AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ, ಭೌತಶಾಸ್ತ್ರ ಕಡ್ಡಾಯವಲ್ಲ -AICTE

BE - AICTE | ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ ಪದವಿಪೂರ್ವ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜುಗಳಿಗೆ ಪ್ರವೇಶಪಡೆಯಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊಂದಿರಬೇಕಿಲ್ಲ.

ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ, ಭೌತಶಾಸ್ತ್ರ ಕಡ್ಡಾಯವಲ್ಲ -AICTE
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Mar 12, 2021 | 12:28 PM

Share

ಬೆಂಗಳೂರು: ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳ ವ್ಯಾಸಂಗ ಕಡ್ಡಾಯವಲ್ಲ. ಈ ಹಿಂದೆ ಎಂಜಿನಿಯರಿಂಗ್ ಪ್ರವೇಶಕ್ಕೆ ಗಣಿತಶಾಸ್ತ್ರ, ರಸಾಯನಶಾಸ್ತ್ರ & ಭೌತಶಾಸ್ತ್ರ ಕಡ್ಡಾಯವಾಗಿತ್ತು. ಆದ್ರೆ ಈಗ AICTE (All India Council For Technical Education) ಆ ನಿಯಮವನ್ನ ಸಡಿಲ ಮಾಡಿದೆ. ಹೀಗಾಗಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಿದ್ದ ನಿಯಮ ಸಡಿಲಗೊಂಡಿದೆ. ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಗಣಿತಶಾಸ್ತ್ರ, ರಸಾಯನಶಾಸ್ತ್ರ ಕಡ್ಡಾಯವಲ್ಲ. ಜೊತೆಗೆ ಬೇರೆ ವಿಭಾಗದಲ್ಲಿ ವ್ಯಾಸಂಗ ಮಾಡಿದವರಿಗೂ ನಿಯಮ ಸಡಿಲ ಮಾಡಿ ಅವಕಾಶ ನೀಡಲಾಗಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ ಪದವಿ ಪೂರ್ವ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜುಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊಂದಿರಬೇಕಿಲ್ಲ. 2021-22ರ ಶೈಕ್ಷಣಿಕ ವರ್ಷದಿಂದ ಗಣಿತ ಮತ್ತು ಭೌತಶಾಸ್ತ್ರ ಈ ಎರಡೂ ವಿಷಯಗಳನ್ನು ವ್ಯಾಸಂಗ ಮಾಡದೇ ಇದ್ದರೂ ನಾಲ್ಕು ವರ್ಷದ ಬಿಇ ವ್ಯಾಸಂಗ ಮಾಡಬಹುದು. ಸದ್ಯ ಈಗ ಎಐಸಿಟಿಇ 14 ವಿಷಯಗಳ ಪಟ್ಟಿ ಬಿಡುಗಡೆ ಮಾಡಿದೆ. 14 ವಿಷಯಗಳಲ್ಲಿ 3 ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಠ 45ರಷ್ಟು ಅಂಕ ಗಳಿಸಿದವರಿಗೆ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತೆ.

ಆ 14 ವಿಷಯಗಳ ಪಟ್ಟಿ ಹೀಗಿದೆ ಗಣಿತಶಾಸ್ತ್ರ, ರಸಾಯನಶಾಸ್ತ್ರ, ಭೌತಶಾಸ್ತ್ರ, ಎಲೆಕ್ಟ್ರಾನಿಕ್, ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ, ಜೀವಶಾಸ್ತ್ರ, ಇನ್ಫೋಮ್ಯಾಟಿಕ್ ಪ್ರಾಕ್ಟೀಸಸ್, ಬಯೋ ಟೆಕ್ನಾಲಜಿ, ಟೆಕ್ನಿಕಲ್ ವೆಕೇಷನಲ್ ಸಬ್ಜೆಕ್ಟ್, ಇಂಜಿನಿಯರಿಂಗ್ ಗ್ರಾಫಿಕ್ಸ್, ವ್ಯವಹಾರ ಅಧ್ಯಯನ, ಉದ್ಯಮಶೀಲತೆ ವ್ಯಾಸಂಗ. ಈ ಪೈಕಿ 3 ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಠ 45ರಷ್ಟು ಅಂಕ ಗಳಿಸಿದವರಿಗೆ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತೆ. NEP ಆಧಾರದಡಿ 2021-22ನೇ ಸಾಲಿನಿಂದಲೇ ಹೊಸ ನಿಯಮ ಅನ್ವಯ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Ragging | ಇಂಜಿನಿಯರಿಂಗ್ ಕಾಲೇಜ್​ನಲ್ಲಿ ರ‍್ಯಾಗಿಂಗ್ ಭೂತ.. ನಾಲ್ವರು ಅರೆಸ್ಟ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