AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನರಿಗೆ ಬಿಗ್ ಶಾಕ್: ವೈದ್ಯರ ವಿಲೀನಕ್ಕೆ ಮುಂದಾದ ಆರೋಗ್ಯ ಇಲಾಖೆ

ರಾಜ್ಯ ಆರೋಗ್ಯ ಇಲಾಖೆ ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನು ತಾಲೂಕಾಸ್ಪತ್ರೆಗಳಿಗೆ ವರ್ಗಾಯಿಸಲು ಮುಂದಾಗಿದೆ. ತಿಂಗಳಿಗೆ 30ಕ್ಕಿಂತ ಕಡಿಮೆ ಹೆರಿಗೆಯಾಗುವ ಕೇಂದ್ರಗಳ ಮಕ್ಕಳ ವೈದ್ಯರು, ಪ್ರಸೂತಿ ತಜ್ಞರು, ಅರಿವಳಿಕೆ ತಜ್ಞರನ್ನು ವರ್ಗಾಯಿಸಲಾಗುತ್ತದೆ. ಆ ಮೂಲಕ ಆರೋಗ್ಯ ಇಲಾಖೆ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ.

ರಾಜ್ಯದ ಜನರಿಗೆ ಬಿಗ್ ಶಾಕ್: ವೈದ್ಯರ ವಿಲೀನಕ್ಕೆ ಮುಂದಾದ ಆರೋಗ್ಯ ಇಲಾಖೆ
ಆರೋಗ್ಯ ಇಲಾಖೆ
ವಿನಯ್​ ಕಾಶಪ್ಪನವರ್​
| Edited By: |

Updated on: Dec 27, 2025 | 3:58 PM

Share

ಬೆಂಗಳೂರು, ಡಿಸೆಂಬರ್​ 27: ಶಿಕ್ಷಕರ ಕೊರತೆ ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ಶಿಕ್ಷಣ ಇಲಾಖೆ ಇತ್ತೀಚೆಗೆ ಮುಂದಾಗಿತ್ತು. ಇದೀಗ ಆರೋಗ್ಯ ಇಲಾಖೆ (Health Department) ಸರದಿ. ವೈದ್ಯರ ವಿಲೀನ ಪ್ರಕ್ರಿಯೆಗೆ ಆರೋಗ್ಯ ಇಲಾಖೆ ಕೈ ಹಾಕಿದ್ದು, 270 ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನು (doctors) ತಾಲೂಕಾಸ್ಫತ್ರೆಗೆ ಸ್ಥಳಾಂತರಿಸುವುದಕ್ಕೆ ಪ್ಲ್ಯಾನ್​​ ಮಾಡಲಾಗುತ್ತಿದೆ. ಆ ಮೂಲಕ ರಾಜ್ಯದ ಜನರಿಗೆ ಆರೋಗ್ಯ ಇಲಾಖೆ ಬಿಗ್ ಶಾಕ್ ನೀಡಿದೆ.

ಕರ್ನಾಟಕದಲ್ಲಿ ಸುಮಾರು 270ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳಿವೆ. ಈ ಆಸ್ಫತ್ರೆಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯಕೀಯ ಸೇವೆಗಳು ಸಿಗುತ್ತಿವೆ. ಗ್ರಾಮೀಣ ಭಾಗದ ಜನರಿಗೆ ತುಂಬಾ ಅನುಕೂಲವಾಗುತ್ತಿತ್ತು. ಆದರೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕಡಿಮೆ ಹೆರಿಗೆ ಆಗುತ್ತಿವೆ.

