AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ರೂಲ್ಸ್ ಉಲ್ಲಂಘನೆಯಲ್ಲಿ ಬೈಕ್​ ಸವಾರರದ್ದೇ ಮೇಲುಗೈ; ಒಂದೇ ದಿನ 4.33 ಲಕ್ಷ ದಂಡ

ಪಶ್ಚಿಮ ಸಂಚಾರಿ ವಿಭಾಗದ ಪೊಲೀಸರು ನಿನ್ನೆ ದಿನವಿಡೀ ವಿಶೇಷ ಕಾರ್ಯಾಚರಣೆ ನಡೆಸಿದ್ದು ಒಂದೇ ದಿನ 851 ಪ್ರಕರಣಗಳನ್ನು ದಾಖಲಿಸಿ ಬರೋಬ್ಬರಿ 4.33 ಲಕ್ಷ ದಂಡ ಹಾಕಲಾಗಿದೆ. ಹೆಲ್ಮೆಟ್ ಇಲ್ಲದವರ ವಿರುದ್ದವೇ ಬರೋಬ್ಬರಿ ಎರಡೂವರೆ ಲಕ್ಷಕ್ಕೂ ಅಧಿಕ ರೂ ದಂಡ ಹಾಕಲಾಗಿದೆ.

ಟ್ರಾಫಿಕ್ ರೂಲ್ಸ್ ಉಲ್ಲಂಘನೆಯಲ್ಲಿ ಬೈಕ್​ ಸವಾರರದ್ದೇ ಮೇಲುಗೈ; ಒಂದೇ ದಿನ 4.33 ಲಕ್ಷ ದಂಡ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Jul 04, 2024 | 12:25 PM

Share

ಬೆಂಗಳೂರು, ಜುಲೈ.04: ಟ್ರಾಫಿಕ್ ರೂಲ್ಸ್​ನ (Traffic Rules) ನಿಜಕ್ಕೂ ಜನ ಪಾಲಿಸುತಿದ್ದಾರಾ? ಎಂಬ ಪ್ರಶ್ನೆ ಎದ್ದಿದೆ. ದಂಡದ ಮೌಲ್ಯ ಹೆಚ್ಚಾದರೂ ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಹೆಚ್ಚಾಗಿ ಬೈಕ್ ಸವಾರರಿಂದಲೇ ಟ್ರಾಫಿಕ್ ರೂಲ್ಸ್ ಉಲ್ಲಂಘನೆಯಾಗುತ್ತಿದೆ. ನಗರದಲ್ಲಿ ನಡೆಯುವ ಅಪಘಾತ ಪ್ರಕರಣಗಳಲ್ಲಿ ಬೈಕ್ ಸವಾರದ್ದೇ ಮೇಲುಗೈ. ಈ ಹಿನ್ನಲೆ ಪಶ್ಚಿಮ ಸಂಚಾರಿ ವಿಭಾಗದ ಪೊಲೀಸರು ನಿನ್ನೆ ದಿನವಿಡೀ ವಿಶೇಷ ಕಾರ್ಯಾಚರಣೆ ನಡೆಸಿದ್ದು ಒಂದೇ ದಿನ 851 ಪ್ರಕರಣಗಳು ದಾಖಲಾಗಿವೆ. ಬರೋಬ್ಬರಿ 4.33 ಲಕ್ಷ ದಂಡ ಹಾಕಿದ್ದಾರೆ.

ಕಾರ್ಯಾಚರಣೆ ವೇಳೆ ಬೈಕ್ ಸವಾರರ ಬೇಜವಾಬ್ದಾರಿ ಚಾಲನೆ ಪತ್ತೆಯಾಗಿದೆ. ಹೆಲ್ಮೆಟ್ ಇಲ್ಲ‌, ರಾಂಗ್ ರೂಟ್​ನಲ್ಲಿ ಓಡಾಟ. ಸೇರಿದಂತೆ ನಾನಾ ಟ್ರಾಫಿಕ್ಸ್ ರೂಲ್ಸ್ ಉಲ್ಲಂಘನೆಯ ಕೇಸ್​ಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ ಹೆಲ್ಮೆಟ್ ಇಲ್ಲದ ಬೈಕ್ ಸವಾರರ ವಿರುದ್ಧ 500ಕ್ಕೂ ಹೆಚ್ಚು ಕೇಸ್​ಗಳು ದಾಖಲಾಗಿವೆ. ಹೆಲ್ಮೆಟ್ ಹಾಕದೇ ಬೈಕ್ ಚಾಲನೆ ಮಾಡಿದವರ ವಿರುದ್ದವೇ ಬರೋಬ್ಬರಿ ಎರಡೂವರೆ ಲಕ್ಷಕ್ಕೂ ಅಧಿಕ ರೂ ದಂಡ ಹಾಕಲಾಗಿದೆ.

ಇದನ್ನೂ ಓದಿ: ಸ್ಟ್ಯಾಂಡರ್ಡ್ ಡಿಡಕ್ಷನ್ ಒಂದು ಲಕ್ಷ ರೂಗೆ ಏರಿಕೆ ಸಾಧ್ಯತೆ; ಬಜೆಟ್​ನಿಂದ ತೆರಿಗೆ ಪಾವತಿದಾರರಿಗೆ ಖುಷಿ ಸುದ್ದಿ..!

ನಿನ್ನೆಯ ಕಾರ್ಯಾಚರಣೆಯ ದಂಡದ ವಿವರದಲ್ಲಿ ಬೈಕ್ ಸವಾರರ ಪಟ್ಟಿಯೇ ಹೆಚ್ಚು. ಹೆಲ್ಮೆಟ್ ಧರಿಸದೇ ಚಾಲನೆ ಮಾಡಿದ 511 ಕೇಸ್ ಸಂಬಂಧ 2,51,500ರೂ ದಂಡ ವಿಧಿಸಲಾಗಿದೆ. ಒನ್ ವೇ ರಾಂಗ್ ರೂಟ್​ನ 55 ಕೇಸ್ ಸಂಬಂಧ 27,600 ರೂ ದಂಡ ಬಿದ್ದಿದ್ದು. ರಾಂಗ್ ಪಾರ್ಕಿಂಗ್​ನ 69 ಕೇಸ್ ಸಂಬಂಧ 37,800ರೂ ದಂಡ ವಿಧಿಸಲಾಗಿದೆ. ಫುಟ್ ಪಾತ್ ಪಾರ್ಕಿಂಗ್ ಸಂಬಂಧ 6 ಕೇಸ್ ಸಂಬಂಧ 5 ಸಾವಿರ ದಂಡ ವಿಧಿಸಲಾಗಿದೆ. ರೇಡಿಂಗ್ ವೇಳೆ ಮೊಬೈಲ್ ಬಳಕೆ 7 ಕೇಸ್ ದಾಖಲಾಗಿದ್ದು 10,000ರೂ ದಂಡ ಹಾಕಲಾಗಿದೆ. ತ್ರಿಬಲ್ ರೇಡಿಂಗ್ 10 ಕೇಸ್ ಸಂಬಂಧ 6 ಸಾವಿರ ರೂ ದಂಡ ಬಿದ್ದಿದೆ. ಇತರೆ ಸಂಚಾರಿ ನಿಯಮ ಉಲ್ಲಂಘನೆಯ 184 ಪ್ರಕರಣ ಸಂಬಂಧ 90,700ರೂ ದಂಡ ಹಾಕಲಾಗಿದ್ದು ಒಟ್ಟು 851 ಪ್ರಕರಣ ಸಂಬಂಧ 4,33,600ರೂ ದಂಡ ವಿಧಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್