AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

POCSO Case: ಪೋಕ್ಸೋ ಪ್ರಕರಣದಲ್ಲಿ ಬಿಎಸ್​ ಯಡಿಯೂರಪ್ಪಗೆ ಬಿಗ್​ ರಿಲೀಫ್​: ಬಂಧಿಸದಂತೆ ಹೈಕೋರ್ಟ್ ಆದೇಶ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಬಿಗ್​ ರಿಲೀಫ್​ ಸಿಕ್ಕಿದೆ. ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್​ ದೀಕ್ಷಿತ್​​​​​ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಪರ ವಕೀಲರು ಉತ್ತರಿಸಿದ್ದಾರೆ.

POCSO Case: ಪೋಕ್ಸೋ ಪ್ರಕರಣದಲ್ಲಿ ಬಿಎಸ್​ ಯಡಿಯೂರಪ್ಪಗೆ ಬಿಗ್​ ರಿಲೀಫ್​: ಬಂಧಿಸದಂತೆ ಹೈಕೋರ್ಟ್ ಆದೇಶ
ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪಗೆ ಬಿಗ್​ ರಿಲೀಫ್​
Ramesha M
| Edited By: |

Updated on:Jun 14, 2024 | 5:34 PM

Share

ಬೆಂಗಳೂರು, ಜೂನ್​ 14: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yeddyurappa) ಬಿಗ್​ ರಿಲೀಫ್​ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.

ಪೊಲೀಸರು ಸಲ್ಲಿಸಿದ್ದ ಅರ್ಜಿ ಮನ್ನಿಸಿದ ಕೋರ್ಟ್ ಯಡಿಯೂರಪ್ಪಗೆ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಇನ್ನು ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್​ ದೀಕ್ಷಿತ್​​​​​ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ಸಿಆರ್​ಪಿಸಿ 41ಎ ಅಡಿ ಮಾ.28ರಂದು ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಏ.12ರಂದು ಬಿಎಸ್​ವೈ ವಿಚಾರಣೆಗೆ ಹಾಜರಾಗಿದ್ದರು. 2ನೇ ನೋಟಿಸ್​ಗೆ ಅವರು ಹಾಜರಾಗಿಲ್ಲ. ಜೂ.17ರಂದು ಹಾಜರಾಗುವುದಾಗಿ ಬಿಎಸ್​ವೈ ಉತ್ತರಿಸಿದ್ದಾರೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್  ಹೇಳಿದೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧದ ಪೋಕ್ಸೊ ಕೇಸ್​ಗೆ ಪರಕಾಯ ಪ್ರವೇಶ ಮಾಡಿ ಜೀವ ತುಂಬಿದವರ್ಯಾರು?: ಸಿಟಿ ರವಿ ಪ್ರಶ್ನೆ

ಎಫ್ಐಆರ್ ನಂತರ ತನಿಖೆ ಯಾವಾಗ ಆರಂಭವಾಯಿತು ಎಂದು ಹೈಕೋರ್ಟ್ ಪ್ರಶ್ನಿಸಿದ್ದು, ಮಾರ್ಚ್ 14ರ ಎಫ್ಐಆರ್ ನಂತರ ಏ.12ರಂದು ನೋಟಿಸ್ ನೀಡಿದ್ದಾರೆ. ಅಲ್ಲಿಯವರೆಗೆ ಪೊಲೀಸರು ಏನು ಮಾಡಿದರೆಂಬುದು ತಿಳಿದಿಲ್ಲ ಎಂದು ಸಿ.ವಿ.ನಾಗೇಶ್ ವಾದಿಸಿದರು.

ಈಗ ಬಿಎಸ್​ವೈ ಬಂಧನ ಏಕೆ ಬೇಕಾಗಿದೆ ಎಂದು ಹೈಕೋರ್ಟ್ ಮರು ಪ್ರಶ್ನಿಸಿದ್ದು, ಜೂನ್ 12ರಂದು ಹಾಜರಾಗುವಂತೆ ಬಿಎಸ್​ವೈಗೆ ನೋಟಿಸ್ ನೀಡಲಾಗಿತ್ತು. ಮೊಬೈಲ್‌ನಲ್ಲಿದ್ದ ವಿಡಿಯೋ, ಧ್ವನಿ ಪರೀಕ್ಷೆ ನಂತರ ನೋಟಿಸ್ ನೀಡಲಾಯಿತು. ಹಾಜರಾಗದ ಕಾರಣಕ್ಕೆ ಬಂಧನದ ವಾರಂಟ್ ಪಡೆಯಲಾಗಿದೆ. ಮೇ 13ರಂದು ಎಫ್ಎಸ್ಎಲ್ ವರದಿ ಬಂದಿದೆ. ಸುಟ್ಟ ಮೊಬೈಲ್ ಚಿಪ್​ನಲ್ಲಿದ್ದ ಡಾಟಾ ತೆಗೆಯಲು ಗುಜರಾತ್ FSLಗೆ ಕಳುಹಿಸಲಾಯಿತು. ಅದಾದ ನಂತರ ಧ್ವನಿ ಪರೀಕ್ಷೆಗೆ ಬೆಂಗಳೂರು ಎಫ್ಎಸ್ಎಲ್​ಗೆ ಕಳುಹಿಸಲಾಯಿತು ಎಂದು ಹೈಕೋರ್ಟ್​​​ಗೆ ಎಡಿಜಿಪಿ ಬಿ.ಕೆ.ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪನವರನ್ನು ಕೆಣಕಲು ಹೋದ್ರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮ: ಬಿಜೆಪಿ ಎಚ್ಚರಿಕೆ!

ಬಿಎಸ್​​​ವೈ ಮನೆಯಲ್ಲಿಯೇ ಈ ಘಟನೆ ನಡೆದಿದೆ. ಅವರ ಮನೆಯಲ್ಲಿನ ಸಿಸಿ ಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ತನಿಖೆ ಹೇಗೆ ನಡೆಸಬೇಕೆಂಬುದನ್ನ ತನಿಖಾಧಿಕಾರಿ ನಿರ್ಧರಿಸಬೇಕು ಎಂದು ಹೈಕೋರ್ಟ್ ಹೇಳಿದೆ.

ತನಿಖೆಗೆ ತಡೆ ನೀಡುವಂತೆ ಬಿಎಸ್ ವೈ ಪರ ವಕೀಲರು ಮನವಿ ಮಾಡಿದ್ದಾರೆ. ಪೊಲೀಸರು ದುರುದ್ದೇಶದ ತನಿಖೆ ನಡೆಸುತ್ತಿರುವುದು ಗೊತ್ತಾಗುತ್ತಿದೆ. ಜೂ.12 ರಂದು ಹಾಜರಾಗಿದ್ದರೆ ಬಂಧಿಸುತ್ತಿದ್ದರೆಂದು ಎಜಿ ಹೇಳುತ್ತಿದ್ದಾರೆ. ಇದು ದುರುದ್ದೇಶದ ಕ್ರಮವೆಂದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಸಿವಿ ನಾಗೇಶ್ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:48 pm, Fri, 14 June 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್