AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವೇತಾ ಗೌಡ ಜತೆ ವರ್ತೂರ್‌ ಪ್ರಕಾಶ್‌ ಎಂಗೇಜ್​ಮೆಂಟ್​ಗೆ ಸಿದ್ಧತೆ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಚಿನ್ನದ ವ್ಯಾಪಾರಿಗೆ 2.42 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಈಗಾಗಲೇ ಶ್ವೇತಾ ಗೌಡ ಬಂಧನವಾಗಿದ್ದು, ಇದೀಗ ಮಾಜಿ ಸಚಿವ ವರ್ತೂರ್‌ ಪ್ರಕಾಶ್‌ಗೆ (Varthur Prakash) ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಅವರು ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದು, ಶ್ವೇತಗೌಡ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ. ವರ್ತೂರು ಪ್ರಕಾಶ್ ಅವರು ಶ್ವೇತಾ ಜತೆ ಎಂಗೇಜ್​ಮೆಂಟ್​ಗೆ ಸಿದ್ಧತೆ ನಡೆಸಿದ್ದರು ಎನ್ನುವ ಅಂಶ ಬಹಿರಂಗವಾಗಿದೆ.

ಶ್ವೇತಾ ಗೌಡ ಜತೆ ವರ್ತೂರ್‌ ಪ್ರಕಾಶ್‌ ಎಂಗೇಜ್​ಮೆಂಟ್​ಗೆ ಸಿದ್ಧತೆ: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ
ಶ್ವೇತಾ ಗೌಡ, ವರ್ತೂರು ಪ್ರಕಾಶ್‌
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 24, 2024 | 4:55 PM

Share

ಬೆಂಗಳೂರು, (ಡಿಸೆಂಬರ್ 24):  ಶ್ವೇತಾ ಗೌಡ ವಂಚನೆ ಕೇಸ್‌ನಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ವರ್ತೂರು ಪ್ರಕಾಶ್‌ (Varthur Prakash) ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್‌, ಎಸಿಪಿ ಗೀತಾ ಎದುರು ವಿಚಾರಣೆ ಎದುರಿಸಿದ್ದು, ಇದೇ ವೇಳೆ ಆರೋಪಿ ಶ್ವೇತಾ ಗೌಡ ಕೊಟ್ಟಿದ್ದ ಗಿಫ್ಟ್‌ಗಳನ್ನ ಅಂದ್ರೆ ನಗದು, ಚಿನ್ನಾಭರಣ ಎಲ್ಲವನ್ನೂ ಪೊಲೀಸರಿಗೆ ವಾಪಸ್‌ ಹಿಂದಿರುಗಿಸಿದ್ದಾರೆ. ಒಟ್ಟು 12.50 ಲಕ್ಷ ರೂ. ನಗದು, 12.46 ಲಕ್ಷ ನಗದು, 100 ಗ್ರಾಂ ಚಿನ್ನಾಭರಣ, 1 ಉಂಗುರ ವಾಪಸ್ ನೀಡಿದ್ದಾರೆ.

