AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತ ಬಿಆರ್ ಪಾಟೀಲ್ ರಾಜೀನಾಮೆ: ಅತ್ತ ದಿಲ್ಲಿ ವಿಮಾನ ಹತ್ತಲು ಸಚಿವರ ತಂಡ ಪ್ಲ್ಯಾನ್

ಕರ್ನಾಟಕ ಕಾಂಗ್ರೆಸ್ ನಲ್ಲಿ ಎಲ್ಲವೂ ಒಂದು ಹಂತಕ್ಕೆ ಸರಿಯಾಯ್ತು ಎನ್ನುವುದರ ಹೊತ್ತಲ್ಲೇ ಈಗ ಮತ್ತೊಂದು ಗದ್ದಲ ಶುರುವಾದಂತಿದೆ. ಸಿಎಂ ಸಲಹೆಗಾರರಾಗಿದ್ದ ಆಳಂದ ಶಾಸಕ ಬಿ ಆರ್ ಪಾಟೀಲ್ ಇದೀಗ ಏಕಾಏಕಿ ತಮ್ಮ ಸಲಹೆಗಾರ ಹುದ್ದೆಗೆ ರಾಜಿನಾಮೆ ಕೊಡುವ ಮೂಲಕ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ. ಅಲ್ಲದೇ ಕೆಲ ಸಚಿವ ತಂಡ ಹೈಕಮಾಂಡ್​ ಭೇಟಿಗೆ ದೆಹಲಿಗೆ ಹೋಗಲು ಪ್ಲ್ಯಾನ್ ಮಾಡಿದೆ.

ಇತ್ತ ಬಿಆರ್ ಪಾಟೀಲ್ ರಾಜೀನಾಮೆ: ಅತ್ತ ದಿಲ್ಲಿ ವಿಮಾನ ಹತ್ತಲು ಸಚಿವರ ತಂಡ ಪ್ಲ್ಯಾನ್
Karnataka Congress
ಪ್ರಸನ್ನ ಗಾಂವ್ಕರ್​
| Edited By: |

Updated on: Feb 01, 2025 | 8:53 PM

Share

ಬೆಂಗಳೂರು, (ಫೆಬ್ರವರಿ 01): ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಸಂಪುಟ ರಚನೆ ವೇಳೆ ಹಿರಿಯರ ಕಡೆಗಣನೆ ಆಗ್ತಾ ಇದೆ ಅಂತ ಬಹಿರಂಗವಾಗಿ ಬಿ.ಆರ್​.ಪಾಟೀಲ್ ಅಸಮಾಧಾನ ಹೊರ ಹಾಕಿದ್ದರು. ಹೀಗಾಗಿ ಅವರ ಅಸಮಾಧಾನ ತಣಿಸಲು ಹೊಸ ಹುದ್ದೆ ಸೃಷ್ಟಿ ಮಾಡಿ, ಆಳಂದ ಶಾಸಕ ಬಿ.ಆರ್, ಪಾಟೀಲ್​ಗೆ ಸಿಎಂ ಸಲಹೆಗಾರರ ಹುದ್ದೆ ನೀಡಲಾಗಿತ್ತು. ಆದ್ರೆ, ಇದೀಗ ಇದ್ದಕ್ಕಿದಂತೆ ಬಿ.ಆರ್.ಪಾಟೀಲ್ ರಾಜಿನಾಮೆ ನೀಡಿದ್ದಾರೆ. ಇದರ ಮಧ್ಯ ಅಹಿಂದ ಸಚಿವರು ದೆಹಲಿ ಫ್ಲೈಟ್ ಹತ್ತಲು ರೆಡಿಯಾಗಿದ್ದಾರೆ. ಈ ಮೂಲಕ ಕರ್ನಾಟಕ ಕಾಂಗ್ರೆಸ್​ನಲ್ಲಿ ಸದ್ದಿಲ್ಲದೇ ಏನೇನೋ ಬೆಳವಣಿಗೆಗಳು ನಡೆಯುತ್ತಿವೆ.

