AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಐಡಿ ಎಡಿಜಿಪಿಯಾಗಿ ಬಿಜಯ್ ಕುಮಾರ್​ ಸಿಂಗ್ ನೇಮಕ; ಕರ್ನಾಟಕ ಸರ್ಕಾರದಿಂದ ಆದೇಶ

ಗೌರಿ ಲಂಕೇಶ್ ಹತ್ಯೆ ಕೇಸ್​ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಬಿಜಯ್ ಕುಮಾರ್​ ಸಿಂಗ್ ಅವರು ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸೇವೆಗೆ ತೆರಳಿದ್ದರು. ಇದೀಗ ಮತ್ತೆ ರಾಜ್ಯ ಸೇವೆಗೆ ಮರಳಿದ ಬಿಜಯ್ ಸಿಂಗ್ ಅವರನ್ನು ಸಿಐಡಿ ಎಡಿಜಿಪಿಯನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಸಿಐಡಿ ಎಡಿಜಿಪಿಯಾಗಿ ಬಿಜಯ್ ಕುಮಾರ್​ ಸಿಂಗ್ ನೇಮಕ; ಕರ್ನಾಟಕ ಸರ್ಕಾರದಿಂದ ಆದೇಶ
ಪ್ರಾತಿನಿಧಿಕ ಚಿತ್ರ
Shivaprasad B
| Edited By: Rakesh Nayak Manchi|

Updated on: Dec 18, 2023 | 7:17 AM

Share

ಬೆಂಗಳೂರು, ಡಿ.18: ಕೇಂದ್ರ ಸೇವೆಯಿಂದ ಮರಳಿದ ಹಿರಿಯ ಅಧಿಕಾರಿ ಬಿಜಯ್ ಕುಮಾರ್​ ಸಿಂಗ್ (B.K.Singh) ಅವರನ್ನು ಸಿಐಡಿ (CID) ಎಡಿಜಿಪಿಯನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ​ ತನಿಖಾ ತಂಡ ಎಸ್​ಐಟಿಯ ಮುಖ್ಯಸ್ಥರಾಗಿದ್ದ ಬಿಜಯ್ ಸಿಂಗ್, ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸೇವೆಗೆ ತೆರಳಿದ್ದರು. ಇದೀಗ ಮತ್ತೆ ರಾಜ್ಯ ಸೇವೆಗೆ ಮರಳಿದ ಹಿನ್ನೆಲೆ ಸಿಐಡಿ ಎಡಿಜಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ ಒಪ್ಪಿಸಿ 2019ರಲ್ಲಿ ಆದೇಶಿಸಿತ್ತು. ಬಿಜಯ್ ಸಿಂಗ್ ನೇತೃತ್ವದಲ್ಲಿ 21 ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು. ಈ ಎಲ್ಲಾ ಅಧಿಕಾರಿಗಳು ಹೊಂದಿದ್ದ ಪದವಿ, ಜವಾಬ್ದಾರಿಗಳಿಂದ ವಿಮುಕ್ತಿಗೊಳಿಸಲಾಗಿತ್ತು.

ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ಬರಹಗಳನ್ನು ಬರೆಯುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ 18 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮೋಹನ್ ನಾಯಕ್​ಗೆ ಇತ್ತೀಚೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಡೀ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆಯಾದ ಮೊದಲ ಆರೋಪಿ ಈತನಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!