AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನರಿಗೆ ಬಿಗ್ ಶಾಕ್: ವೈದ್ಯರ ವಿಲೀನಕ್ಕೆ ಮುಂದಾದ ಆರೋಗ್ಯ ಇಲಾಖೆ

ರಾಜ್ಯ ಆರೋಗ್ಯ ಇಲಾಖೆ ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನು ತಾಲೂಕಾಸ್ಪತ್ರೆಗಳಿಗೆ ವರ್ಗಾಯಿಸಲು ಮುಂದಾಗಿದೆ. ತಿಂಗಳಿಗೆ 30ಕ್ಕಿಂತ ಕಡಿಮೆ ಹೆರಿಗೆಯಾಗುವ ಕೇಂದ್ರಗಳ ಮಕ್ಕಳ ವೈದ್ಯರು, ಪ್ರಸೂತಿ ತಜ್ಞರು, ಅರಿವಳಿಕೆ ತಜ್ಞರನ್ನು ವರ್ಗಾಯಿಸಲಾಗುತ್ತದೆ. ಆ ಮೂಲಕ ಆರೋಗ್ಯ ಇಲಾಖೆ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ.

ರಾಜ್ಯದ ಜನರಿಗೆ ಬಿಗ್ ಶಾಕ್: ವೈದ್ಯರ ವಿಲೀನಕ್ಕೆ ಮುಂದಾದ ಆರೋಗ್ಯ ಇಲಾಖೆ
ಆರೋಗ್ಯ ಇಲಾಖೆ
Vinay Kashappanavar
| Edited By: |

Updated on: Dec 27, 2025 | 3:58 PM

Share

ಬೆಂಗಳೂರು, ಡಿಸೆಂಬರ್​ 27: ಶಿಕ್ಷಕರ ಕೊರತೆ ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ವಿಲೀನಕ್ಕೆ ಶಿಕ್ಷಣ ಇಲಾಖೆ ಇತ್ತೀಚೆಗೆ ಮುಂದಾಗಿತ್ತು. ಇದೀಗ ಆರೋಗ್ಯ ಇಲಾಖೆ (Health Department) ಸರದಿ. ವೈದ್ಯರ ವಿಲೀನ ಪ್ರಕ್ರಿಯೆಗೆ ಆರೋಗ್ಯ ಇಲಾಖೆ ಕೈ ಹಾಕಿದ್ದು, 270 ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನು (doctors) ತಾಲೂಕಾಸ್ಫತ್ರೆಗೆ ಸ್ಥಳಾಂತರಿಸುವುದಕ್ಕೆ ಪ್ಲ್ಯಾನ್​​ ಮಾಡಲಾಗುತ್ತಿದೆ. ಆ ಮೂಲಕ ರಾಜ್ಯದ ಜನರಿಗೆ ಆರೋಗ್ಯ ಇಲಾಖೆ ಬಿಗ್ ಶಾಕ್ ನೀಡಿದೆ.

ಕರ್ನಾಟಕದಲ್ಲಿ ಸುಮಾರು 270ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳಿವೆ. ಈ ಆಸ್ಫತ್ರೆಗಳಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯಕೀಯ ಸೇವೆಗಳು ಸಿಗುತ್ತಿವೆ. ಗ್ರಾಮೀಣ ಭಾಗದ ಜನರಿಗೆ ತುಂಬಾ ಅನುಕೂಲವಾಗುತ್ತಿತ್ತು. ಆದರೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕಡಿಮೆ ಹೆರಿಗೆ ಆಗುತ್ತಿವೆ.

ಇದನ್ನೂ ಓದಿ: ಕೊವಿಡ್​​ನಂತೆ ಆತಂಕ ಸೃಷ್ಟಿಸಿದ ILI-ಸಾರಿ ಕೇಸ್ ಏರಿಕೆ: ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ

ಯಾವ ಆಸ್ಫತ್ರೆಗಳಲ್ಲಿ 30ಕ್ಕಿಂತ ಕಡಿಮೆ ಹೆರಿಗೆ ಆಗಿವೆ ಅಂತಹ ಆಸ್ಫತ್ರೆಗಳಲ್ಲಿ ಅನಸ್ತೇಶಿಯಾ ವೈದ್ಯರು, ಮಕ್ಕಳ ವೈದ್ಯರು ಮತ್ತು ಹೆರಿಗೆ ವೈದ್ಯರನ್ನು ತಾಲೂಕು ಆಸ್ಫತ್ರೆಗಳಿಗೆ ಸ್ಥಳಾಂತರ ಮಾಡಲು ಮುಂದಾಗಿದೆ. ಈಗಾಗಲೇ ಎಲ್ಲಾ ಆಸ್ಪತ್ರೆಗಳ ತಿಂಗಳ ಹೆರಿಗೆಯಾಗುವ ವರದಿಯನ್ನು ಸಿದ್ಧಪಡಸಿ ವೈದ್ಯರ ಶಿಫ್ಟ್​ಗೆ ಆರೋಗ್ಯ ಇಲಾಖೆ ಮುಂದಾಗಿದೆ. ಹೀಗಾಗಿ ಇನ್ಮುಂದೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ಡಾಕ್ಟರ್, ಹೆರಿಗೆ ವೈದ್ಯರು, ಅನಸ್ತೇಶಿಯಾ ವೈದ್ಯರು ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬಣ್ಣ ಬಣ್ಣದ ಕೇಕ್​​ ತಿನ್ನೋ ಮುನ್ನ ಜೋಕೆ: ಯಾಮಾರಿದ್ರೆ ಬರಬಹುದು ಭೀಕರ ಕಾಯಿಲೆ!

ಆರೋಗ್ಯ ಇಲಾಖೆ ಈಗಾಗಲೇ ರಾಜ್ಯದಲ್ಲಿ ಕಡಿಮೆ ಹೆರಿಗೆಯಾಗುವ ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿದೆ. ಪ್ರಸೂತಿ ತಜ್ಞರು, ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ರೇಡಿಯಾಲಜಿಸ್ಟ್​​, ಜನರಲ್ ಮೆಡಿಸಿನ್ ವೈದ್ಯರು ಪಟ್ಟಿಯಲ್ಲಿದ್ದಾರೆ. ಆ ಮೂಲಕ ಕಡಿಮೆ ಕಾರ್ಯಕ್ಷಮತೆಯ ಆಸ್ಪತ್ರೆಯಿಂದ ವೈದ್ಯರ ಎತ್ತಗಂಡಿಗೆ ಮುಂದಾಗಿದೆ. 270 ಸಮುದಾಯ ಆರೋಗ್ಯ ಕೇಂದ್ರಗಳಿಂದ ವೈದ್ಯರನ್ನ ತಾಲೂಕು ಆಸ್ಫತ್ರೆಗಳಿಗೆ ಶಿಫ್ಟ್​​ ಮಾಡುವುದಕ್ಕೆ ಪ್ಲ್ಯಾನ್​​ ಮಾಡಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