ನಿನ್ನೆಯಷ್ಟೇ (ಜನವರಿ 31) ಸ್ವಾಮೀಜಿ ಜೊತೆ ಸಭೆ ನಡೆಸಿ ಸಂಚಲನ ಸೃಷ್ಟಿಸಿದ್ದ ಕಾಂಗ್ರೆಸ್​ನ ಅಹಿಂದ ಸಚಿವರು ಇದೀಗ ದೆಹಲಿ ತೆರಳಿ ಹೈಕಮಾಂಡ್​ ಭೇಟಿಗೆ ಮುಂದಾಗಿದ್ದಾರೆ. ಹೈಕಮಾಂಡ್ ಭೇಟಿ ಕುರಿತು ಸಚಿವ ರಾಜಣ್ಣ ಖಚಿತ ಪಡಿಸಿದ್ದು, ಮುಂದಿನ ವಾರವೇ ದೆಹಲಿಗೆ ಹೋಗುವ ಸಾಧ್ಯತೆ ಇದೆ. ಮತ್ತೊಂದೆಡೆ ದೆಹಲಿ ಕರ್ನಾಟಕ ಭವನ ಉದ್ಘಾಟನೆ ನೆಪದಲ್ಲಿ ಸತೀಶ್ ಜಾರಕಿಹೊಳಿ ಸಹ ದೆಹಲಿಗೆ ಹೋಗುತ್ತಿದ್ದಾರೆ. ಹೈಕಮಾಂಡ್ ಮುಂದೆ ಯಾವ ವಿಷಯ ಪ್ರಸ್ತಾಪಿಸಬೇಕೆಂದು ಎಸ್​ಸಿ,ಎಸ್​ಟಿ ಸಚಿವರು ಈಗಾಗಲೇ ಚರ್ಚಿಸಿದ್ದಾರೆ. ಮುಂದೆ ನಾಯಕತ್ವ ಬದಲಾವಣೆ ವಿಚಾರ ಚರ್ಚೆಗೆ ಬಂದ್ರೆ ಕಾಂಗ್ರೆಸ್​ಗೆ ಆಗುವ ಡ್ಯಾಮೇಜ್​ಗಳ ಬಗ್ಗೆ ಹೈಕಮಾಂಡ್​ಗೆ ರಾಜಣ್ಣ ವಿವರಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಸಿಎಂ ರಾಜಕೀಯ ಸಲಹೆಗಾರ ಬಿಆರ್ ಪಾಟೀಲ್ ರಾಜೀನಾಮೆ

ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣದ ನಡುವೆ ಮುಸುಕಿನ ಗುದ್ದಾಟಗಳು ಶುರುವಾಗಿದ್ದವು. ಕೆಲವರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದರೆ ಇನ್ನು ಕೆಲವರು ಸೈಲೆಂಟ್ ಆಟವಾಡುತ್ತಿದ್ದರು. ಇದು ತಾರಕಕ್ಕೇರುತ್ತಿದ್ದಂತೆಯೇ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿ ನಾಯಕರುಗಳಿಗೆ ಖಡಕ್ ಎಚ್ಚರಿಕೆ ನೀಡುತ್ತು. ಎಲ್ಲರೂ ಬಾಯಿ ಮುಚ್ಚಿಕೊಂಡು ಪಕ್ಷ ಸಂಘಟನೆ ಕಡೆ ಗಮನ ಕೊಡಿ, ಯಾವಾಗ ಏನೇನು ಮಾಡಬೇಕು ಎನ್ನುವುದು ನಮಗೆ ಗೊತ್ತಿಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಎರಡೂ ಬಣಗಳು ಸೈಲೆಂಟ್​ಗೆ ಜಾರಿದ್ದವು. ಆದ್ರೆ, ಇದೀಗ ಸಚಿವ ಕೆಎನ್​ ರಾಜಣ್ಣ ದೆಹಲಿ ಪ್ರವಾಸ ಹೇಳಿಕೆ ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ ಮೂಡಿಸಿದೆ.

ಈ ಮಧ್ಯೆ ವಿಪಕ್ಷ ನಾಯಕ ಆರ್​.ಅಶೋಕ್ ನವೆಂಬರ್ 15 ಅಥವಾ 16ಕ್ಕೆ ಸಿಎಂ ಬದಲಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಒಂದ್ಕಡೆ ಬಿ.ಆರ್​.ಪಾಟೀಲ್ ರಾಜೀನಾಮೆ. ಮತ್ತೊಂದ್ಕಡೆ ಅಹಿಂದ ಸಚಿವರ ದೆಹಲಿ ಭೇಟಿ.. ಇನ್ನೊಂದ್ಕಡೆ ಸಿಎಂ ಬದಲಾವಣೆ ಭವಿಷ್ಯ ನುಡಿದ ಅಶೋಕ್. ಒಟ್ಟಾರೆ ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ಹೇಳುತ್ತಿದ್ದು, ಮುಂದೆ ಏನೆಲ್ಲಾ ಬೆಳವಣಿಗೆಗಳು ನಡೆಯಲಿವೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು