AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ವಿಡಿಯೋ ಎಳೆದು ಹಾಕಿದ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಡಿದೆದ್ದ ದಿವಂಗತ ಅನಂತ್ ಕುಮಾರ್‌ ಪುತ್ರಿ

ಕಪ್ಪ- ನಿಮಗ್ಯಾಕೆ ಕೊಡಬೇಕು ಕಪ್ಪ. ಹೀಗಂತ ಬ್ರಿಟಿಷರ ವಿರುದ್ದ ಸ್ವಾಭಿಮಾನದಿಂದ ತೊಡೆ ತಟ್ಟಿದ್ದು ಕಿತ್ತೂರು ಚೆನ್ನಮ್ಮ. ಆದರೆ ಇದೀಗ ಎಂಥ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರೆ ಕಪ್ಪು ಕಾಣಿಕೆಯ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ನಾಯಕರು ಪರಸ್ಪರ ಕಿತ್ತಾಡುತ್ತಿದ್ದಾರೆ. ಇನ್ನು ಬಿಹಾರ ಚುನಾವಣೆಗೆ ಫಡಿಂಗ್ ವಿಚಾರವಾಗಿ ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಅವರು ಹಳೆ ವಿಡಿಯೋ ಮೂಲಕ ತಿರುಗೇಟು ನೀಡಿದ್ದಾರೆ. ಇನ್ನೊಂದೆಡೆ ತಮ್ಮ ತಂದೆ ವಿಡಿಯೋ ಎಳೆದುತಂದಿರುವುದಕ್ಕೆ ಅನಂತ್ ಕುಮಾರ್ ಪುತ್ರಿ ಸಹ ಸಿಡಿದೆದಿದ್ದಾರೆ.

ಹಳೆ ವಿಡಿಯೋ ಎಳೆದು ಹಾಕಿದ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಡಿದೆದ್ದ ದಿವಂಗತ ಅನಂತ್ ಕುಮಾರ್‌ ಪುತ್ರಿ
Ananth Kumar's Daughter
ಪ್ರಸನ್ನ ಗಾಂವ್ಕರ್​
| Edited By: |

Updated on: Oct 22, 2025 | 11:31 AM

Share

ಬೆಂಗಳೂರು, (ಅಕ್ಟೋಬರ್ 22): ಕಪ್ಪ ಕಾಣಿಕೆ- ಬ್ರಿಟಿಷರು, ರಾಜ ಮಹಾರಾಜರ ಕಾಲದಲ್ಲಿ ಜನ ಕಟ್ಟಬೇಕಿದ್ದ ತೆರಿಗೆ ಅದೇ ಕಪ್ಪ ಕಾಣಿಕೆ. ಇದೀಗ ಕರ್ನಾಟಕ ರಾಜಕೀಯ ನಾಯಕರು ಇದೇ ಕಪ್ಪ ಕಾಣಿಕೆ ವಿಷಯದಲ್ಲಿ ಕೆಸರೆರಚಾಟ ಪ್ರಾರಂಭಿಸಿದ್ದಾರೆ. ಕಪ್ಪ ಕಾಣಿಕೆ ವಿಷಯ ಮುನ್ನೆಲೆಗೆ ಬರಲು ಕಾರಣ ಬಿಹಾರ ವಿಧಾನಸಭಾ ಚುನಾವಣೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ವಾರ ತಮ್ಮ ಸಚಿವ ಸಂಪುಟದ ಸಹೋದ್ಯೋಗಿ ಮಿತ್ರರಿಗೆ ಡಿನ್ನರ ಆಯೋಜನೆ ಮಾಡಿದ್ರು. ಡಿನ್ನರ್ ಜೊತೆಗೇ ನಡೆದ ಇನ್ನರ್ ಮೀಟಿಂಗ್ ನ ಔಟ್ ಪುಟ್ ಏನು ಎಂಬುದು ಅಧಿಕೃತವಾಗಿಯೇ ಘೋಷಣೆಯಾಗಿಲ್ಲ. ತರ ತರದ ಊಟದ ಮೆನು ಜೊತೆಗೆ ರಾಜಕೀಯ ಮೆನು ಕೂಡ ಸಿದ್ದರಾಮಯ್ಯನವರ ಔತಣ ಕೂಟದಲ್ಲಿ ಮುನ್ನೆಲೆಗೆ ಬಂದಿದೆ. ಅದರಲ್ಲೊಂದು ಗಂಭೀರ ಆರೋಪ ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕಾಣಿಕೆ ಕೊಡುತ್ತಿದೆ ಎಂಬುದು. ಇದನ್ನೇ ಇಟ್ಟುಕೊಂಡು ಬಿಜೆಪಿ ನಾಯಕರು ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ.