ಇದನ್ನೂ ಓದಿ: ಕೊವಿಡ್​​ನಂತೆ ಆತಂಕ ಸೃಷ್ಟಿಸಿದ ILI-ಸಾರಿ ಕೇಸ್ ಏರಿಕೆ: ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ಯಾವ ಆಸ್ಫತ್ರೆಗಳಲ್ಲಿ 30ಕ್ಕಿಂತ ಕಡಿಮೆ ಹೆರಿಗೆ ಆಗಿವೆ ಅಂತಹ ಆಸ್ಫತ್ರೆಗಳಲ್ಲಿ ಅನಸ್ತೇಶಿಯಾ ವೈದ್ಯರು, ಮಕ್ಕಳ ವೈದ್ಯರು ಮತ್ತು ಹೆರಿಗೆ ವೈದ್ಯರನ್ನು ತಾಲೂಕು ಆಸ್ಫತ್ರೆಗಳಿಗೆ ಸ್ಥಳಾಂತರ ಮಾಡಲು ಮುಂದಾಗಿದೆ. ಈಗಾಗಲೇ ಎಲ್ಲಾ ಆಸ್ಪತ್ರೆಗಳ ತಿಂಗಳ ಹೆರಿಗೆಯಾಗುವ ವರದಿಯನ್ನು ಸಿದ್ಧಪಡಸಿ ವೈದ್ಯರ ಶಿಫ್ಟ್​ಗೆ ಆರೋಗ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಇನ್ಮುಂದೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ಡಾಕ್ಟರ್, ಹೆರಿಗೆ ವೈದ್ಯರು, ಅನಸ್ತೇಶಿಯಾ ವೈದ್ಯರು ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬಣ್ಣ ಬಣ್ಣದ ಕೇಕ್​​ ತಿನ್ನೋ ಮುನ್ನ ಜೋಕೆ: ಯಾಮಾರಿದ್ರೆ ಬರಬಹುದು ಭೀಕರ ಕಾಯಿಲೆ!

ಆರೋಗ್ಯ ಇಲಾಖೆ ಈಗಾಗಲೇ ರಾಜ್ಯದಲ್ಲಿ ಕಡಿಮೆ ಹೆರಿಗೆಯಾಗುವ ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿದೆ. ಪ್ರಸೂತಿ ತಜ್ಞರು, ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ರೇಡಿಯಾಲಜಿಸ್ಟ್​​, ಜನರಲ್ ಮೆಡಿಸಿನ್ ವೈದ್ಯರು ಪಟ್ಟಿಯಲ್ಲಿದ್ದಾರೆ. ಆ ಮೂಲಕ ಕಡಿಮೆ ಕಾರ್ಯಕ್ಷಮತೆಯ ಆಸ್ಪತ್ರೆಯಿಂದ ವೈದ್ಯರ ಎತ್ತಗಂಡಿಗೆ ಮುಂದಾಗಿದೆ. 270 ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನ ತಾಲೂಕು ಆಸ್ಫತ್ರೆಗಳಿಗೆ ಶಿಫ್ಟ್​​ ಮಾಡುವುದಕ್ಕೆ ಪ್ಲ್ಯಾನ್​​ ಮಾಡಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಅಮೆರಿಕಾ ಅಮೆರಿಕಾ 2’ ವೇದಿಕೆ ಮೇಲೆ ‘ಯಾವ ಮೋಹನ’ ಬಗ್ಗೆ ನಾಗತಿಹಳ್ಳಿ ಮಾತು
‘ಅಮೆರಿಕಾ ಅಮೆರಿಕಾ 2’ ವೇದಿಕೆ ಮೇಲೆ ‘ಯಾವ ಮೋಹನ’ ಬಗ್ಗೆ ನಾಗತಿಹಳ್ಳಿ ಮಾತು
ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ
ಶುಕ್ರವಾರದ ಚಂದ್ರ ದರ್ಶನ ಹಾಗೂ ಮಹಾಲಕ್ಷ್ಮಿ ಯೋಗ
ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು
ಕಾರಾಗೃಹ ಅಧಿಕಾರಿಗಳ ದೂರಿನಂತೆ ಮತ್ತೊಂದು ಎಫ್‌ಐಆರ್ ದಾಖಲು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಶ್ರೀನಗರ-ಲೇಹ್ ಹೈವೇಯಲ್ಲಿ ಭಾರಿ ಮೇಘಸ್ಫೋಟ; ಭೂಕುಸಿತದ ಭೀಕರತೆ ಹೀಗಿತ್ತು
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?