ವರ್ತೂರ್​​ ಸಂತೋಷ್ ಬಂಧನ: ಯಾರೇ ಇದ್ದರೂ ಕಾನೂನು ಕ್ರಮ ಜರುಗಿಸಲಾಗುವುದು: ಸಚಿವ ಈಶ್ವರ್ ಖಂಡ್ರೆ

ಬಿಗ್​ಬಾಸ್​​ ಸ್ಪರ್ಧಿ ವರ್ತೂರ್ ಸಂತೋಷ್​ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದಾರೆಂಬ ದೂರು ಇತ್ತು. ಆ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ವನ್ಯ ಜೀವಿಗಳ ಕಾನೂನಿನ ಆಧಾರದ ಮೇಲೆ ಅರೆಸ್ಟ್ ಮಾಡಲಾಗಿದೆ ಎಂದು ಅರಣ್ಯ ಇಲಾಖೆ  ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಇದರಲ್ಲಿ ಯಾರೇ ಇದ್ದರೂ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ವರ್ತೂರ್​​ ಸಂತೋಷ್ ಬಂಧನ: ಯಾರೇ ಇದ್ದರೂ ಕಾನೂನು ಕ್ರಮ ಜರುಗಿಸಲಾಗುವುದು: ಸಚಿವ ಈಶ್ವರ್ ಖಂಡ್ರೆ
ವರ್ತೂರ್ ಸಂತೋಷ, ಸಚಿವ ಈಶ್ವರ್ ಖಂಡ್ರೆ
Edited By:

Updated on: Oct 23, 2023 | 3:07 PM

ಬೀದರ್​​, ಅಕ್ಟೋಬರ್​​​​ 23: ಬಿಗ್​ಬಾಸ್​​ ಸ್ಪರ್ಧಿ ವರ್ತೂರ್ ಸಂತೋಷ್ (Varthur Santhosh)​​ ಅವರ ಲಾಕೆಟ್​​ನಲ್ಲಿ ಹುಲಿಯ ಉಗುರು ಪತ್ತೆ ಆಗಿರುವುದರಿಂದ ಅವರನ್ನು ಬಂಧಿಸಲಾಗಿದೆ. ಸದ್ಯ ಈ ಕುರಿತಾಗಿ ನಗರದಲ್ಲಿ ಅರಣ್ಯ ಇಲಾಖೆ  ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿದ್ದು, ಸಂತೋಷ್​ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದಾರೆಂಬ ದೂರು ಇತ್ತು. ಆ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ವನ್ಯ ಜೀವಿಗಳ ಕಾನೂನಿನ ಆಧಾರದ ಮೇಲೆ ಅರೆಸ್ಟ್ ಮಾಡಲಾಗಿದೆ. ಇದರಲ್ಲಿ ಯಾರೇ ಇದ್ದರೂ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ವನ್ಯಜೀವಿಗಳ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ. ನನಗೆ ನಮ್ಮ ಅಧಿಕಾರಿಗಳು ದೂರವಾಣಿ ಮೂಲಕ ಮಾಹಿತಿ ಕೊಟ್ಟಿದಾರೆ. ತನಿಖೆ ನಡೆಸಿ ಹುಲಿಯ ಉಗುರು ಎಂದು ಗುರುತಿಸಿದ ಮೇಲೆ ಕಾನೂನು ರೀತಿ ಕ್ರಮ ಜರುಗಿಸುತ್ತಾರೆ ಎಂದರು.

ಇದನ್ನೂ ಓದಿ: ವರ್ತೂರು ಸಂತೋಷ್ ಬಂಧನದ ಹಿಂದೆ ಇದೆ ಷಡ್ಯಂತ್ರ?

