AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spinal Muscular Atrophy: ಕಂದನ ಉಳಿಸು ಕರ್ನಾಟಕ ಅಭಿಯಾನಕ್ಕೆ ಸ್ಪಂದನೆ; ಬಜೆಟ್‌ನಲ್ಲಿ 10ಕೋಟಿ ರೂಪಾಯಿ ಮೀಸಲು

Karnataka Budget 2021: 16 ಕೋಟಿ ರೂಪಾಯಿಯ ಸಂಜೀವಿನಿಗಾಗಿ ಆ ಪುಟಾಣಿ ಕಂದ ಜೀವ ಕೈಯಲ್ಲಿಡಿದು ಕಾಯುತ್ತಿದೆ. ಆ ಪುಟ್ಟ ಕಂದಮ್ಮನ ನೋವಿಗೆ ಟಿವಿ9 ಸ್ಪಂದಿಸಿತ್ತು. ಇದೀಗ ಟಿವಿ9 ವರದಿಗೆ ಸ್ಪಂದಿಸಿರುವ ಸರ್ಕಾರ ಮಹತ್ವದ ಕಾರ್ಯಕ್ಕೆಂದು ಬಜೆಟ್‌ನಲ್ಲಿ ಹಣ ಮೀಸಲಿಟ್ಟಿದೆ. ನವಜಾತ ಶಿಶುಗಳಲ್ಲಿ ಅನುವಂಶಿಕ ಕಾಯಿಲೆಗಳ ಪತ್ತೆ ಮಾಡಲು ಪ್ರಯೋಗಾಲಯ ಸ್ಥಾಪನೆಗೆ ಮುಂದಾಗಿದೆ.

Spinal Muscular Atrophy: ಕಂದನ ಉಳಿಸು ಕರ್ನಾಟಕ ಅಭಿಯಾನಕ್ಕೆ ಸ್ಪಂದನೆ; ಬಜೆಟ್‌ನಲ್ಲಿ 10ಕೋಟಿ ರೂಪಾಯಿ ಮೀಸಲು
ಜನೀಶ್
ಆಯೇಷಾ ಬಾನು
| Edited By: |

Updated on:Mar 09, 2021 | 8:22 AM

Share

ಬೆಂಗಳೂರು: 11 ತಿಂಗಳ ಕಂದಮ್ಮನಿಗೆ ಆಪತ್ತು ಎದುರಾಗಿದೆ. ಹೆತ್ತವರಿಗೆ ಖುಷಿಯೇ ಇಲ್ಲದಂತಾಗಿದೆ. ಮಗುವಿನ ಮುಖ ನೋಡಿ ನಿತ್ಯ ಕಣ್ಣೀರಿಡುವಂತಾಗಿದೆ. ಯಾಕಂದ್ರೆ ಇಡೀ ವೈದ್ಯಲೋಕ.. ಇಡೀ ಜಗತ್ತೇ ದಂಗಾಗುವಂಥಾ ಸಮಸ್ಯೆಗೆ ತುತ್ತಾಗಿದೆ. 11 ತಿಂಗಳ ಕಂದ ಜನೀಶ್. ಸಂಜೀವಿನಿ ನಗರದ ನಿವಾಸಿಗಳಾಗಿರುವ ನವೀನ್​ಕುಮಾರ್-ಜ್ಯೋತಿ ದಂಪತಿ ಪುತ್ರ. ಕುಟುಂಬದ ಪರಿಸ್ಥಿತಿಯೂ ಅಷ್ಟೇನು ಚೆನ್ನಾಗಿಲ್ಲ. ಇಂಥಾದ್ರ ಮಧ್ಯೆ ಮಗುವಿಗೆ ಜೀನ್ ಸಮಸ್ಯೆ ಕಾಣಿಸಿಕೊಂಡಿದೆ. ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ (Spinal Muscular Atrophy) ಅಂದ್ರೆ, ಬೆನ್ನು ಮೂಳೆಯ ಸ್ನಾಯು ಕ್ಷೀಣತೆ ಅಂತಾರೆ. ವೈದ್ಯಲೋಕದಲ್ಲೇ ಇದು ಅಪರೂಪದ ಸಮಸ್ಯೆ.

