AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ, ಭೌತಶಾಸ್ತ್ರ ಕಡ್ಡಾಯವಲ್ಲ -AICTE

BE - AICTE | ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ ಪದವಿಪೂರ್ವ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜುಗಳಿಗೆ ಪ್ರವೇಶಪಡೆಯಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊಂದಿರಬೇಕಿಲ್ಲ.

ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ, ಭೌತಶಾಸ್ತ್ರ ಕಡ್ಡಾಯವಲ್ಲ -AICTE
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on: Mar 12, 2021 | 12:28 PM

Share

ಬೆಂಗಳೂರು: ಎಂಜಿನಿಯರಿಂಗ್ ಪದವಿ ವ್ಯಾಸಂಗಕ್ಕೆ ಇನ್ಮುಂದೆ ಗಣಿತ ಮತ್ತು ಭೌತಶಾಸ್ತ್ರ ವಿಷಯಗಳ ವ್ಯಾಸಂಗ ಕಡ್ಡಾಯವಲ್ಲ. ಈ ಹಿಂದೆ ಎಂಜಿನಿಯರಿಂಗ್ ಪ್ರವೇಶಕ್ಕೆ ಗಣಿತಶಾಸ್ತ್ರ, ರಸಾಯನಶಾಸ್ತ್ರ & ಭೌತಶಾಸ್ತ್ರ ಕಡ್ಡಾಯವಾಗಿತ್ತು. ಆದ್ರೆ ಈಗ AICTE (All India Council For Technical Education) ಆ ನಿಯಮವನ್ನ ಸಡಿಲ ಮಾಡಿದೆ. ಹೀಗಾಗಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಿದ್ದ ನಿಯಮ ಸಡಿಲಗೊಂಡಿದೆ. ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಗಣಿತಶಾಸ್ತ್ರ, ರಸಾಯನಶಾಸ್ತ್ರ ಕಡ್ಡಾಯವಲ್ಲ. ಜೊತೆಗೆ ಬೇರೆ ವಿಭಾಗದಲ್ಲಿ ವ್ಯಾಸಂಗ ಮಾಡಿದವರಿಗೂ ನಿಯಮ ಸಡಿಲ ಮಾಡಿ ಅವಕಾಶ ನೀಡಲಾಗಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚೆಗೆ ಬಿಡುಗಡೆ ಮಾಡಿದ ನಿಯಮಗಳ ಪ್ರಕಾರ ಪದವಿ ಪೂರ್ವ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜುಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು 12ನೇ ತರಗತಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರವನ್ನು ಕಡ್ಡಾಯ ವಿಷಯವಾಗಿ ಹೊಂದಿರಬೇಕಿಲ್ಲ. 2021-22ರ ಶೈಕ್ಷಣಿಕ ವರ್ಷದಿಂದ ಗಣಿತ ಮತ್ತು ಭೌತಶಾಸ್ತ್ರ ಈ ಎರಡೂ ವಿಷಯಗಳನ್ನು ವ್ಯಾಸಂಗ ಮಾಡದೇ ಇದ್ದರೂ ನಾಲ್ಕು ವರ್ಷದ ಬಿಇ ವ್ಯಾಸಂಗ ಮಾಡಬಹುದು. ಸದ್ಯ ಈಗ ಎಐಸಿಟಿಇ 14 ವಿಷಯಗಳ ಪಟ್ಟಿ ಬಿಡುಗಡೆ ಮಾಡಿದೆ. 14 ವಿಷಯಗಳಲ್ಲಿ 3 ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಠ 45ರಷ್ಟು ಅಂಕ ಗಳಿಸಿದವರಿಗೆ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತೆ.

ಆ 14 ವಿಷಯಗಳ ಪಟ್ಟಿ ಹೀಗಿದೆ ಗಣಿತಶಾಸ್ತ್ರ, ರಸಾಯನಶಾಸ್ತ್ರ, ಭೌತಶಾಸ್ತ್ರ, ಎಲೆಕ್ಟ್ರಾನಿಕ್, ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ, ಜೀವಶಾಸ್ತ್ರ, ಇನ್ಫೋಮ್ಯಾಟಿಕ್ ಪ್ರಾಕ್ಟೀಸಸ್, ಬಯೋ ಟೆಕ್ನಾಲಜಿ, ಟೆಕ್ನಿಕಲ್ ವೆಕೇಷನಲ್ ಸಬ್ಜೆಕ್ಟ್, ಇಂಜಿನಿಯರಿಂಗ್ ಗ್ರಾಫಿಕ್ಸ್, ವ್ಯವಹಾರ ಅಧ್ಯಯನ, ಉದ್ಯಮಶೀಲತೆ ವ್ಯಾಸಂಗ. ಈ ಪೈಕಿ 3 ವಿಷಯಗಳಲ್ಲಿ ವ್ಯಾಸಂಗ ಮಾಡಿ ಕನಿಷ್ಠ 45ರಷ್ಟು ಅಂಕ ಗಳಿಸಿದವರಿಗೆ ಎಂಜಿನಿಯರಿಂಗ್ ವ್ಯಾಸಂಗಕ್ಕೆ ಅವಕಾಶ ನೀಡಲಾಗುತ್ತೆ. NEP ಆಧಾರದಡಿ 2021-22ನೇ ಸಾಲಿನಿಂದಲೇ ಹೊಸ ನಿಯಮ ಅನ್ವಯ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Ragging | ಇಂಜಿನಿಯರಿಂಗ್ ಕಾಲೇಜ್​ನಲ್ಲಿ ರ‍್ಯಾಗಿಂಗ್ ಭೂತ.. ನಾಲ್ವರು ಅರೆಸ್ಟ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?