AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾದ ಸೋಲಾರ್​ ಹಾಳಾಗಿ ಬೀದರ್​ನ ಬ್ರಿಮ್ಸ್​ನಲ್ಲಿ ಬಾಣಂತಿಯರಿಗೆ ಬಿಸಿ ನೀರು ಸೀಗದೆ ಪರದಾಡುವಂತಾಗಿದೆ

ನಾಲ್ಕು ವರ್ಷದ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾದ ಸೋಲಾರ್ ವಾಟರ್ ಹೀಟರ್ ಸಂಪೂರ್ಣವಾಗಿ ಹಾಳಾಗಿದೆ. ಇದರಿಂದಾಗಿ ಹೆರಿಗೆಗೆಂದು ಬರುವ ಬಾಣಂತಿಯರಿಗೆ ಬಿಸಿ ನೀರು ಸೀಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾದ ಸೋಲಾರ್​ ಹಾಳಾಗಿ ಬೀದರ್​ನ ಬ್ರಿಮ್ಸ್​ನಲ್ಲಿ ಬಾಣಂತಿಯರಿಗೆ ಬಿಸಿ ನೀರು ಸೀಗದೆ ಪರದಾಡುವಂತಾಗಿದೆ
ಬೀದರ್​ ಬ್ರಿಮ್ಸ್​ ಆಸ್ಪತ್ರೆ
TV9 Web
| Edited By: |

Updated on: Nov 18, 2022 | 2:15 PM

Share

ಬೀದರ್​: ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಬ್ರಿಮ್ಸ್ ಆಸ್ಪತ್ರೆ ನಿರ್ಮಾಣವಾಗಿದೆ. ಆದರೆ ಆಸ್ಪತ್ರೆಗೆ ಹೆರಿಗೆಗೆಂದು ಬರುವ ಬಾಣಂತಿಯರಿಗೆ ಬಿಸಿ ನೀರು ಸೀಗುತ್ತಿಲ್ಲ. ಪಕ್ಕದಲ್ಲಿರುವ ಹೋಟೆಲ್​ಗಳಿಂದ ಹಣ ಕೊಟ್ಟು ಬಿಸಿ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಬ್ರಿಮ್ಸ್​ನ ನಿರ್ದೇಶಕರ ನಿರ್ಲಕ್ಷಕ್ಕೆ ರೋಗಿಗಳು ಹೈರಾಣರಾಗುತ್ತಿದ್ದಾರೆ. ನಾಲ್ಕು ವರ್ಷದ ಹಿಂದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಳವಡಿಸಿದ ಸೋಲಾರ್ ವಾಟರ್ ಹೀಟರ್ ಹಾಳಾಗಿದ್ದು ಬಾಣಂತಿಯರಿಗೆ ಬೀಸಿ ನೀರು ಬೇಕಾದರೆ ಹೋಟೆಲ್​ಗಳನ್ನೇ ಅವಲಂಬಿಸಬೇಕಾಗಿದೆ. ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಕೊಡಬೇಕು ಅನ್ನುವ ಉದ್ದೇಶದಿಂದ 150 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಆಸ್ಪತ್ರೆಯನ್ನ ಕಟ್ಟಲಾಗಿದ್ದರೂ ಗುಣಮಟ್ಟದ ಚಿಕಿತ್ಸೆ ಮರಿಚಿಕೆಯಾಗಿದೆ.

ಬ್ರೀಮ್ಸ್ ಆಸ್ಪತ್ರೆ ಆರು ವರ್ಷದ ಹಿಂದೆ ಉದ್ಘಾಟನೆ ಮಾಡಲಾಗಿದೆ. ಹೆರಿಗೆಯಾದ ಹೆಣ್ಣು ಮಕ್ಕಳಿಗೆ ಬಿಸಿನೀರು ಕೂಡಾ ಇಲ್ಲಿನ ಸಿಬ್ಬಂದಿಗಳು ಕೊಡುತ್ತಿಲ್ಲ. ಬಿಸಿ ನೀರು ಬೇಕಾದರೆ ರೋಗಿಯ ಸಂಬಂಧಿಗಳು ಹೊಟೇಲ್​ಗಳಿಗೆ ಹೋಗಿ ಬಿಸಿನೀರು ತಂದು ಹೆರಿಗೆಯಾದ ಹೆಣ್ಣು ಮಕ್ಕಳಿಗೆ ಕೊಡಬೇಕಾದ ಅನಿವಾರ್ಯತೆಯಿದೆ. ಇನ್ನೂ ಇಲ್ಲಿಗೆ ಬರುವ ಬಾಣಂತಿಯರು ಕುಡಿಯಲು ಮತ್ತು ಸ್ನಾನ ಮಾಡಲು ಕೂಡಾ ಬಿಸಿ ನೀರು ಕೊಡುತ್ತಿಲ್ಲ ಎಂದು ಇಲ್ಲಿನ ಸ್ಥಳೀಯರು ಅಳುವುತೋಡಿಕೊಳ್ಳುತ್ತಿದ್ದಾರೆ. ಬಾಣಂತಿಯರಿಗೆ ಬಿಸಿ ನೀರು ಕೊಡಿ ಎಂದು ಇಲ್ಲಿನ ಜನರು ಮನವಿ ಮಾಡುತ್ತಿದ್ದಾರೆ.