ಹಲವು ಸ್ಪೋಟಕ ಮಾಹಿತಿ ಬಹಿರಂಗ

ವಂಚಕಿ ಶ್ವೇತಾ ವಿಚಾರಣೆ ವೇಳೆ ಹಲವು ಸ್ಪೋಟಕ ಮಾಹಿತಿಗಳು ಬಹಿರಂಗವಾಗಿದೆ. ಶ್ವೇತಾಗೌಡ ಹಾಗೂ ವರ್ತೂರು ಪ್ರಕಾಶ್‌ಗೆ ನಿಕಟ ನಂಟಿರುವುದು ಪತ್ತೆಯಾಗಿದೆ. ಇಬ್ಬರೂ ಹಲವು ಬಾರಿ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದಾರೆ. ಅಚ್ಚರಿ ಅಂದ್ರೆ ವರ್ತೂರು ಪ್ರಕಾಶ್‌, ಶ್ವೇತಾ ಗೌಡ ಜೊತೆಗೆ ಎಂಗೇಜ್​ಮೆಂಟ್​ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದು ಎಂದು ತಿಳಿದುಬಂದಿದೆ. ತಿರುಪತಿಯಲ್ಲಿ ಎಂಗೇಜ್​ಮೆಂಟ್​​ ಮಾಡಿಕೊಳ್ಳಲು ಟಿಕೆಟ್ ಸಹ ಬುಕ್ ಮಾಡಿರುವುದು ಬಹಿರಂಗವಾಗಿದೆ. ಇದಕ್ಕೆ ಪೂರಕವಾಗಿ ಶ್ವೇತಾ ಮೊಬೈಲ್‌ನಲ್ಲಿ ಹಲವು ಫೋಟೋ ಸಾಕ್ಷ್ಯಗಳು ಸಿಕ್ಕಿವೆ. 3 ಚಿನ್ನದ ಅಂಗಡಿ ಮಾಲೀಕರ ಜ್ಯುವೆಲ್ಲರಿ ಶಾಪ್‌ಗೆ ಶ್ವೇತಾ ಜೊತೆ ವರ್ತೂರು ಪ್ರಕಾಶ್ ಹೋಗಿರುವುದಕ್ಕೆ ಸಾಕ್ಷಿ ಸಿಕ್ಕಿದೆ. ಅಲ್ಲದೇ ವರ್ತೂರ್ ಪ್ರಕಾಶ್, ಎಂಗೇಜ್​ಮೆಂಟ್​ ವೇಳೆ ಹಾಕಬೇಕಿದ್ದ ಉಂಗುರದ ಫೋಟೋವನ್ನು ಸಹ ಶ್ವೇತಾಗೆ ಕಳುಹಿಸಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ನೆಲಮಂಗಲ: ಕೆಜಿಗಟ್ಟಲೆ ಚಿನ್ನ ಕೊಂಡೊಯ್ದು ಆಭರಣ ಅಂಗಡಿ ಮಾಲೀಕರಿಗೇ ಧಮ್ಕಿ ಹಾಕಿದ ಮಹಿಳೆ!

ಗುಲಾಬ್ ಜಾಮೂನ್ ಎಂದು ನಂಬರ್ ಸೇವ್

6 ತಿಂಗಳ ಹಿಂದೆಯಷ್ಟೇ ಶ್ವೇತಾ, ವರ್ತೂರು ಪ್ರಕಾಶ್‌ಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದಳು, ತಾನೇ ರಿಕ್ವೆಸ್ಟ್ ಕಳಿಸಿ ಸ್ನೇಹದ ಬಲೆಗೆ ಬೀಳಿಸಿಕೊಂಡಿದ್ದಳು. ಬಳಿಕ ಮೆಸೆಂಜರ್‌ನಲ್ಲಿ ಚಾಟಿಂಗ್ ಶುರುವಾಗಿ ಇಬ್ಬರೂ ಮೊಬೈಲ್‌ ನಂಬರ್ ವಿನಿಮಯ ಮಾಡಿಕೊಂಡಿದ್ದಾರೆ. ಬಳಿಕ ವಾಟ್ಸಪ್‌ನಲ್ಲೂ ಚಾಟಿಂಗ್ ಮುಂದುವರಿದಿದೆ. ಶ್ವೇತಾ ವರ್ತೂರು ಪ್ರಕಾಶ್ ನಂಬರ್ ಅನ್ನು ಗುಲಾಬ್ ಜಾಮೂನ್ ಎಂಬ ಹೆಸರಿನಿಂದ ಸೇವ್ ಮಾಡಿಕೊಂಡಿದ್ದಳು ಎನ್ನುವ ವಿಚಾರವೂ ತನಿಖೆ ವೇಳೆ ಬೆಳಕಿಗೆ ಬಂದಿದೆ.

