AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

70 ರೈತರು ಅಮೂಲ್ಯ ಶ್ರೀಗಂಧ ಕೃಷಿಯಲ್ಲಿ ತೊಡಗಿದ್ದಾರೆ! ಕೆಲವೇ ವರ್ಷಗಳಲ್ಲಿ ಕೋಟ್ಯಂತರ ಆದಾಯದ ನಿರೀಕ್ಷೆ…

Bidar sandalwood cultivation: ಹೌದು ಕನ್ನಡ ನಾಡಿಗೂ ಶ್ರೀಗಂಧಕ್ಕೂ ಶತಮಾನಗಳ ನಂಟು. ಅನಾದಿ ಕಾಲದಿಂದಲೂ ಕರ್ನಾಟಕ ಗಂಧದ ಬೀಡು ಎಂದೇ ಕರೆಯಿಸಿಕೊಳ್ಳುತ್ತಿದೆ. ಸೂಕ್ತ ಹವಾಮಾನ ಹೊರತಾಗಿಯೂ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಬೀದರ್ ಜಿಲ್ಲೆಯಲ್ಲಿ ಶ್ರೀಗಂಧ ಬೆಳೆಸುವವರ ಸಂಖ್ಯೆ ಕಡಿಮೆ. ಆದರೇ ಇತ್ತೀಚೆಗೆ ಶ್ರೀಗಂಧ ಬೆಳೆಯಲು ರೈತರು ಮನಸ್ಸು ಮಾಡುತ್ತಿದ್ದಾರೆ. ಸ್ವತಃ ಅರಣ್ಯ ಇಲಾಖೆಯೇ ಬೀದರ್ ಜಿಲ್ಲೆಯಲ್ಲಿ ಶ್ರೀಗಂಧ ಬೆಳೆಗೆ ಒತ್ತು ಕೊಡುತ್ತಿದೆ.

70 ರೈತರು ಅಮೂಲ್ಯ ಶ್ರೀಗಂಧ ಕೃಷಿಯಲ್ಲಿ ತೊಡಗಿದ್ದಾರೆ! ಕೆಲವೇ ವರ್ಷಗಳಲ್ಲಿ ಕೋಟ್ಯಂತರ ಆದಾಯದ ನಿರೀಕ್ಷೆ...
70 ರೈತರು ಶ್ರೀಗಂಧ ಕೃಷಿಯಲ್ಲಿ ತೊಡಗಿದ್ದಾರೆ!
ಸುರೇಶ ನಾಯಕ
| Updated By: ಸಾಧು ಶ್ರೀನಾಥ್​|

Updated on: Feb 27, 2024 | 4:10 PM

Share

ಕಬ್ಬು, ಸೋಯಾ, ತೊಗರಿ ಬೆಳೆಯಾಯಿತು ಈಗ ಶ್ರೀಗಂಧ ಬೆಳೆಯುವ ಸಮಯ. ಬೀದರ್ (Bidar) ಜಿಲ್ಲೆಯಲ್ಲೀಗ ಶ್ರೀಗಂಧದ ಮರವನ್ನ ವಾಣಿಜ್ಯ ಉದ್ದೇಶದಿಂದ ಬೆಳೆಯುವ (sandalwood cultivation) ಸಾಹಸಕ್ಕೆ ಇಲ್ಲಿನ ರೈತರು ಕೈ ಹಾಕಿದ್ದಾರೆ. ಜಿಲ್ಲೆಯಲ್ಲಿ 70 ಕ್ಕೂ ಹೆಚ್ಚು ರೈತರು ಶ್ರೀಗಂಧ ಬೆಳೆಸಲಾಗುತ್ತಿದ್ದು ಕೆಲವೇ ಕೆಲವೂ ವರ್ಷದಲ್ಲಿ ಕೋಟಿ ಕೋಟಿ ರೂಪಾಯಿ ಆದಾಯದ ನಿರೀಕ್ಷೆಯಲ್ಲಿ ರೈತರಿದ್ದಾರೆ (success story).

ಅಂದಹಾಗೆ ಸ್ವತಃ ಅರಣ್ಯ ಇಲಾಖೆಯೇ ಬೀದರ್ ಜಿಲ್ಲೆಯಲ್ಲಿ ಶ್ರೀಗಂಧ ಬೆಳೆಗೆ ಒತ್ತು ಕೊಡುತ್ತಿದೆ. ಅತಿ ಹೆಚ್ಚು ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಬೆಳೆಸಿ ಸಾಧನೆ ಬಳಿಕ, ರೈತರ ಹೊಲಗಳಲ್ಲಿಯೂ ಶ್ರೀಗಂಧ ಬೆಳೆಗೆ ಒತ್ತು ಸಿಕ್ಕಿದೆ… ಹೌದು ಕನ್ನಡ ನಾಡಿಗೂ ಶ್ರೀಗಂಧಕ್ಕೂ ಶತಮಾನಗಳ ನಂಟು. ಅನಾದಿ ಕಾಲದಿಂದಲೂ ಕರ್ನಾಟಕ ಗಂಧದ ಬೀಡು ಎಂದೇ ಕರೆಯಿಸಿಕೊಳ್ಳುತ್ತಿದೆ. ಸೂಕ್ತ ಹವಾಮಾನ ಹೊರತಾಗಿಯೂ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಬೀದರ್ ಜಿಲ್ಲೆಯಲ್ಲಿ ಶ್ರೀಗಂಧ ಬೆಳೆಸುವವರ ಸಂಖ್ಯೆ ಕಡಿಮೆ. ಆದರೇ ಇತ್ತೀಚೆಗೆ ಶ್ರೀಗಂಧ ಬೆಳೆಯಲು ರೈತರು ಮನಸ್ಸು ಮಾಡುತ್ತಿದ್ದಾರೆ.

