
ಬೀದರ್, ಜುಲೈ 06: ಸಂಕಷ್ಟದಲ್ಲಿರುವ ಹೆಣ್ಣುಮಕ್ಕಳ ರಕ್ಷಣೆ ಮತ್ತು ಆಸರೆಗಾಗಿಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಸರ್ಕಾರ ಅತ್ಯಂತ ಮಹತ್ವಾಕಾಂಕ್ಷೆಯ ‘ಅಕ್ಕ ಪಡೆ’ (Akka pade) ಯೋಜನೆಯನ್ನು ಜಾರಿಗೆ ತಂದಿದೆ. 2023ರಲ್ಲಿ ಈ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದಿದೆ. ಮಹಿಳೆಯರು, ಹೆಣ್ಣುಮಕ್ಕಳ ರಕ್ಷಣೆ ಮತ್ತು ಜಾಗೃತಿಗಾಗಿ ಮೂಡಿಸುವ ಒಂದು ವಿಶೇಷ ಕಾರ್ಯಪಡೆಯಾಗಿದೆ. ಅಷ್ಟೇ ಅಲ್ಲದೆ ತುರ್ತು ಸಂದರ್ಭಗಳಲ್ಲಿ ತಕ್ಷಣವೇ ನೆರವಿಗೆ ಧಾವಿಸುತ್ತದೆ.
ಇದನ್ನೂ ಓದಿ: ಮೋಡ ಬಿತ್ತನೆಗೆ ಚಾಲನೆ ಬೆನ್ನಲ್ಲೇ ಸುರಿದ ಮಳೆ: ಪ್ರಯತ್ನ ಫಲ ನೀಡಿದೆ ಎಂದ ಶಾಸಕ; ರೈತರೂ ಖುಷ್
ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮಹಿಳೆಯರ ಸುರಕ್ಷತೆಗಾಗಿ ಈ ಅಕ್ಕ ಪಡೆಯನ್ನ ಜಾರಿಗೆ ಬರುತ್ತಿದ್ದಾರೆ. ಅದರ ಭಾಗವಾಗಿ ಇಂದು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಅಕ್ಕ ಪಡೆ ಕಾರ್ಯಕ್ರಮಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಹೆಣ್ಣಂದ್ರೆ ಶಕ್ತಿ, ಹೆಣ್ಣಂದ್ರೆ ಒಗ್ಗಟ್ಟು, ಹೆಣ್ಣು ಅಂದರೆ ಭರವಸೆ. ನಾರಿಶಕ್ತಿ ಈ ದೇಶದ ಶಕ್ತಿಯಾಗಿದೆ. ರಾಜ್ಯದಲ್ಲಿ ಮಹಿಳೆಯರು ಬೆಳೆದುಬಂದ ಇತಿಹಾಸ ನೋಡಿದ್ದೇವೆ. ಅಕ್ಕಪಡೆಗೆ ನಾನು ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಹೋರಾಟ, ನಿಮ್ಮ ಧೈರ್ಯ, ನಿಮ್ಮ ಸಾಹಸಕ್ಕೆ ಫಲ ಸಿಗುತ್ತೆ. ನಿಮ್ಮ ಸಂಘಟನೆ ಪ್ರತಿ ಪಂಚಾಯಿತಿಗೂ ವಿಸ್ತರಣೆಯಾಗಬೇಕು. ಭಾರತ್ ಜೋಡೋ ಯುವಶಕ್ತಿ ಸಂಘವನ್ನು ಮಾಡುತ್ತಿದ್ದೇವೆ. ಅಕ್ಕ ಪಡೆ ಜೊತೆಗೆ ನಾನು, ಸರ್ಕಾರ ಇರುತ್ತೆ ಎಂದು ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:19 pm, Mon, 6 July 26