ವರ್ತೂರ್ ಪ್ರಕಾಶ್ ಹೇಳಿದ್ದಿಷ್ಟು

ವಿಚಾರಣೆ ಬಳಿಕ ಮಾತನಾಡಿದ ವರ್ತೂರ್ ಪ್ರಕಾಶ್, ನನಗೆ ಆಕೆ ಸ್ನೇಹಿತೆ ಅಲ್ಲ. ಐದಾರು ತಿಂಗಳ. ಹಿಂದೆ ಪರಿಚಯ ಆಗಿದೆ. ನನ್ನ ಹೆಸರು ಬಳಸಿಕೊಂಡು ಚಿನ್ನಭಾರಣ ಖರೀದಿ ಮಾಡಿಕೊಂಡಿದ್ದಾಳೆ. ನನಗೂ ಮನಸ್ಸಿಗೆ ನೋವಾಗಿದೆ. ಚಿನ್ನದ ಅಂಗಡಿಯವರು 2 ಕೋಟಿ ರೂ. ಚಿನ್ನಭಾರಣ ಕೊಟ್ಟಿದ್ದಾರೆ, ಅದ್ಹೇಗೆ ಕೊಟ್ರು ಗೊತ್ತಿಲ್ಲ. ನನ್ನ ತರ ಕೆಲ ರಾಜಕಾರಣಿಗಳು ಹೆಸರು, ಫೋಟೋ ತೆಗೆದುಕೊಂಡು ವಂಚನೆ ಮಾಡಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಎಲ್ಲಾ ಮಾಹಿತಿ ಕೊಟ್ಟಿದ್ದೀನಿ ಎಂದು ಸ್ಪಷ್ಟಪಡಿಸಿದ್ದಾರೆ.

ದೂರುದಾರ ಸಂಜಯ್​ ಭಾಪ್ನಾ ಹೇಳಿದ್ದೇನು?

ವರ್ತೂರು ಪ್ರಕಾಶ್ ಆಪ್ತೆ ಶ್ವೇತಾಗೌಡಳಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸಂಜಯ್​ ಭಾಪ್ನಾ ಪ್ರತಿಕ್ರಿಯಿಸಿದ್ದು, ವರ್ತೂರು ಪ್ರಕಾಶ್ ಜೊತೆಗೆ ಆಕೆ ನಮ್ಮ ಅಂಗಡಿಗೆ ಬಂದಿದ್ದರು. ನಮ್ಮ ಬಳಿ ಒಡವೆ ತೆಗೆದುಕೊಂಡ ಬಳಿಕ ಪರಿಚಯವಾಗಿದ್ರು. ಚಿನ್ನ ಮಾರಾಟ ಮಾಡಿ ದುಡ್ಡು ತಂದುಕೊಡುತ್ತೇನೆ ಎಂದಿದ್ದರು. ಮೊದಲು ವ್ಯಾಪಾರ ಮಾಡಿದ್ದ ಹಣ ಕೊಟ್ಟಿದ್ದರು. ವರ್ತೂರು ಪ್ರಕಾಶ್ ಮನೆ ಬಳಿಯೂ ಡೆಲಿವರಿ ಕೊಟ್ಟಿದ್ದೆವು. ಶ್ವೇತಾಗೌಡ 2 ಕೆಜಿ 900 ಗ್ರಾಂ ಚಿನ್ನದ ಹಣವನ್ನು ಕೊಟ್ಟಿಲ್ಲ. ಈ ವಿಚಾರವನ್ನು ನಾನು ವರ್ತೂರು ಪ್ರಕಾಶ್ ಬಳಿ ಹೇಳಿದ್ದೆ. ಆಗ ವರ್ತೂರು ಪ್ರಕಾಶ್​​ ನಮಗೆ ಗೊತ್ತಿಲ್ಲ ಎಂದು ಹೇಳಿದ್ರು ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!