ಬೀದರ್ ತಾಲೂಕಿ ಚಿಟ್ಟಾ ಗ್ರಾಮದ ಮಹ್ಮದ್ ಜಾಫರ್ ತಮ್ಮ 7 ಎಕರೆ ಜಮೀನಿನಲ್ಲಿ ಶ್ರೀ ಗಂಧ ಬೆಳೆ ಹಾಕಿ ನಾಲ್ಕು ವರ್ಷ ಕಳೆದಿದೆ. ಇನ್ನು ಹತ್ತೇ ವರ್ಷ ಕಾಲ ತಾಳಿದರೇ 10 ರಿಂದ 15 ಕೋಟಿ ರೂಪಾಯಿ ಆದಾಯ ಗಳಿಸಬಹುದೆಂದು ಲೆಕ್ಕಾಚಾರ ಹಾಕಲಾಗಿದೆ. ಮಹ್ಮದ್ ಜಾಫರ್ ತಮ್ಮ ಹೊಲದಲ್ಲಿ ಒಂದೂವರೆ ಸಾವಿರ ಶ್ರೀಗಂಧದ ಗಿಡಗಳು, ಮಾವು ಎರಡೂವರೆ ಸಾವಿರ, ಹೆಬ್ಬೇವು, ಐನೂರು, ಬಾಳೆ, ಪಪ್ಪಾಯಿ ಗಿಡಗಳನ್ನ ನೆಡಲಾಗಿದೆ. ಇದರ ನಡುವೆ ನಮಗೆ ಬೇಕಾದ ಎಲ್ಲಾ ಬೆಳೆಗಳನ್ನ ಬೆಳೆಯಬಹುದು. ಹೀಗಾಗಿ ಶ್ರೀ ಗಂಧ ನಾಟಿ ಮಾಡಿದರೆ ರೈತರು ಲಾಭ ಗಳಿಸಬಹುದೆಂದು ಈ ರೈತರು ಹೇಳುತ್ತಿದ್ದಾರೆ.

ಬೇಸಿಗೆಯಲ್ಲಿ ವಾರಕ್ಕೆ ಎರಡು ಬಾರಿ ಪ್ರತಿ ಗಿಡಕ್ಕೆ ಮೂರು ಲೀಟರ್ ನೀರು ಕೊಡುತ್ತಿರಬೇಕು. ಮಳೆಗಾಲದಲ್ಲಿ ಮರದ ಬುಡದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ವರ್ಷಕ್ಕೊಮ್ಮೆ ನಿಗದಿತ ಪ್ರಮಾಣದಲ್ಲಿ ಸಾವಯವ ಗೊಬ್ಬರ ಬಳಸಿದರೆ ಗಿಡದ ಬೆಳವಣಿಗೆಯೂ ಉತ್ತಮವಾಗಿರುತ್ತದೆ. ಹೆಚ್ಚೆಂದರೆ ಒಂದು ಮರ ಬೆಳೆಯಲು ವರ್ಷಕ್ಕೆ 50 ರೂಪಾಯಿ ಖರ್ಚು ಬೀಳಬಹುದು ಎಂಬ ಅಚ್ಚರಿಯ ಅಂಶವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ.

ಈ ಹಿಂದೆ ಶ್ರೀಗಂಧದ ಮರಗಳನ್ನು ಯಾವುದೇ ಪ್ರದೇಶದಲ್ಲಿ ಬೆಳೆದರೂ ಅದು ಸರ್ಕಾರದ ಸ್ವತ್ತಾಗಿರುತ್ತಿತ್ತು. ಆದರೆ, ಕರ್ನಾಟಕ ಅರಣ್ಯ ಕಾಯಿದೆ 2001 ಸೆಕ್ಷನ್ 83ರ ಪ್ರಕಾರ ಯಾರ ಜಮೀನಿನಲ್ಲಿ ಶ್ರೀಗಂಧದ ಮರವಿರುತ್ತಿತ್ತೋ ಅದು ಜಮೀನು ಮಾಲೀಕನ ಸ್ವತ್ತು ಎಂದು ತಿದ್ದುಪಡಿ ಮಾಡಿದೆ. ಇದರಿಂದ ರೈತರು ಯಾವುದೇ ಆತಂಕವಿಲ್ಲದೆ ಶ್ರೀಗಂಧ ಬೆಳೆಯಬಹುದು.

