
ಬೀದರ್, ಆಗಸ್ಟ್ 09: ಬೀದರ್ (bidar) ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ಎರಡು ತಿಂಗಳ ಹಸುಗೂಸನ್ನ (baby) ಕಿರಾತಕರು ಬಾವಿಗೆ ಬಿಸಾಡಿದ್ದ ಘಟನೆ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿನ್ನೆ ರಾತ್ರಿಯಿಂದ ಮಗು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಗುವಿನ ಹುಡುಕಾಟದಲ್ಲಿದ್ದರು. ಆದರೆ ಇಂದು ಸಾಯಂಕಾಲ ಗ್ರಾಮದ ಬಾವಿಯಲ್ಲಿ ಹಸುಗೂಸಿನ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ: ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ; ಹಿಟ್ ಆ್ಯಂಡ್ ರನ್ಗೆ ಬೈಕ್ ಸವಾರರಿಬ್ಬರು ಸಾವು
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮಗುವಿನ ಕುಟುಂಬಸ್ಥರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಂಬಂಧ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದಾಗ ವಿಷಪೂರಿತ ಹಾವು ಕಚ್ಚಿ 28 ವರ್ಷದ ಯುವ ಕುರಿಗಾಹಿ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ತಾಲೂಕಿನ ನೆಗಳೂರು ಗ್ರಾಮದಲ್ಲಿ ನಡೆದಿದೆ. ನೆಗಳೂರು ಗ್ರಾಮದ ನಾಗರಾಜ್ ಕರಿಗಾರ (28) ಮೃತ ಯುವಕ. ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮೃತ ನಾಗರಾಜ್ ಕಳೆದ ವಾರವಷ್ಟೇ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಬರೆದಿದ್ದರು. ಪರೀಕ್ಷೆಯಲ್ಲಿ ಶೇ. 75 ಕ್ಕೂ ಹೆಚ್ಚು ಅಂಕ ಗಳಿಸುವ ಮೂಲಕ ಉತ್ತೀರ್ಣರಾಗುವ ಭರವಸೆಯಲ್ಲಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್ ವೇಳೆ ದುರಂತ ಅಂತ್ಯಕಂಡ ಕ್ರೀಡಾಪಟು: ಹೃದಯಾಘಾತದಿಂದ ಸಾವು?
ಪೊಲೀಸ್ ಇಲಾಖೆಗೆ ಸೇರಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಕನಸು ಕಾಣುತ್ತಿದ್ದ ಯುವಕ, ಫಲಿತಾಂಶ ಬರುವ ಮುನ್ನವೇ ಇಹಲೋಕ ತ್ಯಜಿಸಿದ್ದು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ತೀವ್ರ ಶೋಕಾವೃತ ವಾತಾವರಣ ನಿರ್ಮಿಸಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.