AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ, ಭೌತಶಾಸ್ತ್ರ ಕಡ್ಡಾಯವಲ್ಲ -AICTE

BE - AICTE | ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ ಪದವಿಪೂರ್ವ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜುಗಳಿಗೆ ಪ್ರವೇಶಪಡೆಯಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊಂದಿರಬೇಕಿಲ್ಲ.

ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ, ಭೌತಶಾಸ್ತ್ರ ಕಡ್ಡಾಯವಲ್ಲ -AICTE
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Mar 12, 2021 | 12:28 PM

Share

ಬೆಂಗಳೂರು: ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳ ವ್ಯಾಸಂಗ ಕಡ್ಡಾಯವಲ್ಲ. ಈ ಹಿಂದೆ ಎಂಜಿನಿಯರಿಂಗ್ ಪ್ರವೇಶಕ್ಕೆ ಗಣಿತಶಾಸ್ತ್ರ, ರಸಾಯನಶಾಸ್ತ್ರ & ಭೌತಶಾಸ್ತ್ರ ಕಡ್ಡಾಯವಾಗಿತ್ತು. ಆದ್ರೆ ಈಗ AICTE (All India Council For Technical Education) ಆ ನಿಯಮವನ್ನ ಸಡಿಲ ಮಾಡಿದೆ. ಹೀಗಾಗಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಿದ್ದ ನಿಯಮ ಸಡಿಲಗೊಂಡಿದೆ. ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಗಣಿತಶಾಸ್ತ್ರ, ರಸಾಯನಶಾಸ್ತ್ರ ಕಡ್ಡಾಯವಲ್ಲ. ಜೊತೆಗೆ ಬೇರೆ ವಿಭಾಗದಲ್ಲಿ ವ್ಯಾಸಂಗ ಮಾಡಿದವರಿಗೂ ನಿಯಮ ಸಡಿಲ ಮಾಡಿ ಅವಕಾಶ ನೀಡಲಾಗಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ ಪದವಿ ಪೂರ್ವ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜುಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊಂದಿರಬೇಕಿಲ್ಲ. 2021-22ರ ಶೈಕ್ಷಣಿಕ ವರ್ಷದಿಂದ ಗಣಿತ ಮತ್ತು ಭೌತಶಾಸ್ತ್ರ ಈ ಎರಡೂ ವಿಷಯಗಳನ್ನು ವ್ಯಾಸಂಗ ಮಾಡದೇ ಇದ್ದರೂ ನಾಲ್ಕು ವರ್ಷದ ಬಿಇ ವ್ಯಾಸಂಗ ಮಾಡಬಹುದು. ಸದ್ಯ ಈಗ ಎಐಸಿಟಿಇ 14 ವಿಷಯಗಳ ಪಟ್ಟಿ ಬಿಡುಗಡೆ ಮಾಡಿದೆ. 14 ವಿಷಯಗಳಲ್ಲಿ 3 ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಠ 45ರಷ್ಟು ಅಂಕ ಗಳಿಸಿದವರಿಗೆ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತೆ.

ಆ 14 ವಿಷಯಗಳ ಪಟ್ಟಿ ಹೀಗಿದೆ ಗಣಿತಶಾಸ್ತ್ರ, ರಸಾಯನಶಾಸ್ತ್ರ, ಭೌತಶಾಸ್ತ್ರ, ಎಲೆಕ್ಟ್ರಾನಿಕ್, ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ, ಜೀವಶಾಸ್ತ್ರ, ಇನ್ಫೋಮ್ಯಾಟಿಕ್ ಪ್ರಾಕ್ಟೀಸಸ್, ಬಯೋ ಟೆಕ್ನಾಲಜಿ, ಟೆಕ್ನಿಕಲ್ ವೆಕೇಷನಲ್ ಸಬ್ಜೆಕ್ಟ್, ಇಂಜಿನಿಯರಿಂಗ್ ಗ್ರಾಫಿಕ್ಸ್, ವ್ಯವಹಾರ ಅಧ್ಯಯನ, ಉದ್ಯಮಶೀಲತೆ ವ್ಯಾಸಂಗ. ಈ ಪೈಕಿ 3 ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಠ 45ರಷ್ಟು ಅಂಕ ಗಳಿಸಿದವರಿಗೆ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತೆ. NEP ಆಧಾರದಡಿ 2021-22ನೇ ಸಾಲಿನಿಂದಲೇ ಹೊಸ ನಿಯಮ ಅನ್ವಯ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Ragging | ಇಂಜಿನಿಯರಿಂಗ್ ಕಾಲೇಜ್​ನಲ್ಲಿ ರ‍್ಯಾಗಿಂಗ್ ಭೂತ.. ನಾಲ್ವರು ಅರೆಸ್ಟ್

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್