AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಐಡಿ ಎಡಿಜಿಪಿಯಾಗಿ ಬಿಜಯ್ ಕುಮಾರ್​ ಸಿಂಗ್ ನೇಮಕ; ಕರ್ನಾಟಕ ಸರ್ಕಾರದಿಂದ ಆದೇಶ

ಗೌರಿ ಲಂಕೇಶ್ ಹತ್ಯೆ ಕೇಸ್​ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಬಿಜಯ್ ಕುಮಾರ್​ ಸಿಂಗ್ ಅವರು ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸೇವೆಗೆ ತೆರಳಿದ್ದರು. ಇದೀಗ ಮತ್ತೆ ರಾಜ್ಯ ಸೇವೆಗೆ ಮರಳಿದ ಬಿಜಯ್ ಸಿಂಗ್ ಅವರನ್ನು ಸಿಐಡಿ ಎಡಿಜಿಪಿಯನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಸಿಐಡಿ ಎಡಿಜಿಪಿಯಾಗಿ ಬಿಜಯ್ ಕುಮಾರ್​ ಸಿಂಗ್ ನೇಮಕ; ಕರ್ನಾಟಕ ಸರ್ಕಾರದಿಂದ ಆದೇಶ
ಪ್ರಾತಿನಿಧಿಕ ಚಿತ್ರ
Shivaprasad B
| Edited By: Rakesh Nayak Manchi|

Updated on: Dec 18, 2023 | 7:17 AM

Share

ಬೆಂಗಳೂರು, ಡಿ.18: ಕೇಂದ್ರ ಸೇವೆಯಿಂದ ಮರಳಿದ ಹಿರಿಯ ಅಧಿಕಾರಿ ಬಿಜಯ್ ಕುಮಾರ್​ ಸಿಂಗ್ (B.K.Singh) ಅವರನ್ನು ಸಿಐಡಿ (CID) ಎಡಿಜಿಪಿಯನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ​ ತನಿಖಾ ತಂಡ ಎಸ್​ಐಟಿಯ ಮುಖ್ಯಸ್ಥರಾಗಿದ್ದ ಬಿಜಯ್ ಸಿಂಗ್, ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ಸೇವೆಗೆ ತೆರಳಿದ್ದರು. ಇದೀಗ ಮತ್ತೆ ರಾಜ್ಯ ಸೇವೆಗೆ ಮರಳಿದ ಹಿನ್ನೆಲೆ ಸಿಐಡಿ ಎಡಿಜಿಪಿಯಾಗಿ ನಿಯುಕ್ತಿಗೊಳಿಸಲಾಗಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ ಒಪ್ಪಿಸಿ 2019ರಲ್ಲಿ ಆದೇಶಿಸಿತ್ತು. ಬಿಜಯ್ ಸಿಂಗ್ ನೇತೃತ್ವದಲ್ಲಿ 21 ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು. ಈ ಎಲ್ಲಾ ಅಧಿಕಾರಿಗಳು ಹೊಂದಿದ್ದ ಪದವಿ, ಜವಾಬ್ದಾರಿಗಳಿಂದ ವಿಮುಕ್ತಿಗೊಳಿಸಲಾಗಿತ್ತು.

ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

ಬಲಪಂಥೀಯ ಸಿದ್ಧಾಂತಗಳನ್ನು ವಿರೋಧಿಸುತ್ತಾ ಬರಹಗಳನ್ನು ಬರೆಯುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ 18 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಆರೋಪಿಗಳಿಗೆ ಆಶ್ರಯ ನೀಡಿದ್ದ ಮೋಹನ್ ನಾಯಕ್​ಗೆ ಇತ್ತೀಚೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇಡೀ ಪ್ರಕರಣದಲ್ಲಿ ಜಾಮೀನು ಮೇಲೆ ಬಿಡುಗಡೆಯಾದ ಮೊದಲ ಆರೋಪಿ ಈತನಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivaprasad B
Shivaprasad B
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!