AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್‌ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ: 2 ತಿಂಗಳ ಹಸುಗೂಸನ್ನ ಬಾವಿಗೆ ಬಿಸಾಡಿದ ಕಿರಾತಕರು

Bidar New: ಇಂದು ಅಮಾನವೀಯ ಕೃತ್ಯಕ್ಕೆ ಬೀದರ್‌ ಜಿಲ್ಲೆ ಸಾಕ್ಷಿಯಾಗಿದೆ. ಬಾವಿಯಲ್ಲಿ ಎರಡು ತಿಂಗಳ ಹಸುಗೂಸು ಪತ್ತೆಯಾದ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸದ್ಯ ಪೊಲೀಸರು ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ.

ಬೀದರ್‌ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ: 2 ತಿಂಗಳ ಹಸುಗೂಸನ್ನ ಬಾವಿಗೆ ಬಿಸಾಡಿದ ಕಿರಾತಕರು
ಪ್ರಾತಿನಿಧಿಕ ಚಿತ್ರImage Credit source: Getty images
ಸುರೇಶ್ ನಾಯಕ್
| Edited By: |

Updated on: Aug 09, 2026 | 10:37 PM

Share

ಬೀದರ್‌, ಆಗಸ್ಟ್​​ 09: ಬೀದರ್‌ (bidar) ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ಎರಡು ತಿಂಗಳ ಹಸುಗೂಸನ್ನ (baby) ಕಿರಾತಕರು ಬಾವಿಗೆ ಬಿಸಾಡಿದ್ದ ಘಟನೆ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಡೆದಿದ್ದೇನು?

ನಿನ್ನೆ ರಾತ್ರಿಯಿಂದ ಮಗು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಗುವಿನ ಹುಡುಕಾಟದಲ್ಲಿದ್ದರು. ಆದರೆ ಇಂದು ಸಾಯಂಕಾಲ ಗ್ರಾಮದ ಬಾವಿಯಲ್ಲಿ ಹಸುಗೂಸಿನ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ; ಹಿಟ್ ಆ್ಯಂಡ್ ರನ್​​ಗೆ ಬೈಕ್ ಸವಾರರಿಬ್ಬರು ಸಾವು

ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮಗುವಿನ ಕುಟುಂಬಸ್ಥರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಜಮೀನಿನಲ್ಲಿ ಕುರಿ ಮೇಯಿಸುವಾಗ ಹಾವು ಕಚ್ಚಿ ಕುರಿಗಾಹಿ ಸಾವು

ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದಾಗ ವಿಷಪೂರಿತ ಹಾವು ಕಚ್ಚಿ 28 ವರ್ಷದ ಯುವ ಕುರಿಗಾಹಿ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ತಾಲೂಕಿನ ನೆಗಳೂರು ಗ್ರಾಮದಲ್ಲಿ ನಡೆದಿದೆ. ನೆಗಳೂರು ಗ್ರಾಮದ ನಾಗರಾಜ್ ಕರಿಗಾರ (28) ಮೃತ ಯುವಕ. ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಉತ್ತಮ ಭವಿಷ್ಯ ರೂಪಿಸಿಕೊಳ್ಳುವಷ್ಟರಲ್ಲೇ ಯುವಕ ಸಾವು

ಮೃತ ನಾಗರಾಜ್ ಕಳೆದ ವಾರವಷ್ಟೇ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಯ ಪರೀಕ್ಷೆ ಬರೆದಿದ್ದರು. ಪರೀಕ್ಷೆಯಲ್ಲಿ ಶೇ. 75 ಕ್ಕೂ ಹೆಚ್ಚು ಅಂಕ ಗಳಿಸುವ ಮೂಲಕ ಉತ್ತೀರ್ಣರಾಗುವ ಭರವಸೆಯಲ್ಲಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ನಂದಿ ಹಿಲ್ಸ್​​ ಮಾನ್ಸೂನ್​ ಮ್ಯಾರಥಾನ್​ ವೇಳೆ ದುರಂತ ಅಂತ್ಯಕಂಡ ಕ್ರೀಡಾಪಟು: ಹೃದಯಾಘಾತದಿಂದ ಸಾವು?

ಪೊಲೀಸ್ ಇಲಾಖೆಗೆ ಸೇರಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಕನಸು ಕಾಣುತ್ತಿದ್ದ ಯುವಕ, ಫಲಿತಾಂಶ ಬರುವ ಮುನ್ನವೇ ಇಹಲೋಕ ತ್ಯಜಿಸಿದ್ದು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಶೋಕಾವೃತ ವಾತಾವರಣ ನಿರ್ಮಿಸಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಅಧಿಕಾರಿಗಳಿಗೆ ಜೋಶಿ ಸೂಚನೆ
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