ಆಸ್ಪತ್ರೆ ಉದ್ಘಾಟನೆ ಮಾಡುವ ಮುನ್ನವೇ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ 20 ಕ್ಕೂ ಹೆಚ್ಚು ಸೋಲಾರ್ ವಾಟರ್ ಹೀಟರ್​ಗಳನ್ನ ಅಳವಡಿಸಲಾಗಿತ್ತು. ಇಲ್ಲಿ ಅಳವಡಿಸಿದ್ದ ಸೋಲಾರ್ ವಾಟರ್ ಹೀಟರ್​ನ ಗ್ಲಾಸ್​ ಅನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಇಲ್ಲಿನ ಸ್ಥಳೀಯರು ಹೇಳುತ್ತಿದ್ದಾರೆ. ಹೀಗಾಗಿ ಕಳೆದ ನಾಲ್ಕು ವರ್ಷದಿಂದ ಬಿಸಿ ನೀರು ಮಾತ್ರ ರೋಗಿಗಳಿಗೆ ಸೀಗುತ್ತಿಲ್ಲ. ಇದರ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಕೂಡ ತಲೆಕೆಡಿಸಿಕೊಂಡಿಲ್ಲ. ಪ್ರತಿ ನಿತ್ಯ ಜಿಲ್ಲೆಯಲ್ಲಿ ಇನ್ನೂರಕ್ಕೂ ಹೆಚ್ಚು ಸಾಮಾನ್ಯ ಹೆರಿಗೆ, ನೂರಕ್ಕೂ ಹೆಚ್ಚು ಶಸ್ತ್ರ ಚಿಕಿತ್ಸೆಯ ಮೂಲಕ ಹೆರಿಗೆಯಾಗುತ್ತಿದೆ.

ಹೆರಿಗೆಯಾದ ಹೆಣ್ಣು ಮಕ್ಕಳು ಅವರ ಆರೋಗ್ಯ ದೃಷ್ಟಿಯಿಂದ ಕೆಲ ದಿನಗಳ ಕಾಲ ಆರೋಗ್ಯ ಕೇಂದ್ರದಲ್ಲಿಯೇ ಇದ್ದು ಚಿಕಿತ್ಸೆ ಪಡೆದುಕೊಂಡು ಮನೆಗೆ ಹೋಗುತ್ತಾರೆ. ಆದರೆ ಇಲ್ಲಿ ಇರುವಷ್ಟು ದಿನವಾದರೂ ಬಾಣಂತಿಯರಿಗೆ ಬಿಸಿ ನೀರು ಪೂರೈಕೆ ಮಾಡುವುದು ಅಲ್ಲಿನ ವೈದ್ಯಾಧಿಕಾರಿ ಹಾಗೂ ಸಿಬ್ಬಂಧಿಯ ಕರ್ತವ್ಯವಾಗಿದೆ. ಈ ಕುರಿತು ಇಲ್ಲಿನ ವೈದ್ಯಾಧಿಕಾರಿಯನ್ನ ಬೀಸಿ ನೀರು ಕೊಡಿ ಎಂದು ಕೇಳಿದರೆ ಇಲ್ಲಿ ಬಿಸಿ ನೀರು ಬರುವುದಿಲ್ಲ ಹೊರಗಡೆಯಿಂದ ತಂದು ಬಳಸಿ ಎಂದು ಹೇಳುತ್ತಿದ್ದಾರೆ. ಇಲ್ಲಿನ ಅಧಿಕಾರಿಗಳು ಬಾಣಂತಿಯರಿಗೆ ಬೀಸಿ ನೀರು ಪೂರೈಕೆ ಮಾಡದೆ ಬಾಣಂತಿಯರ ಬದುಕಿನ ಜೊತೆಗೆ ಚಲ್ಲಾಟವಾಡುತ್ತಿದ್ದಾರೆ ಎಂದು ಬಾಣಂತಿಯರ ಪಾಲಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಈ ವಿಚಾರವಾಗಿ ಮಾತನಾಡಿದ ಬ್ರೀಮ್ಸ್ ನಿರ್ದೇಶಕ ಶಿವಕುಮಾರ್ ಶೆಟಿಗಾರ್, ನಾನು ಅಧಿಕಾರ ವಹಿಸಿಕೊಂಡು 20 ದಿನಗಳಾಗಿದ್ದು, ಇದರ ಬಗ್ಗೆ ವಿಚಾರಿಸಿ 2ರಿಂದ 3 ದಿನಗಳಲ್ಲಿ ಸರಿಪಡಿಸುತ್ತೇವೆ ಎನ್ನುತ್ತಾರೆ. ಬಾಣಂತಿಯರ ಆರೋಗ್ಯದ ಬಗ್ಗೆ ಸರಕಾರ ಅದೇಷ್ಟೇ ಕಾಳಜಿ ವಹಿಸುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಅನೇಕ ಸಮಸ್ಯೆಯನ್ನ ಅನುಭವಿಸುತ್ತಿದ್ದಾರೆ. ಈಗಲಾದರೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಬಾಣಂತಿಯರಿಗೆ ಬಿಸಿ ನೀರು ಕೊಡುವ ವ್ಯವಸ್ಥೆಯನ್ನ ಮಾಡಬೇಕೆಂದು ಇಲ್ಲಿನ ಜನರು ಸರಕಾರಕ್ಕೆ ವಿನಂತಿಸುತ್ತಿದ್ದಾರೆ.

ವರದಿಸುರೇಶ್ ನಾಯಕ್ ಟಿವಿ9 ಬೀದರ್

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