ಕಳ್ಳಬೇಟೆಗಳ ಮೂಲಕ ಈ ರೀತಿ ಮಾರಾಟ ಆಗಿರಬಹುದು. ದಾಂಡೆಲಿಯಲ್ಲಿ ಇಂತಹ ಕಳ್ಳಬೇಟೆ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಅರಣ್ಯ ಇಲಾಖೆ ಇಂತಹ ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ. ಅಧಿಕಾರಿಗಳಿಗೆ ಸಂಪೂರ್ಣವಾದ ಅಧಿಕಾರ ಕೊಡಲಾಗಿದೆ. ಯಾವುದೇ ರೀತಿಯ ಒತ್ತಡಕ್ಕೊಳಗಾಗದೇ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಸಂತೋಷ್ ಪರ ವಕೀಲ ನಟರಾಜ್ ಹೇಳಿದ್ದಿಷ್ಟು

ಸಂತೋಷ್ ಪರ ವಕೀಲ ನಟರಾಜ್​ ಟಿವಿ9 ಜೊತೆ ಮಾತನಾಡಿದ್ದು, ರಾತ್ರಿ 10.30ಕ್ಕೆ ನನಗೆ ಅವರ ದೊಡ್ಡಪ್ಪ ಕರೆ ಮಾಡಿ ತಿಳಿಸಿದರು. ಈ ರೀತಿ ಕಗ್ಗಲೀಪುರ ಅರಣ್ಯಾಧಿಕಾರಿಗಳು ಬಂಧನ ಮಾಡಿದ್ದಾರೆ ಅಂತ ತಿಳಿಸಿದರು. ರಾತ್ರಿಯೇ ತನಿಖಾಧಿಕಾರಿಯನ್ನು ಭೇಟಿ ಮಾಡಿದೆ. ಬೆಳಗ್ಗೆ 10.30 ಗೆ ಬನ್ನಿ ಎಂದು ಹೇಳಿದ್ದರು.

ಇದನ್ನೂ ಓದಿ: Bigg Boss Kannada: ಹುಲಿಯುಗುರು ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಕನ್ನಡ ಸ್ಪರ್ಧಿ ವರ್ತೂರು ಸಂತೋಷ್ ಬಂಧಿಸಿದ ಅರಣ್ಯಾಧಿಕಾರಿಗಳು

ರಾತ್ರಿ ಸಂತೋಷ್​ರನ್ನು ಭೇಟಿ ಮಾಡಿದ್ದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ನಾನ್ ಬೇಲಬಲ್ ಸೆಕ್ಷನ್ ಆಗಿದೆ. ಎರಡು ದಿನ ಕೋರ್ಟ್ ರಜೆ ಇದೆ ಹೀಗಾಗಿ ಜಡ್ಜ್ ಮನೆಗೆ ಪ್ರೊಡ್ಯೂಸ್ ಮಾಡುತ್ತಾರೆ. ಬೆಂಗಳೂರು ಎಸಿಜೆಂಎಂ ಕೋರ್ಟ್​ನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸುತ್ತಾರೆ. ನಾನು 25 ವರ್ಷದಿಂದಲೂ ಫ್ಯಾಮಿಲಿ ಫ್ರೆಂಡ್ ಕೂಡ ಹೌದು. ಹಾಜರು ಪಡಿಸಿದ ತಕ್ಷಣವೇ ನಾವು ಕೂಡ ಬೇಲ್​ಗೆ ಅಪ್ಲೈ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಂತೋಷ್​ನನ್ನು ಜಡ್ಜ್​ ನಿವಾಸಕ್ಕೆ ಕರೆದೊಯ್ದ ಅರಣ್ಯಾಧಿಕಾರಿಗಳು

ಸದ್ಯ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್​ರನ್ನು ಕೋರಮಂಗಲದ ಎನ್​ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಅರಣ್ಯಾಧಿಕಾರಿಗಳು ಕರೆದೊಯ್ದಿದ್ದಾರೆ. ಈ ವೇಳೆ ಮಾಸ್ಕ್ ಮತ್ತು ಕ್ಯಾಪ್ ಧರಿಸಿ ಅರಣ್ಯ ಇಲಾಖೆಯ ವಾಹನದಲ್ಲಿ ವರ್ತೂರು ಸಂತೋಷ್ ತೆರಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:05 pm, Mon, 23 October 23

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us