AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಮನ್ನಳ್ಳಿ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಅಪಘಾತ, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

ಕರ್ನಾಟಕದಲ್ಲಿ ಅಪಘಾತ ಮತ್ತು ಅಪಘಾತದಲ್ಲಿ ಜೀವಹಾನಿಯಾಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಲೇ ಇಲ್ಲ. ಸಂಚಾರ ನಿಯಮ ಪಾಲನೆ ಮಾಡುವಂತೆ ಪೊಲೀಸ್ ಇಲಾಖೆ ಜಾಗೃತಿ ಮೂಡಿಸುತ್ತಿದ್ದರೂ ಅಪಘಾತಗಳು ಸಂಭಿವಿಸುತ್ತಲೇ ಇವೆ. ಇದೀಗ, ಬೀದರ್​ ಜಿಲ್ಲೆಯಲ್ಲಿ ಲಾರಿ ಡಿಕ್ಕಿ ಹೊಡೆದು ಆಟೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬೀದರ್: ಮನ್ನಳ್ಳಿ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಅಪಘಾತ, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವು (ಸಾಂದರ್ಭಿಕ ಚಿತ್ರ)
ಸುರೇಶ ನಾಯಕ
| Edited By: |

Updated on:Aug 28, 2023 | 7:09 PM

Share

ಬೀದರ್, ಆಗಸ್ಟ್ 28: ಜಿಲ್ಲೆಯ (Bidar) ಬಸವಕಲ್ಯಾಣ ತಾಲೂಕಿನಲ್ಲಿ ಲಾರಿ ಮತ್ತು ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಶ್ರಾವಣ ಸೋಮವಾರ ಹಿನ್ನೆಲೆ ಅಮೃತಕುಂಡಕ್ಕೆ ಆಗಮಿಸಿ ವಾಪಸ್ ಆಗುತ್ತಿದ್ದಾಗ ಮನ್ನಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 65 ರಲ್ಲಿ ಈ ಅಪಘಾತ (Accident) ಸಂಭವಿಸಿದೆ.

ಶ್ರಾವಣ ಸೋಮವಾರ ಹಿನ್ನೆಲೆ ಮಹಾರಾಷ್ಟ್ರ ಮೂಲದ ಆರು ಮಂದಿ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಬಳಿ ಇರುವ ಐತಿಹಾಸಿಕ ಶ್ರೀ ಕ್ಷೇತ್ರ ಅಮೃತಕುಂಡಕ್ಕೆ ಆಗಮಿಸಿದ್ದರು. ದೇವರ ದರ್ಶನ ಪಡೆದು ಆಟೋ ಮೂಲಕ ವಾಪಸ್ ಆಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ದೇವನಹಳ್ಳಿ: ಏರ್ಪೋರ್ಟ್ ಫ್ಲೈ ಓವರ್ ಮೇಲೆ ಕಾರು, ಬೈಕ್​ ಭೀಕರ ಅಪಘಾತ; ದೃಶ್ಯ ಕಾರಿನ ಕ್ಯಾಮೆರಾದಲ್ಲಿ ಸೆರೆ

ಪರಿಣಾಮ ಆಟೋದಲ್ಲಿದ್ದವರ ಪೈಕಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ಉಳಿದ ಐವರನ್ನು ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಮೂವರು ದಾರಿಮಧ್ಯೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತಪಟ್ಟವರು ಮಹಾರಾಷ್ಟ್ರದ ಮುರುಮ್ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. ಪರಿಮಳಾ(35), ಸುನೀಲ್​(35), ಪೂಜಾ(17), ಅನುಸುಬಾಯಿ(65) ಮೃತ ದುರ್ದೈವಿಗಳು.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಸವಕಲ್ಯಾಣ ಸಂಚಾರಿ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕರ್ನಾಟಕದಲ್ಲಿ ಅಪಘಾತ ಮತ್ತು ಅಪಘಾತದಲ್ಲಿ ಜೀವಹಾನಿಯಾಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಲೇ ಇಲ್ಲ. ಸಂಚಾರ ನಿಯಮ ಪಾಲನೆ ಮಾಡುವಂತೆ ಪೊಲೀಸ್ ಇಲಾಖೆ ಜಾಗೃತಿ ಮೂಡಿಸುತ್ತಿದ್ದರೂ ಅಪಘಾತಗಳು ಸಂಭಿವಿಸುತ್ತಲೇ ಇವೆ. ಸಂಚಾರ ನಿಯಮ ಉಲ್ಲಂಘನೆಯೇ ಸಾವುಗಳಿಗೆ ಕಾರಣ ಎಂದು ಹೇಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Mon, 28 August 23

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More