ಜನೀಶ್ ಉಳಿಯಬೇಕಾದ್ರೆ ಬರೋಬ್ಬರಿ 16 ಕೋಟಿಯ ಮೆಡಿಸಿನ್ ಬೇಕಾಗಿದೆ. ಅದೂ ಅಮೆರಿಕದಲ್ಲಿ ಸಿಗುವ ಔಷಧಿಯೇ ಬೇಕು. ಇಷ್ಟೊಂದು ದುಡ್ಡು ಎಲ್ಲಿಂದ ತರೋದು ಅಂತಾ ತಂದೆ ನವೀನ್​ಕುಮಾರ್ ಕಣ್ಣೀರಿಟ್ಟಿದ್ದರು. ಈ ಪೋಷಕರ ಕಣ್ಣೀರಿಗೆ ಟಿವಿ9 ಸ್ಪಂದಿಸಿತ್ತು. ಒಂದು ತಿಂಗಳ ಹಿಂದೆ ಮಗುವಿನ ಕಾಯಿಲೆ, ಪೋಷಕರ ಪರಿಸ್ಥಿತಿ ಬಗ್ಗೆ ಟಿವಿ9 ಎಳೆಎಳೆಯಾಗಿ ವರದಿ ಪ್ರಸಾರ ಮಾಡಿತ್ತು. ಈ ಕರುನಾಡಿನ ಪುಣ್ಯವಂತರು, ಹೃದಯವಂತರು, ಆಳುವ ಸರ್ಕಾರ ನೆರವಿಗೆ ಬರಬೇಕು ಎಂದು ಟಿವಿ9 ಕಳಕಳಿಯಾಗಿ ಮನವಿ ಮಾಡಿಕೊಂಡಿತ್ತು. ಪೋಷಕರ ನೋವಿಗೆ, ಟಿವಿ9 ಮನವಿಗೆ ಸರ್ಕಾರ ಮುಂದೆ ಬಂದಿದೆ. ಟಿವಿ9 ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ.

ಅನುವಂಶಿಕ ಕಾಯಿಲೆಗಳ ಪತ್ತೆಗೆ ಪ್ರಯೋಗಾಲಯ ಸ್ಥಾಪನೆ ಹೌದು ಮಾರ್ಚ್ 08ರಂದು ನಡೆದ ಬಜೆಟ್‌ನಲ್ಲಿ ನವಜಾತ ಶಿಶುಗಳಲ್ಲಿ ಅನುವಂಶಿಕ ಕಾಯಿಲೆಗಳ ಪತ್ತೆ ಮಾಡಲು ಪ್ರಯೋಗಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಪ್ರಯೋಗಾಲಯ ಸ್ಥಾಪನೆಗೆ 10 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಬಿಎಸ್‌ವೈ ಸರ್ಕಾರ ಮುಂದಾಗಿದೆ. ಈ ವಿಚಾರ ಕೇಳಿ ಮಗುವಿನ ತಂದೆ ಟಿವಿ 9 ಗೆ ಧನ್ಯವಾದ ತಿಳಿಸಿದ್ದಾರೆ.

ಫೆಬ್ರವರಿ 5ರಂದು ನಮ್ಮ ಟಿವಿ 9 ನಡೆಸಿದ ಅಭಿಯಾನದಿಂದ 4 ಕೋಟಿ 60 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿದ್ದು, ಇತರೆ ದಾನಿಗಳಿಂದ ಸೇರಿ ಈವರೆಗೆ ಬರೋಬ್ಬರಿ ಒಟ್ಟು 5 ಕೋಟಿ 60 ಲಕ್ಷ ರೂ. ಹಣ ಸಂಗ್ರಹವಾಗಿದೆ. ಅಂದಹಾಗೆ ಮೆಡಿಸನ್ ಗೆ ಬೇಕಾದ ಶೇಕಡಾ 35ರಷ್ಟು ಹಣ ಸಂಗ್ರಹವಾಗಿದೆ ಎಂದು Tv9ಗೆ ಪೋಷಕರು ಕೃತಜ್ಞತೆ ತಿಳಿಸಿದ್ದಾರೆ.

ಇದೀಗ ಸಂಗ್ರಹವಾಗಿರುವ ಹಣದಲ್ಲಿ ಮಗು ಉಳಿಸಿಕೊಳ್ಳೋದು ಅಸಾಧ್ಯವೇ ಸರಿ. ಹಾಗಾಗಿ ದಾನಿಗಳು ಹಣದ ಸಹಾಯ ಮಾಡಿದ್ರೆ ಪುಟ್ಟ ಕಂದಮ್ಮನನ್ನ ಉಳಿಸಿಕೊಳ್ಳಬಹುದು. ಪೋಷಕರು ಸಹ ದಾನಿಗಳ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Spinal Muscular Atrophy | ಕಂದನ ಉಳಿಸು ಕರ್ನಾಟಕ: ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜ್ಯಸಭಾ ಸದಸ್ಯ ಚಂದ್ರಶೇಖರ್..!

Published On - 7:34 am, Tue, 9 March 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್