ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಸಿಎಂ ಪತ್ನಿ ಬರೆದ ಪತ್ರ ತಿರುಚಿದ್ರಾ ಅಧಿಕಾರಿಗಳು? ಅನುಮಾನಕ್ಕೆ ಇದೆ ಕಾರಣ

ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಬಲುದೊಡ್ಡ ಕಂಟಕವಾಗಿ ಪರಿಣಮಿಸಿದೆ. ಒಂದೆಡೆ, ಹೈಕೋರ್ಟ್​ನಲ್ಲಿ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದ್ದರೂ ಕುರ್ಚಿ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಲೇ ಇದ್ದಾರೆ. ಈ ಮಧ್ಯೆ, ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ, ಸಿಎಂ ಪತ್ನಿ ಪರ್ಯಾನ ನಿವೇಶನ ಕೋರಿ ಬರೆದಿದ್ದ ಪತ್ರವನ್ನು ತಿರುಚಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಸಿಎಂ ಪತ್ನಿ ಬರೆದ ಪತ್ರ ತಿರುಚಿದ್ರಾ ಅಧಿಕಾರಿಗಳು? ಅನುಮಾನಕ್ಕೆ ಇದೆ ಕಾರಣ
ಸಿದ್ದರಾಮಯ್ಯ
Follow us
| Updated By: ಗಣಪತಿ ಶರ್ಮ

Updated on:Aug 21, 2024 | 10:46 AM

ಮೈಸೂರು, ಆಗಸ್ಟ್ 21: ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಅಧಿಕಾರಿಗಳು ದಾಖಲೆಯನ್ನು ತಿರುಚಿದ್ದಾರೆಯೇ? ಸಿಎಂ ಸಿದ್ದರಾಮಯ್ಯ ಪತ್ನಿ ತಮ್ಮ ಭೂಮಿಗೆ 50:50 ಅನುಪಾತದಲ್ಲಿ ಪರ್ಯಾಯ ನಿವೇಶನ ಕೊಡುವಂತೆ ಮನವಿ ಮಾಡಿ ಸಲ್ಲಿಸಿರುವ ಪತ್ರವನ್ನೇ ತಿರುಚಿದ್ದಾರೆಯೇ ಎಂಬ ಅನುಮಾನ ಇದೀಗ ಮೂಡಿದೆ. ಯಾವ ಸ್ಥಳದಲ್ಲಿ ಪರ್ಯಾಯ ನಿವೇಶನ ಕೊಡಬೇಕು ಎಂದು ಬರೆದ ಜಾಗಕ್ಕೆ ವೈಟ್​​ನರ್ ಹಾಕಿರುವುದು ಬೆಳಕಿಗೆ ಬಂದಿದೆ.

ವಿಜಯನಗರದ 2 ಮತ್ತು ಮೂರನೇ ಹಂತದಲ್ಲೇ ನಿವೇಶನ ಕೊಡುವಂತೆ ಸಿದ್ದರಾಮಯ್ಯ ಪತ್ನಿ ಕೇಳಿದ್ದರೇ ಎಂಬ ಪ್ರಶ್ನೆಯೂ ಈಗ ಉದ್ಭವಿಸಿದೆ. ವೈಟ್​ನರ್ ಹಾಕಿ ಅಳಿಸಿರುವುದರಿಂದ ಈ ಪ್ರಶ್ನೆ ಮೂಡಿದೆ.

ಇದೀಗ ಸಿಎಂ ಪತ್ನಿ ಬರೆದ ಪತ್ರ ಬಹಿರಂಗವಾಗಿರುವುದರಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಂತಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಿಎಂ ಪತ್ನಿ ಪಾರ್ವತಮ್ಮ ಬರೆದ ಪತ್ರ ಲಭ್ಯವಾಗಿದ್ದು, ಪ್ರಾಧಿಕಾರ ಬಡಾವಣೆ ನಿರ್ಮಿಸಿ ನಿವೇಶನ ಹಂಚಿದ ಮೇಲೆ ಆ ಜಮೀನನ್ನು ಸಿಎಂ ಪತ್ನಿಯ ಸಹೋದರ ಖರೀದಿಸಿದ್ದರೇ ಎಂಬ ಪ್ರಶ್ನೆಗೂ ಕಾರಣವಾಗಿದೆ. ಸಿಎಂ ಪತ್ನಿ ಪ್ರಾಧಿಕಾರಕ್ಕೆ ಬರೆದ ಪತ್ರದಲ್ಲಿ ಅದರ ಸ್ಪಷ್ಟ ಉಲ್ಲೇಖ.

ಇದನ್ನೂ ಓದಿ: ಸಿದ್ದರಾಮಯ್ಯ ಪರ ಕಾಂಗ್ರೆಸ್ ಹೈಕಮಾಂಡ್ ಬಳಿ ವಾದ ಮಂಡಿಸಲು ಅತ್ಯಾಪ್ತ ಸಚಿವರ ಸಿದ್ಧತೆ: ಸಿದ್ದು ಆಪ್ತರ ವಾದವೇನು?

ಸಿಎಂ ಪತ್ನಿ ಮುಡಾಗೆ ಬರೆದ ಪತ್ರದ ಪ್ರತಿ

Big Twist for MUDA scam: It is suspected that letter written by Siddaramaiah's wife was tampered after the scandal came to light

ಪತ್ರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2001 ರಲ್ಲೇ ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣ ಮಾಡಿ ನಿವೇಶನ ಹಂಚಿದೆ ಎಂದು ಪತ್ರದಲ್ಲಿ ನಮೂದಾಗಿದೆ. ಕೆಸರೆ ಗ್ರಾಮದ ಜಮೀನನ್ನು ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸ್ವಾಧೀನ ಪಡಿಸಿಕೊಂಡಿತ್ತು. ಆದರೆ, ಈ ಜಮೀನನ್ನು ಸಿಎಂ ಪತ್ನಿ ಸಹೋದರ ಖರೀದಿ ಮಾಡಿರುವುದು 2004 ರಲ್ಲಿ. ಹಾಗಾದರೆ ಸ್ವಾಧೀನ ಪಡಿಸಿಕೊಂಡು ನಿವೇಶನ ಹಂಚಿದ ಜಾಗವನ್ನು ಸಿಎಂ ಸಹೋದರ ಹೇಗೆ ಖರೀದಿ ಮಾಡಿದರು ಎಂಬ ಪ್ರಶ್ನೆಯೂ ಉದ್ಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:46 am, Wed, 21 August 24