AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಕೇಂದ್ರ ಸಚಿವರಾಗಿ ಏನು ಪ್ರಯೋಜನ: ಭಗವಂತ ಖೂಬಾಗೆ ರೈತನ ಪ್ರಶ್ನೆ

ಬೆಳೆಗಳಿಗೆ ಡ್ರೋಣ್ ಮೂಲಕ ಗೊಬ್ಬರ ಹಾಗೂ ಕೀಟನಾಶಕ ಸಿಂಪಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮುಂದಿನ ಬಜೆಟ್‌ನಲ್ಲಿ ಗ್ರಾಮ ಮಟ್ಟದಲ್ಲೂ ಡ್ರೋಣ್‌ ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಿದೆ ಎಂದು ಸಚಿವರು ನುಡಿದರು.

ನೀವು ಕೇಂದ್ರ ಸಚಿವರಾಗಿ ಏನು ಪ್ರಯೋಜನ: ಭಗವಂತ ಖೂಬಾಗೆ ರೈತನ ಪ್ರಶ್ನೆ
ಭಗವಂತ ಖೂಬಾ
TV9 Web
| Edited By: |

Updated on:Dec 26, 2021 | 8:14 AM

Share

ಬೀದರ್: ಪ್ರತಾಪನಗರದ ಫಾಳೆ ಸಭಾಂಗಣದಲ್ಲಿ ನಡೆದ ಸಂವಾದದಲ್ಲಿ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ವಿರುದ್ಧ ಬೀದರ್​ ರೈತರು ಆಕ್ರೋಶ ವ್ಯಕ್ತಪಡಿಸಿದರು. ಕೃಷಿಯಲ್ಲಿ ನೂತನ ತಾಂತ್ರಿಕ ಪ್ರಗತಿ ಕುರಿತ ಸಂವಾದದಲ್ಲಿ ಪಾಲ್ಗೊಂಡಿದ್ದ ರೈತರೊಬ್ಬರು ಕೇಂದ್ರ ಸಚಿವ ಭಗವಂತ ಖೂಬಾ ಬಳಿ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದರು. ರೈತರೊಂದಿಗೆ ಮಾತನಾಡಲು ಕೇಂದ್ರ ಸಚಿವರು ಉತ್ಸಾಹ ತೋರದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಅವರು, ‘ನೀವು ಕೇಂದ್ರ ಸಚಿವರಾಗಿ ಏನು ಪ್ರಯೋಜನ’ ಎಂದು ಪ್ರಶ್ನಿಸಿದರು. ‘ಪ್ರಧಾನಮಂತ್ರಿ ಫಸಲ್​ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ್ದೆ. ಬೆಳೆಹಾನಿಯಾಗಿದ್ದರೂ ತಕ್ಕ ಪರಿಹಾರ ನೀಡುತ್ತಿಲ್ಲ. ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಬ್ಬರು ಸಚಿವರಿದ್ದರೂ ಸ್ಪಂದಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಚಟುವಟಿಕೆಗೆ ಡ್ರೋಣ್​ ಬಳಕೆಗೆ ಅನುಮತಿ ಬೆಳೆಗಳಿಗೆ ಡ್ರೋಣ್ ಮೂಲಕ ಗೊಬ್ಬರ ಹಾಗೂ ಕೀಟನಾಶಕ ಸಿಂಪಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮುಂದಿನ ಬಜೆಟ್‌ನಲ್ಲಿ ಗ್ರಾಮ ಮಟ್ಟದಲ್ಲೂ ಡ್ರೋಣ್‌ ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಿದೆ. ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆಯಬೇಕು ಎನ್ನುವುದು ಸರ್ಕಾರ ಉದ್ದೇಶವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಈಗಾಗಲೇ ಡ್ರೋಣ್​ಗಳನ್ನು ಯಶಸ್ವಿಯಾಗಿ ಬಳಸಲಾಗುತ್ತಿದೆ. ಆದರೆ ಕೃಷಿ ಕ್ಷೇತ್ರದಲ್ಲಿ ಬಳಸಲು ರೈತರಿಗೆ ಅನುಮತಿ ಇರಲಿಲ್ಲ. ಕೃಷಿ ಕ್ಷೇತ್ರದಲ್ಲಿ ಕಾರ್ಮಿಕರ ಸಮಸ್ಯೆ ಪರಿಹರಿಸಲು ಹಾಗೂ ಖರ್ಚು ಕಡಿಮೆ ಮಾಡಲು ಕೀಟನಾಶಕ ಹಾಗೂ ಗೊಬ್ಬರ ಸಿಂಪಡಣೆಗಾಗಿ ಡ್ರೋಣ್ ಬಳಕೆಗೆ ಅವಕಾಶ ನೀಡಲಾಗಿದೆ’ ಎಂದು ಹೇಳಿದರು.

ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ಹೊಂದಿಕೊಂಡು ರೈತರು ಕೃಷಿ ಮಾಡಬೇಕು. ಆ ಮೂಲಕ ಇನ್ನಷ್ಟು ಪ್ರಗತಿ ಸಾಧಿಸಲು ಪ್ರಯತ್ನಿಸಬೇಕು. ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ವಿವಿಧ ಇಲಾಖೆಗಳ ಮೂಲಕ ರೈತರ ಮನೆ ಬಾಗಿಲಿಗೆ ತಲುಪಿಸಲು ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರವು ಶೇ 30ರ ರಿಯಾಯಿತಿ ದರದಲ್ಲಿ ರೈತರಿಗೆ ಸೌರಶಕ್ತಿ ಪರಿಕರಗಳನ್ನು ವಿತರಿಸಲಿದೆ. ರಾಷ್ಟ್ರದ 10.5 ಕೋಟಿ ರೈತರ ಖಾತೆಗಳಿಗೆ ಬೆಳೆ ವಿಮೆ ಪರಿಹಾರ ಸಿಕ್ಕಿದೆ ಎಂದರು.

ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎನ್‌.ಕಟ್ಟಿಮನಿ, ಸಂಶೋಧನಾ ವಿಭಾಗದ ನಿರ್ದೇಶಕ ಡಾ.ಬಿ.ಕೆ.ದೇಸಾಯಿ, ವಿಸ್ತರಣಾ ಅಧಿಕಾರಿ ಡಾ.ಡಿ.ಎಂ.ಚಂದರಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್.ಸತ್ಯಭೂಷಣ ಜೈನ್ ಇತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Business Idea: ವರ್ಷವಿಡೀ ಬೇಡಿಕೆ ಇರುವ ಈ ಕೃಷಿ ಉತ್ಪನ್ನದ ಮೂಲಕ 15 ಲಕ್ಷ ರೂಪಾಯಿ ತನಕ ಗಳಿಸಿ ಇದನ್ನೂ ಓದಿ: ಏಳು ಕೃಷಿ ಉತ್ಪನ್ನಗಳ ಫ್ಯೂಚರ್​ ಕಾಂಟ್ರ್ಯಾಕ್ಟ್​​ ವಹಿವಾಟು ಒಂದು ವರ್ಷ ನಿಷೇಧಿಸಿ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ

Published On - 8:28 pm, Sat, 25 December 21

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