AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳಮುಖಿಯರಿಗೂ ತಟ್ಟಿದ ಲಾಕ್​ಡೌನ್​ ಬಿಸಿ, ಅವರ ಬದುಕು ದುಸ್ತರವಾಯ್ತು

ಕೊರೊನಾ ಮಹಾಮಾರಿಯ ಹರುಡುವಿಕೆಯನ್ನು ತಡೆಗಟ್ಟಲು ಸರ್ಕಾರ ಘೋಷಿಸಿದ ಲಾಕ್​ಡೌನ್​ ಕ್ರಮದಿಂದಾಗಿ ಅನೇಕ ವರ್ಗಗಳು ಸಂಕಷ್ಟಕ್ಕೆ ಸಿಲುಕಿವೆ. ಈ ವರ್ಗಗಳಲ್ಲಿ ಮಂಗಳಮುಖಿ ಸಮಾಜವೂ ಒಂದು. ಇಷ್ಟು ದಿನ ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರಿಗೆ ಲಾಕ್​ಡೌನ್​ನಿಂದ ಬದುಕು ನಡೆಸಲು ಕಷ್ಟವಾಗುತ್ತಿದೆ. ಬರೀ ಬೆಂಗಳೂರಿನಂಥ ಮಹಾನಗರವಲ್ಲದೆ ಕರ್ನಾಟಕದ ಗಡಿ ಜಿಲ್ಲೆ ಬೀದರ್​ನಲ್ಲಿರುವ ಮಂಗಳಮುಖಿಯರಿಗೂ ಇಂಥ ಕಷ್ಟದ ಪರಿಸ್ಥಿತಿ ಬಂದೊದಗಿದೆ. ಬೀದರ್ ಜಿಲ್ಲೆಯ ಹಲವು ಭಾಗಗಳಲ್ಲಿ ಸುಮಾರು 60 ಕ್ಕಿಂತಲ್ಲೂ ಹೆಚ್ಚು ತೃತೀಯಲಿಂಗಿಯರು ಜೀವನ ಸಾಗಿಸುತ್ತಿದ್ದಾರೆ. ಹಲವರು ಬಾಡಿಗೆ ಮನೆಗಳಲ್ಲಿ ವಾಸವಾಗಿದ್ದು ಈಗ ಲಾಕ್​ಡೌನ್​ನಿಂದ ಆದಾಯಕ್ಕೆ ಕಲ್ಲು ಬಿದ್ದು […]

ಮಂಗಳಮುಖಿಯರಿಗೂ ತಟ್ಟಿದ ಲಾಕ್​ಡೌನ್​ ಬಿಸಿ, ಅವರ ಬದುಕು ದುಸ್ತರವಾಯ್ತು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 09, 2020 | 6:25 PM

Share

ಕೊರೊನಾ ಮಹಾಮಾರಿಯ ಹರುಡುವಿಕೆಯನ್ನು ತಡೆಗಟ್ಟಲು ಸರ್ಕಾರ ಘೋಷಿಸಿದ ಲಾಕ್​ಡೌನ್​ ಕ್ರಮದಿಂದಾಗಿ ಅನೇಕ ವರ್ಗಗಳು ಸಂಕಷ್ಟಕ್ಕೆ ಸಿಲುಕಿವೆ. ಈ ವರ್ಗಗಳಲ್ಲಿ ಮಂಗಳಮುಖಿ ಸಮಾಜವೂ ಒಂದು. ಇಷ್ಟು ದಿನ ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ಮಂಗಳಮುಖಿಯರಿಗೆ ಲಾಕ್​ಡೌನ್​ನಿಂದ ಬದುಕು ನಡೆಸಲು ಕಷ್ಟವಾಗುತ್ತಿದೆ. ಬರೀ ಬೆಂಗಳೂರಿನಂಥ ಮಹಾನಗರವಲ್ಲದೆ ಕರ್ನಾಟಕದ ಗಡಿ ಜಿಲ್ಲೆ ಬೀದರ್​ನಲ್ಲಿರುವ ಮಂಗಳಮುಖಿಯರಿಗೂ ಇಂಥ ಕಷ್ಟದ ಪರಿಸ್ಥಿತಿ ಬಂದೊದಗಿದೆ.

