AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ: ಹೆಚ್​ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್

ಕುಮಾರಸ್ವಾಮಿ ಅವರು ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. 2ನೇ ಪತ್ನಿ, ಪುತ್ರಿಯ ಮಾಹಿತಿ ನೀಡಿಲ್ಲವೆಂದು ಎಸ್.ಆನಂದ ಎಂಬುವವರು ಆರೋಪ ಮಾಡಿದ್ದರು. ಈ ವಿಚಾರವಾಗಿ ಖಾಸಗಿಯಾಗಿ ದೂರು ಸಲ್ಲಿಸಿದ್ದರು.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ: ಹೆಚ್​ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್
ಹೆಚ್​ಡಿ ಕುಮಾರಸ್ವಾಮಿ
Ramesha M
| Updated By: Ganapathi Sharma|

Updated on: Nov 13, 2023 | 3:59 PM

Share

ಬೆಂಗಳೂರು, ನವೆಂಬರ್ 13: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಡಿ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಸೋಮವಾರ ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ನ್ಯಾಯಾಲಯ ರದ್ದುಪಡಿಸಿದೆ.

ಕುಮಾರಸ್ವಾಮಿ ಅವರು ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. 2ನೇ ಪತ್ನಿ, ಪುತ್ರಿಯ ಮಾಹಿತಿ ನೀಡಿಲ್ಲವೆಂದು ಎಸ್.ಆನಂದ ಎಂಬುವವರು ಆರೋಪ ಮಾಡಿದ್ದರು. ಈ ವಿಚಾರವಾಗಿ ಖಾಸಗಿಯಾಗಿ ದೂರು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದೂರನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮೊದಲ ಪತ್ನಿಯ ಜೀವಿತಾವಧಿಯಲ್ಲಿ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಅಲ್ಲದೆ, ಚುನಾವಣಾ ಪ್ರಮಾಣ ಪತ್ರದಲ್ಲಿ ಮಕ್ಕಳ ಬಗ್ಗೆ ಉಲ್ಲೇಖಿಸಬೇಕೆಂಬ ನಿಯಮವಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ಎ ಉಲ್ಲಂಘನೆಯಾಗಿಲ್ಲ ಎಂದು ನ್ಯಾ.ಜೆ.ಪ್ರೀತ್ ಆದೇಶದಲ್ಲಿ ತಿಳಿಸಿದ್ದಾರೆ.

ಈ ಮಧ್ಯೆ, ರಾಜ್ಯ ರಾಜಕಾರಣದಲ್ಲಿ ಸದ್ಯ ಸಕ್ರಿಯವಾಗಿರುವ ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟೆಂಪರರಿ ಸಿಎಂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಡೂಪ್ಲಿಕೇಟ್‌ ಸಿಎಂ ಎಂದು ಕರೆದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿರುವುದು ಡುಪ್ಲಿಕೇಟ್ ಸಿಎಂ, ಹೈಕಮಾಂಡ್​ಗೆ ಹಣಕೊಟ್ಟರೇ ಮಾತ್ರ ಮಂತ್ರಿ ಸ್ಥಾನ: ಕುಮಾರಸ್ವಾಮಿ

‘ಡೂಪ್ಲಿಕೇಟ್‌ ಸಿಎಂ ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಹೆಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ’ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು.

ಕರ್ನಾಟಕದಲ್ಲಿ ಜಾರಿಮಾಡಿರುವ ಸುಳ್ಳುಪೊಳ್ಳಿನ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸಿ ಮಂಕುಬೂದಿ ಎರಚಲು ಕಾಂಗ್ರೆಸ್ ಹುನ್ನಾರ ನಡೆಸಿದೆ ಎಂದೂ ಅವರು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​