ಇದನ್ನೂ ಓದಿ: KED Solarization: ವಿದ್ಯುತ್​ ಸಮಸ್ಯೆ ಸಮ್ಮುಖದಲ್ಲಿ ಕರ್ನಾಟಕದಲ್ಲಿ ಲಕ್ಷಗಟ್ಟಲೆ ನೀರಾವರಿ ಪಂಪ್‌ಗಳಿಗೆ ಶಕ್ತಿ ತುಂಬಲಿದೆ ಸೌರಶಕ್ತಿ!

ಜೊತೆಗೆ ಶ್ರೀಗಂಧ ಬೆಳೆಯಲಿಚ್ಛಿಸುವ ರೈತರಿಗೆ ಅರಣ್ಯ ಇಲಾಖೆಯಿಂದ ಸಹಕಾರ ಸಿಗುತ್ತದೆ. ಇದರಿಂದ ರೈತರು ತೋಟಗಳಲ್ಲಿ ಮಿಶ್ರ ಬೆಳೆಯಾಗಿ ಶ್ರೀಗಂಧ ಬೆಳೆಯಬಹುದು. ನೀಲಗಿರಿ ಮರಗಳ ಹಾವಳಿ ತಪ್ಪಿಸಿ ಶ್ರೀಗಂಧ ಮರ ಬೆಳೆಸುವುದಕ್ಕೆ ಸರ್ಕಾರ ಉತ್ತೇಜನ ನೀಡುತ್ತಿದೆ. ಇನ್ನೂ ಬೀದರ್ ಜಿಲ್ಲೆಯಲ್ಲಿ 72 ರೈತರು 3 ಸಾವಿರದ 5 ನೂರು ಗಿಡಗಳನ್ನ ನೆಟ್ಟಿದ್ದ ಈ ರೈತರಿಗೆ ಅರಣ್ಯ ಇಲಾಖೆಯಿಂದ ಎಲ್ಲಾ ಸೌಲಭ್ಯಗಳನ್ನ ಕೊಟ್ಟಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ.

ಶ್ರೀಗಂಧ ನಿಧಾನವಾಗಿ ಬೆಳೆಯುವ ಅರೆ ಪರಾವಲಂಬಿ ಮರ. ಮಿಶ್ರ ತೋಟಗಾರಿಕೆ ಬೆಳೆಯಾಗಿ ಶ್ರೀಗಂಧ ಬೆಳೆಯುವುದರಿಂದ ರೈತನ ಬಾಳು ಬಂಗಾರವಾಗುವುದರಲ್ಲಿ ಅನುಮಾನವಿಲ್ಲ. ಮಾವು, ನುಗ್ಗೆ ಮತ್ತು ಸಪೋಟ ಮಧ್ಯೆ ಮಿಶ್ರ ಬೆಳೆಯಾಗಿ ಶ್ರೀಗಂಧ ಬೆಳೆಯಬಹುದು. ಇದರಿಂದ ಸಸ್ಯ ವೈವಿಧ್ಯತೆ ಕಾಪಾಡಬಹುದು. ಜೊತೆಗೆ ಗಿಡಗಳು ಬೆಳೆದಂತೆ ತೋಟದ ಮೌಲ್ಯ ಅಧಿಕವಾಗುತ್ತದೆ. 10- 20 ವರ್ಷಗಳಲ್ಲಿ ಅತ್ಯಧಿಕ ಲಾಭ ಗಳಿಸಬಹುದು ಎಂದು ರೈತರು ಹೇಳುತ್ತಿದ್ದಾರೆ. ಇನ್ನು ಬೀದರ್ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶ್ರೀಗಂಧ ಬೆಳೆಸಲು ಮುಂದಾಗಿದ್ದು ಜಿಲ್ಲೆಯಲ್ಲಿ ಈಗಾಗಲೆ ಸಾವಿರಾರು ಶ್ರೀಗಂಧ ನಾಟಿ ಮಾಡಿದ್ದಾರೆ. ಶ್ರೀಗಂಧ ಬೆಳೆಯಲಿಚ್ಛಿಸುವ ರೈತರಿಗೆ ಅರಣ್ಯ ಇಲಾಖೆಯಿಂದ ಸಹಕಾರ ಕೂಡಾ ಸಿಗುತ್ತದೆ. ಹಾಗಾದರೆ ಇನ್ಯಾಕೆ ತಡ ನೀವು ಶ್ರೀಗಂಧದ ಗಿಡ ನೆಟ್ಟು ಕೋಟ್ಯಾಧಿಪತಿಗಳಾಗಿ!

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!