AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆಕ್ಟ್ರಾನಿಕ್ ಸಿಟಿ: ಮಳೆಗೆ ಸ್ಕಿಡ್ ಆಗಿ ಬಿದ್ದ ದ್ವಿಚಕ್ರ ವಾಹನ ಸವಾರ, ತಲೆ ಮೇಲೆ ಹತ್ತಿದ ಐಚರ್ ವಾಹನ, ಸಾವು

Electronic city: ಸವಾರ ಕಿರಣ್ ಕುಮಾರ್ ತನ್ನ ಸ್ಕೂಟಿ ವಾಹನ ಓಡಿಸಿಕೊಂಡು ಸಿಲ್ಕ್ ಬೋರ್ಡ್ ಕಡೆ ಹೊರಟಿದ್ದ. ಮಳೆಗೆ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದಾನೆ. ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಐಚರ್ ವಾಹನ ಆತನ ತಲೆಯ ಮೇಲೆ ಚಲಿಸಿದೆ.

ಎಲೆಕ್ಟ್ರಾನಿಕ್ ಸಿಟಿ: ಮಳೆಗೆ ಸ್ಕಿಡ್ ಆಗಿ ಬಿದ್ದ ದ್ವಿಚಕ್ರ ವಾಹನ ಸವಾರ, ತಲೆ ಮೇಲೆ ಹತ್ತಿದ ಐಚರ್ ವಾಹನ, ಸಾವು
ಎಲೆಕ್ಟ್ರಾನಿಕ್ ಸಿಟಿ: ಮಳೆಗೆ ಸ್ಕಿಡ್ ಆಗಿ ಬಿದ್ದ ದ್ವಿಚಕ್ರ ವಾಹನ ಸವಾರ, ತಲೆ ಮೇಲೆ ಹತ್ತಿದ ಐಚರ್ ವಾಹನ, ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Aug 04, 2022 | 6:47 PM

Share

ಬೆಂಗಳೂರು: ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ಬೈಕ್​ಗೆ ಹಿಂಬದಿಯಿಂದ ಈಚರ್ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬೊಮ್ಮಸಂದ್ರದ ನಿವಾಸಿ ಕಿರಣ್ ಕುಮಾರ್ (30) ಮೃತ ದುರ್ದೈವಿ. ಅಪಘಾತದಿಂದ ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಬಳಿ ಕೆಲಕಾಲ ಟ್ರಾಫಿಕ್‌ ಜಾಮ್ ಉಂಟಾಗಿತ್ತು.

ಸವಾರ ಕಿರಣ್ ಕುಮಾರ್ ತನ್ನ ಸ್ಕೂಟಿ ವಾಹನ ಓಡಿಸಿಕೊಂಡು ಸಿಲ್ಕ್ ಬೋರ್ಡ್ ಕಡೆ ಹೊರಟಿದ್ದ. ಮಳೆಗೆ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದಾನೆ. ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಐಚರ್ ವಾಹನ ಆತನ ತಲೆಯ ಮೇಲೆ ಚಲಿಸಿದೆ. ಮೃತ ವ್ಯಕ್ತಿಯ ಶವ ಸೇಂಟ್ ಜಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ‌ ನೀಡಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮೃತ ವ್ಯಕ್ತಿಯ ಕುರಿತು ಹೆಚ್ಚಿನ ಮಾಹಿತಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಬೆಂಗಳೂರು-ಚೆನೈ ಹೈವೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

Tumkur Rains: ಭಾರಿ ಮಳೆಯಿಂದ ಹುಂಜಿನ ಹಳ್ಳದಲ್ಲಿ ಕೊಚ್ಚಿ ಹೋಗಿ ವೃದ್ಧೆ ಸಾವು

ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕುರುಡಗಾನಹಳ್ಳಿ ಬಳಿ ಭಾರಿ ಮಳೆಯಿಂದ ಹುಂಜಿನಹಳ್ಳದಲ್ಲಿ ಕೊಚ್ಚಿ ಹೋಗಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಲಕ್ಷ್ಮಮ್ಮ(70) ಸಾವನ್ನಪ್ಪಿದ ಮಹಿಳೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಮಧ್ಯೆ, ತುಮಕೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ತಿಪಟೂರು ತಾಲೂಕಿನ ಹಲವು ಗ್ರಾಮಗಳು ಜಲಾವೃತಗೊಂಡಿವೆ. ಈಡೇನಹಳ್ಳಿಯಲ್ಲಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದೆ. ಗ್ರಾಮಕ್ಕೆ ತಹಶೀಲ್ದಾರ್ ಚಂದ್ರಶೇಖರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಿಪಟೂರು KSRTC ಬಸ್ ನಿಲ್ದಾಣಕ್ಕೂ ಮಳೆ ನೀರು ನುಗ್ಗಿದೆ.

ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ತೋಟಗಳು ಜಲಾವೃತವಾಗಿವೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚೀಲಗಾನಹಳ್ಳಿಯಲ್ಲಿ ತೋಟದ ಮನೆಯಲ್ಲಿ ವಾಸವಿದ್ದ ಕುಟುಂಬವೊಂದನ್ನ ಅಗ್ನಿಶಾಮಕ ದಳ ರಕ್ಷಿಸಿದೆ. ತೋಟದ ಮನೆಯಲ್ಲಿ ಸಿಲುಕಿದ್ದ ತಾಯಿ ಮಗುವನ್ನ ರಕ್ಷಣೆ ಮಾಡಲಾಗಿದೆ.

ಬಸ್​ ಅಪಘಾತ: ಮಾನವೀಯತೆ ಮರೆತೇ ಬಿಟ್ರಾ ಮನುಷ್ಯರು-ಪೊಲೀಸರು!

ರಾಯಚೂರು: ಮಾನವೀಯತೆಯನ್ನೇ ಮರೆತು ಬಿಟ್ರಾ ಮನುಷ್ಯರು! ಅಪಘಾತವಾಗಿ ಅರ್ಧ ಗಂಟೆಯಾದರೂ ಅತ್ತ, ಬಸ್ ಡಿಪೊ‌ ಅಧಿಕಾರಿಗಳು ಸ್ಥಳಕ್ಕೆ ಬಾರದೇಹೋದರು, ಇತ್ತ, ಮಹಾಜನತೆ ಕೂಡ ಗಾಯಾಳುವಿನ ಸಹಾಯಕ್ಕೆ ಬಾರದೇ ತಮ್ಮಲ್ಲಿ ಮನುಷ್ಯತ್ವ ಎಂಬುದು ನಶಿಸಿಬಿಟ್ಟಿದೆ ಎಂದು ತೋರಿಸಿಕೊಟ್ಟಿದ್ದಾರೆ. ಕೊನೆಗೆ ಕಾಲೇಜು ವಿದ್ಯಾರ್ಥಿಗಳಿಂದ ಗಾಯಾಳು ರಕ್ಷಣೆಯಾಗಿದೆ.

Published On - 6:33 pm, Thu, 4 August 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