲ್ಲ. ಬೊಮ್ಮಾಯಿ ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಮಸೀದಿ ಒಡೆದಿರಿ, ಎಷ್ಟು ಚರ್ಚ್ ಒಡೆದಿರಿ ಎಂದು ಮಾಹಿತಿ ಕೊಡಿ ಎಂದು ಸಿದ್ಧಲಿಂಗ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಬೊಮ್ಮಾಯಿ ಸಂಘ ಪರಿವಾರದಿಂದ ಬಂದಿಲ್ಲ, ಕಮ್ಯುನಿಸ್ಟ್ ಪಕ್ಷದಿಂದ ಬಂದಿದವರು; ಸಿಎಂ ವಿರುದ್ಧ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಆಕ್ರೋಶ
ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ
TV9 Web
| Edited By: |

Updated on:Sep 21, 2021 | 1:12 PM

Share

ಬೀದರ್: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅಸಮಾಧಾನ ಹೊರ ಹಾಕಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಯಾವುದೆ ಅಭಿವೃದ್ಧಿ ಕೈಗೊಂಡಿಲ್ಲ. ಬದಲಾಗಿ ಹಿಂದೂ ದೇವಾಲಯಗಳನ್ನ ಧ್ವಂಸ ಮಾಡಲು‌ ಅಧಿಕಾರಿಗಳನ್ನು ಚೂ ಬಿಟ್ಟದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಬೀದರ್​ನಲ್ಲಿ ಮಾತನಾಡಿದ ಸಿದ್ಧಲಿಂಗ ಸ್ವಾಮೀಜಿ, ದೇವಸ್ಥಾನ ಒಡೆಸುವ ಮುಖ್ಯಮಂತ್ರಿ ಬೊಮ್ಮಾಯಿ ನಡೆ ರಾಜ್ಯದ ಹಿಂದೂಗಳ ಮನಸಿಗೆ ನೋವು ತಂದಿದೆ. ಒಂದು ಧರ್ಮಕ್ಕೆ ಸೀಮಿತವಾಗಿ ದೇವಾಲಯ ಒಡೆಯುವಂತೆ ಸುಪ್ರೀಂ ಎಲ್ಲಿಯೂ ಹೇಳಿಲ್ಲ. ಬೊಮ್ಮಾಯಿ ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಮಸೀದಿ ಒಡೆದಿರಿ, ಎಷ್ಟು ಚರ್ಚ್ ಒಡೆದಿರಿ ಎಂದು ಮಾಹಿತಿ ಕೊಡಿ ಎಂದು ಪ್ರಶ್ನಿಸಿದ್ದಾರೆ.

ಬೊಮ್ಮಾಯಿ ಕ್ಷೇತ್ರದಲ್ಲಿಯೇ ಅಕ್ರಮ ಮಸೀದಿಗಳಿವೆ ತಾಕತ್ತಿದ್ದರೆ ಅವುಗಳನ್ನ ನೆಲಸಮ ಮಾಡಿ. ಅವರ ಕ್ಷೇತ್ರದ ಬಂಕಾಪುರದಲ್ಲಿ ಅಕ್ರಮ‌ ಮಸೀದಿಗಳಿವೆ ಅವುಗಳನ್ನ ಒಡೆದರೆ ಮತ ಹಾಕೊದಿಲ್ಲ. ಮುಸ್ಲಿಂಮರು ಮತ ಹಾಕೊದಿಲ್ಲ ಅಂತಾ ಮಸೀದಿಗಳನ್ನು ಅವರು ಒಡೆಯುತ್ತಿಲ್ಲ. ಹಿಂದುತ್ವದ ಹೆಸರಿನಲ್ಲಿ ಅಧಿಕಾರಿಕ್ಕೆ ಬಂದ ಬಿಜೆಪಿಯೇ ಹಿಂದೂ‌ ದೇವಾಲಯಗಳನ್ನು ಕೆಡುವುತ್ತಿದ್ದಾರೆ. ಬೊಮ್ಮಾಯಿ ಸಂಘ ಪರಿವಾರದಿಂದ ಬಂದಿಲ್ಲ. ಕಮ್ಯುನಿಸ್ಟ್ ಪಕ್ಷದಿಂದ ಬಿಜೆಪಿಗೆ ಬಂದವರು. ಬಿಜೆಪಿಯಲ್ಲಿಯೇ ಟಿಪ್ಪುಸುಲ್ತಾನ ಇದ್ದಾನೆ ಮೊಹ್ಮದ್ ಗಜ್ನಿ ಕೂಡಾ ಇಲ್ಲೆ ಇದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ವಯೋಸಹಜ ಕಾಯಿಲೆಯಿಂದ ಸಾಕು ನಾಯಿ ಸಾವು, ದುಃಖ ಹಂಚಿಕೊಂಡ ಗೃಹ ಸಚಿವ ಬಸವರಾಜ್ ಬೊಮ್ಮಾಯಿ

Published On - 1:11 pm, Tue, 21 September 21

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