ಹಳೇ ವಿಡಿಯೋ ಮೂಲಕ  ಪ್ರಿಯಾಂಕ್ ಖರ್ಗೆ ಟಾಂಗ್

ಹೀಗಾಗಿ ಕಮಲ ನಾಯಕರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ, ಕೌಂಟರ್ ಕೊಟ್ಟಿದ್ದು ಯಡಿಯೂರಪ್ಪ ಮತ್ತು ದಿವಂಗತ ಅನಂತ್‌ಕುಮಾರ್ ನಡುವಿನ ಸಂಭಾಷಣೆಯ ಹಳೆ ವಿಡಿಯೋ ಹರಿಬ್ಟಿಟ್ಟಿದ್ದಾರೆ. ಇದು 2017ರ ಫೆಬ್ರವರಿ 13ರಂದು ಚುನಾವಣೆಗೆ ಒಂದು ವರ್ಷವಿದ್ದಾಗ ಗುಸುಗುಸು ಮಾತನಾಡಿದ್ದು, ನೀವು ಕೊಟ್ಟಿರ್ತೀರಿ, ನಾವು ಕೊಟ್ಟಿರ್ತೀರಿ ಅದನ್ನ ಯಾರಾದ್ರೂ ಬರೆದುಕೊಳ್ತಾರಾ ಅಂದಿದ್ರು. ಈ ಹಳೆ ವಿಡಿಯೋ ಪೋಸ್ಟ್ ಮಾಡಿರೋ ಪ್ರಿಯಾಂಕ್ ಖರ್ಗೆ, ಕೇಳಿಸಿಕೊಳ್ಳಿ ಬಿಜೆಪಿಯವರೇ. ಹೈಕಮಾಂಡ್‌ಗೆ ನೀವು ಕಪ್ಪ ನೀಡಿದ್ದನ್ನ ಮರೆತುಬಿಟ್ರಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸರ್ಕಾರದಲ್ಲಿ ಭ್ರಷ್ಟಾಚಾರ ಬೇರೂರಿದೆ ಎಂಬುದಕ್ಕೆ ಇದಕ್ಕಿಂತ ಪುರಾವೆ ಬೇಕಾ? ರಾಯರೆಡ್ಡಿ ಪತ್ರ ಸಾಕ್ಷ್ಯ ಕೊಟ್ಟ ವಿಜಯೇಂದ್ರ

ಖರ್ಗೆ ವಿರುದ್ಧ ಕೆರಳಿದ ಅನಂತ್ ಕುಮಾರ್‌ ಪುತ್ರಿ

ಇದಕ್ಕೆ ದಿವಂಗತ ಅನಂತ್ ಕುಮಾರ್‌ ಪುತ್ರಿ ಐಶ್ವರ್ಯ ಕೆರಳಿದ್ದು, ಲಂಚದ ಡೈರಿ ವಿಚಾರ ಪ್ರಸ್ತಾಪಿಸಿ ಟ್ವೀಟ್‌ನಲ್ಲೇ ಟಾಂಗ್ ಕೊಟ್ಟಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ ಆರ್‌ಎಸ್‌ಎಸ್ ತೆಗಳುವ ನಿಮ್ಮ ವಿಫಲ ಯತ್ನದ ನಂತರ ಈಗ ನೀವು ಕರ್ನಾಟಕಕ್ಕಾಗಿ ಕೆಲಸ ಮಾಡಿದ್ದ, ನಿಮ್ಮ ಪಕ್ಷದವರೇ ಮೆಚ್ಚುತ್ತಿದ್ದ ಅನಂತಕುಮಾರ್ ಅವರ ಹಿಂದೆ ಬೀಳಲು ನಿರ್ಧರಿಸಿದ್ದೀರಿ. ಒಂದು ವೇಳೆ ನೀವು ಮರೆತಿದ್ದರೆ ನಾನು ನಿಮಗೆ ನೆನಪಿಸುತ್ತೇನೆ. ನಿಮ್ಮ ಪಕ್ಷದ ಹೈಕಮಾಂಡ್‌ ಕುರಿತ ಅಕ್ಷರಗಳು ಮತ್ತು ಅವರಿಗೆ ನೀಡಲಾದ ಭಾರೀ ಮೊತ್ತದ ಲಂಚದ ಕುರಿತ ಕಾಂಗ್ರೆಸ್ ಮುಖ್ಯಮಂತ್ರಿಯ ಕುಖ್ಯಾತ ಡೈರಿ ಬಗ್ಗೆ ನಿಮ್ಮ ಈ ಟ್ವೀಟ್ ನಿಮ್ಮ ಪಕ್ಷದ ನಾಯಕರನ್ನೇ ಕಾಡಬಹುದು. ಸತ್ಯ ಯಾವತ್ತೂ ಬಹಿರಂಗವಾಗುವ ಗುಣ ಹೊಂದಿದೆ ಎಂಬುದು ನೆನಪಿರಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಒಟ್ಟಿನಲ್ಲಿ ಇತ್ತೀಚಿನ ರಾಜಕೀಯ ದಿನಗಳಲ್ಲಿ ಚುನಾವಣೆ ಅಂದ್ರೆ ಅದು ನೈತಿಕ ಚೌಕಟ್ಟುಗಳನ್ನು ಮೀರಿ ಮುಂದೆ ಹೋಗಿಬಿಟ್ಟಿದೆ. ನೋಟು ಇಲ್ಲದಿದ್ದರೆ ಓಟೂ ಇಲ್ಲ ಎಂಬಂತ ಪರಿಸ್ಥಿತಿ ನಾಗರಿಕ ಸಮಾಜದಲ್ಲಿ ನಿರ್ಮಾಣ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಕಪ್ಪ ಕಾಣಿಕೆಯ ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ನಾಯಕರು ನಡೆಸಿರುವ ವಾಕ್ ಸಮರ ಇವತ್ತಿನ ರಾಜಕೀಯ ಪರಿಸ್ಥಿತಿಯ ಕೈಗನ್ನಡಿ ಎನ್ನಬಹುದು.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!