AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರಿಗೆ ಬಿಗ್ ಬಿಗ್ ಶಾಕ್: ಶಕ್ತಿ ಯೋಜನೆ ಬಗ್ಗೆ ಬೇಕಾಬಿಟ್ಟಿ ಮಾತನಾಡಿದರೆ ಅಮಾನತಾಗೋದು ಗ್ಯಾರಂಟಿ!

ಶಕ್ತಿ ಸ್ಕೀಮ್ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ, ಮಹಿಳೆಯರ ಅಚ್ಚುಮೆಚ್ಚಿನ ಯೋಜನೆ ಕೂಡ ಹೌದು. ಆದರೆ ಈ ಯೋಜನೆ ಬಗ್ಗೆ ಚಾಲಕ, ನಿರ್ವಾಹಕರು ಬೇಕಾಬಿಟ್ಟಿ ಆಗಿ ಮಾತನಾಡುತ್ತಿದ್ದಾರೆಂದು ದೂರುಗಳು ಬಂದ ಕಾರಣ ಸಾರಿಗೆ ಇಲಾಖೆ ಖಡಕ್ ಆದೇಶಕ್ಕೆ ‌ಮುಂದಾಗಿದೆ. ಇದಕ್ಕೆ ಸಿಬ್ಬಂದಿಯಿಂದ ವಿರೋಧವೂ ವ್ಯಕ್ತವಾಗಿದೆ.

ಸಾರಿಗೆ ನೌಕರರಿಗೆ ಬಿಗ್ ಬಿಗ್ ಶಾಕ್: ಶಕ್ತಿ ಯೋಜನೆ ಬಗ್ಗೆ ಬೇಕಾಬಿಟ್ಟಿ ಮಾತನಾಡಿದರೆ ಅಮಾನತಾಗೋದು ಗ್ಯಾರಂಟಿ!
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Nov 10, 2025 | 11:08 AM

Share

ಬೆಂಗಳೂರು, ನವೆಂಬರ್ 10: ಮಹಿಳೆಯರಿಗೆ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆ (Shakti Scheme) ಆರಂಭವಾಗಿ ಎರಡು ವರ್ಷ ತುಂಬಿದ್ದು, ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ ಮಹಿಳೆಯರು ಸುಮಾರು 500 ಕೋಟಿಯಷ್ಟು ಬಾರಿ ಉಚಿತವಾಗಿ ಸಂಚಾರ ಮಾಡಿದ್ದಾರೆ. ಆದರೆ ಇಂತಹ ಯೋಜನೆ ಬಗ್ಗೆ ಕೆಲ ಸಾರಿಗೆ ನೌಕರರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಯಾಣಿಕರಿಂದ ಕೂಡ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದ್ದು, ಈ ಹಿನ್ನೆಲೆ ಸಾರಿಗೆ ನಿಗಮಗಳು ಖಡಕ್ ಸುತ್ತೋಲೆ ಹೊರಡಿಸಿವೆ.

ಇನ್ನು ಮುಂದೆ ಸರ್ಕಾರದ ಶಕ್ತಿ ಯೋಜನೆ ವಿರುದ್ದ ಸಾರಿಗೆ ನೌಕರರು ಮನಬಂದಂತೆ ಮಾತನಾಡುವಂತಿಲ್ಲ. ಬಸ್​ನಲ್ಲಿ ಪ್ರಯಾಣಿಕರ ಜೊತೆಗೆ ಬೇಕಾಬಿಟ್ಟಿಯಾಗಿ ಮಾತನಾಡಿದರೆ ಸಂಕಷ್ಟ ಕಾದಿದೆ. ಶಕ್ತಿ ಯೋಜನೆ ಬಗ್ಗೆ ಮಾತನಾಡಿದರೆ ನೌಕರರು ಅಮಾನತಾಗಲಿದ್ದಾರೆ ಎಂದು ಸಾರಿಗೆ ನಿಗಮಗಳ ಸುತ್ತೋಲೆ ತಿಳಿಸಿದೆ. ಅಂಜಿಕೆ, ಭಯ ಇಲ್ಲದೆ ಶಕ್ತಿ ಸ್ಕೀಂ ಬಗ್ಗೆ ಸಾರಿಗೆ ನೌಕರರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬ ದೂರುಗಳ ಆಧಾರದಲ್ಲಿ ಎಲ್ಲಾ ಡಿಸಿಗಳಿಗೆ ಸಾರಿಗೆ ನಿಗಮಗಳು ಖಡಕ್ ಸೂಚನೆ ನೀಡಿವೆ.

ಆದರೆ ಇದಕ್ಕೆ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಕೆಂಡ ಕಾರುತ್ತಿದ್ದಾರೆ. ಮಹಿಳೆಯರಿಗೆ ಈ ಯೋಜನೆಯಿಂದ ಉಪಯೋಗ ಆಗುತ್ತಿದೆ ನಿಜ. ಆದರೆ ಸಾರಿಗೆ ನೌಕರರಿಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ. ಕೂಡಲೇ ಈ ಆದೇಶ ವಾಪಸ್ ಪಡೆಯಬೇಕೆಂದು ನೌಕರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಕಹಿ ಸುದ್ದಿ: ಇನ್ನರ್ ರಿಂಗ್ ಮೆಟ್ರೋ ಯೋಜನೆ ಕೈಬಿಡಲು ಪ್ಲ್ಯಾನ್

ಒಟ್ಟಿನಲ್ಲಿ, ಶಕ್ತಿ ಯೋಜನೆ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡಿದರೆ ಕ್ರಮ ಕೈಗೊಳ್ಳುತ್ತೇವೆಂದು ಈಗಾಗಲೇ ಸುತ್ತೋಲೆ ಹೊರಡಿಸಲಾಗಿದ್ದು, ಸಾರಿಗೆ ನೌಕರರ ಆಕ್ರೋಶಕ್ಕೆ ಕಾರಣವಾಗಿರುವುದಂತೂ ಸುಳ್ಳಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!