AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಐಡಿ ಎಡಿಜಿಪಿಯಾಗಿ ಬಿಜಯ್ ಕುಮಾರ್​ ಸಿಂಗ್ ನೇಮಕ; ಕರ್ನಾಟಕ ಸರ್ಕಾರದಿಂದ ಆದೇಶ

ಗೌರಿ ಲಂಕೇಶ್ ಹತ್ಯೆ ಕೇಸ್​ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಬಿಜಯ್ ಕುಮಾರ್​ ಸಿಂಗ್ ಅವರು ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸೇವೆಗೆ ತೆರಳಿದ್ದರು. ಇದೀಗ ಮತ್ತೆ ರಾಜ್ಯ ಸೇವೆಗೆ ಮರಳಿದ ಬಿಜಯ್ ಸಿಂಗ್ ಅವರನ್ನು ಸಿಐಡಿ ಎಡಿಜಿಪಿಯನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಸಿಐಡಿ ಎಡಿಜಿಪಿಯಾಗಿ ಬಿಜಯ್ ಕುಮಾರ್​ ಸಿಂಗ್ ನೇಮಕ; ಕರ್ನಾಟಕ ಸರ್ಕಾರದಿಂದ ಆದೇಶ
ಪ್ರಾತಿನಿಧಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on: Dec 18, 2023 | 7:17 AM

Share

ಬೆಂಗಳೂರು, ಡಿ.18: ಕೇಂದ್ರ ಸೇವೆಯಿಂದ ಮರಳಿದ ಹಿರಿಯ ಅಧಿಕಾರಿ ಬಿಜಯ್ ಕುಮಾರ್​ ಸಿಂಗ್ (B.K.Singh) ಅವರನ್ನು ಸಿಐಡಿ (CID) ಎಡಿಜಿಪಿಯನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ​ ತನಿಖಾ ತಂಡ ಎಸ್​ಐಟಿಯ ಮುಖ್ಯಸ್ಥರಾಗಿದ್ದ ಬಿಜಯ್ ಸಿಂಗ್, ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸೇವೆಗೆ ತೆರಳಿದ್ದರು. ಇದೀಗ ಮತ್ತೆ ರಾಜ್ಯ ಸೇವೆಗೆ ಮರಳಿದ ಹಿನ್ನೆಲೆ ಸಿಐಡಿ ಎಡಿಜಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ ಒಪ್ಪಿಸಿ 2019ರಲ್ಲಿ ಆದೇಶಿಸಿತ್ತು. ಬಿಜಯ್ ಸಿಂಗ್ ನೇತೃತ್ವದಲ್ಲಿ 21 ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು. ಈ ಎಲ್ಲಾ ಅಧಿಕಾರಿಗಳು ಹೊಂದಿದ್ದ ಪದವಿ, ಜವಾಬ್ದಾರಿಗಳಿಂದ ವಿಮುಕ್ತಿಗೊಳಿಸಲಾಗಿತ್ತು.

ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ಬರಹಗಳನ್ನು ಬರೆಯುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ 18 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮೋಹನ್ ನಾಯಕ್​ಗೆ ಇತ್ತೀಚೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಡೀ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆಯಾದ ಮೊದಲ ಆರೋಪಿ ಈತನಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