ಬೀದರ್ ಜಿಲ್ಲೆಯ ಹಲವು ಭಾಗಗಳಲ್ಲಿ ಸುಮಾರು 60 ಕ್ಕಿಂತಲ್ಲೂ ಹೆಚ್ಚು ತೃತೀಯಲಿಂಗಿಯರು ಜೀವನ ಸಾಗಿಸುತ್ತಿದ್ದಾರೆ. ಹಲವರು ಬಾಡಿಗೆ ಮನೆಗಳಲ್ಲಿ ವಾಸವಾಗಿದ್ದು ಈಗ ಲಾಕ್​ಡೌನ್​ನಿಂದ ಆದಾಯಕ್ಕೆ ಕಲ್ಲು ಬಿದ್ದು ಕೇವಲ ಬಾಡಿಗೆಯಷ್ಟೇ ಅಲ್ಲದೆ, ಹಸಿವು ನೀಗಿಸಿಕೊಳ್ಳುವುದಕ್ಕೂ ಪರದಾಡುವಂತಾಗಿದೆ. ಲಾಕ್​ಡೌನ್ ಕೊಂಚ ಸಡಿಲಿಕೆಯಾಗಿದ್ದರೂ ಕೊರೊನಾ ಭಯದಿಂದ ಜನರು ಜಿಲ್ಲೆಯಲ್ಲಿ ಹೆಚ್ಚು ಓಡಾಡುತ್ತಿಲ್ಲ. ಇದರಿಂದ ಇವರ ಸಂಪಾದನೆ ಬಹಳಷ್ಟು ಇಳಿಕೆ ಕಂಡಿದೆ. 

ಜೊತೆಗೆ ಇವರಿಂದ ಸೋಂಕು ಹರಡುವ ಸಾಧ್ಯತೆಯಿದೆ ಎಂಬ ವದಂತಿಗಳೂ ಹರಿದಾಡುತ್ತಿರುವುದರಿಂದ ಇವರ ಹತ್ತಿರ ಬರಲು ಜನ ಹಿಂಜರಿಯುತ್ತಾರೆ. ಇದರ ಜೊತೆ ಪೊಲೀಸರು ಮತ್ತು ಜಿಲ್ಲಾಡಳಿತವು ಭಿಕ್ಷಾಟನೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂಬ ಸೂಚನೆ ನೀಡಿರುವುದರಿಂದ ಇವರಿಗೆ ದಿಕ್ಕೇ ತೋಚದಂತಾಗಿದೆ.

ಕೆಲವು ಸಮಾಜಸೇವಕರು ಮತ್ತು ಜಿಲ್ಲಾಡಳಿತವು ಲಾಕ್​ಡೌನ್​ ಸಮಯದಲ್ಲಿ ಇವರ ನೆರವಿಗೆ ಮುಂದೆ ಬಂದವು, ರೇಷನ್ ಕಿಟ್ ನೀಡಿದರು. ಆದರೆ ನೆರವಿನ ಪ್ರಮಾಣ ಅಷ್ಟಕಷ್ಟೆ ಆಗಿದೆ. ಹಾಗಾಗಿ ಈಗ ಇವರಿಗೆ ಉಳಿದಿರುವ ಒಂದೇ ಪರಿಹಾರ; ಸರ್ಕಾರದ ನೆರವು. ಸರ್ಕಾರ ಕೂಡ ತನ್ನ ಕಡೆಯಿಂದ ಈ ಸಮಾಜಕ್ಕೆ 500 ರೂಪಾಯಿಗಳ ಮಾಸಾಶನ ಘೋಷಣೆ ಮಾಡಿದೆ. ಆದರೆ ವಾಸ್ತವದಲ್ಲಿ ಇದರ ಲಾಭ ಕೆಲವರಿಗೆ ಮಾತ್ರ ದೊರಕುತ್ತಿದೆ. ಹಾಗಾಗಿ ಈಗಲಾದ್ರೂ ಸರ್ಕಾರ ಅವರ ಸಮಸ್ಯೆಗಳನ್ನು ಅರಿತು ಅವರ ನೆರವಿಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕಾಗಿದೆ -ಸುರೇಶ್​ ನಾಯಕ್

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