AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ, ಭೌತಶಾಸ್ತ್ರ ಕಡ್ಡಾಯವಲ್ಲ -AICTE

BE - AICTE | ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ ಪದವಿಪೂರ್ವ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜುಗಳಿಗೆ ಪ್ರವೇಶಪಡೆಯಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊಂದಿರಬೇಕಿಲ್ಲ.

ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ, ಭೌತಶಾಸ್ತ್ರ ಕಡ್ಡಾಯವಲ್ಲ -AICTE
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on: Mar 12, 2021 | 12:28 PM

Share

ಬೆಂಗಳೂರು: ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳ ವ್ಯಾಸಂಗ ಕಡ್ಡಾಯವಲ್ಲ. ಈ ಹಿಂದೆ ಎಂಜಿನಿಯರಿಂಗ್ ಪ್ರವೇಶಕ್ಕೆ ಗಣಿತಶಾಸ್ತ್ರ, ರಸಾಯನಶಾಸ್ತ್ರ & ಭೌತಶಾಸ್ತ್ರ ಕಡ್ಡಾಯವಾಗಿತ್ತು. ಆದ್ರೆ ಈಗ AICTE (All India Council For Technical Education) ಆ ನಿಯಮವನ್ನ ಸಡಿಲ ಮಾಡಿದೆ. ಹೀಗಾಗಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಿದ್ದ ನಿಯಮ ಸಡಿಲಗೊಂಡಿದೆ. ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಗಣಿತಶಾಸ್ತ್ರ, ರಸಾಯನಶಾಸ್ತ್ರ ಕಡ್ಡಾಯವಲ್ಲ. ಜೊತೆಗೆ ಬೇರೆ ವಿಭಾಗದಲ್ಲಿ ವ್ಯಾಸಂಗ ಮಾಡಿದವರಿಗೂ ನಿಯಮ ಸಡಿಲ ಮಾಡಿ ಅವಕಾಶ ನೀಡಲಾಗಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ ಪದವಿ ಪೂರ್ವ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜುಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊಂದಿರಬೇಕಿಲ್ಲ. 2021-22ರ ಶೈಕ್ಷಣಿಕ ವರ್ಷದಿಂದ ಗಣಿತ ಮತ್ತು ಭೌತಶಾಸ್ತ್ರ ಈ ಎರಡೂ ವಿಷಯಗಳನ್ನು ವ್ಯಾಸಂಗ ಮಾಡದೇ ಇದ್ದರೂ ನಾಲ್ಕು ವರ್ಷದ ಬಿಇ ವ್ಯಾಸಂಗ ಮಾಡಬಹುದು. ಸದ್ಯ ಈಗ ಎಐಸಿಟಿಇ 14 ವಿಷಯಗಳ ಪಟ್ಟಿ ಬಿಡುಗಡೆ ಮಾಡಿದೆ. 14 ವಿಷಯಗಳಲ್ಲಿ 3 ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಠ 45ರಷ್ಟು ಅಂಕ ಗಳಿಸಿದವರಿಗೆ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತೆ.

ಆ 14 ವಿಷಯಗಳ ಪಟ್ಟಿ ಹೀಗಿದೆ ಗಣಿತಶಾಸ್ತ್ರ, ರಸಾಯನಶಾಸ್ತ್ರ, ಭೌತಶಾಸ್ತ್ರ, ಎಲೆಕ್ಟ್ರಾನಿಕ್, ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ, ಜೀವಶಾಸ್ತ್ರ, ಇನ್ಫೋಮ್ಯಾಟಿಕ್ ಪ್ರಾಕ್ಟೀಸಸ್, ಬಯೋ ಟೆಕ್ನಾಲಜಿ, ಟೆಕ್ನಿಕಲ್ ವೆಕೇಷನಲ್ ಸಬ್ಜೆಕ್ಟ್, ಇಂಜಿನಿಯರಿಂಗ್ ಗ್ರಾಫಿಕ್ಸ್, ವ್ಯವಹಾರ ಅಧ್ಯಯನ, ಉದ್ಯಮಶೀಲತೆ ವ್ಯಾಸಂಗ. ಈ ಪೈಕಿ 3 ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಠ 45ರಷ್ಟು ಅಂಕ ಗಳಿಸಿದವರಿಗೆ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತೆ. NEP ಆಧಾರದಡಿ 2021-22ನೇ ಸಾಲಿನಿಂದಲೇ ಹೊಸ ನಿಯಮ ಅನ್ವಯ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Ragging | ಇಂಜಿನಿಯರಿಂಗ್ ಕಾಲೇಜ್​ನಲ್ಲಿ ರ‍್ಯಾಗಿಂಗ್ ಭೂತ.. ನಾಲ್ವರು ಅರೆಸ್ಟ್

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?