AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವ್ಯಾಕ್ಸಿನ್ ಬಗ್ಗೆ ಬಿಲ್ ಗೇಟ್ಸ್ ಅವರೇ ಮೆಚ್ಚಿದ್ದಾರೆ; ಕಾಂಗ್ರೆಸ್ ಟೀಕೆ ಮಾಡಿಕೊಂಡು ಕೂತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Bill gates: ಕಾಂಗ್ರೆಸ್ ಪಕ್ಷವು ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ. ಒಂದು ದೇಶವಾಗಿ ಶತಮಾನದ ವ್ಯಾಕ್ಸಿನೇಷನ್ ದೊಡ್ಡ ಸಾಧನೆ. 9 ತಿಂಗಳ ಅವಧಿಯಲ್ಲಿ ನೂರು ಕೋಟಿ‌ ಜನರಿಗೆ ನಾವು ವ್ಯಾಕ್ಸಿನ್ ಕೊಟ್ಟಿದ್ದು ಜಗತ್ತೇ ಕೊಂಡಾಡಿದೆ. ಬಿಲ್ ಗೆಟ್ಸ್ ಸಹಿತ ಈ ಬಗ್ಗೆ ಟ್ವಿಟ್‌ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಕೊವಿಡ್ ವ್ಯಾಕ್ಸಿನ್ ಬಗ್ಗೆ ಬಿಲ್ ಗೇಟ್ಸ್ ಅವರೇ ಮೆಚ್ಚಿದ್ದಾರೆ; ಕಾಂಗ್ರೆಸ್ ಟೀಕೆ ಮಾಡಿಕೊಂಡು ಕೂತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕೊವಿಡ್ ವ್ಯಾಕ್ಸಿನ್ ಬಗ್ಗೆ ಬಿಲ್ ಗೇಟ್ಸ್ ಅವರೇ ಮೆಚ್ಚಿದ್ದಾರೆ; ಕಾಂಗ್ರೆಸ್ ಟೀಕೆ ಮಾಡಿಕೊಂಡು ಕೂತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
TV9 Web
| Edited By: |

Updated on:Oct 23, 2021 | 1:35 PM

Share

ಹುಬ್ಬಳ್ಳಿ: ಕೋವಿಡ್​ ವಿರುದ್ಧದ ಸಮದಲ್ಲಿ ಭಾರತ ಸರ್ಕಾರ ಸಾಧಿಸಿರುವ ಶತಕೋಟಿ ಕೋವ್ಯಾಕ್ಸಿನ್ ವಿರುದ್ಧ ಕಾಂಗ್ರೆಸ್ ಟೀಕೆ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯೆ ನೀಡಿದ್ದು, ಕೊವಿಡ್ ವ್ಯಾಕ್ಸಿನ್ ಬಗ್ಗೆ ಬಿಲ್ ಗೇಟ್ಸ್ ಅವರೇ ಮೆಚ್ಚಿದ್ದಾರೆ. ಆ ಬಗ್ಗೆ ಟ್ವಿಟ್‌ ಮಾಡಿದ್ದಾರೆ. ಅಂತಹುದರಲ್ಲಿ ಕಾಂಗ್ರೆಸ್ ಪಕ್ಷ ಇನ್ನೂ ಟೀಕೆ ಮಾಡಿಕೊಂಡು ಕೂತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಪಕ್ಷವು ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ. ಒಂದು ದೇಶವಾಗಿ ಶತಮಾನದ ವ್ಯಾಕ್ಸಿನೇಷನ್ ದೊಡ್ಡ ಸಾಧನೆ. 9 ತಿಂಗಳ ಅವಧಿಯಲ್ಲಿ ನೂರು ಕೋಟಿ‌ ಜನರಿಗೆ ನಾವು ವ್ಯಾಕ್ಸಿನ್ ಕೊಟ್ಟಿದ್ದು ಜಗತ್ತೇ ಕೊಂಡಾಡಿದೆ. ಬಿಲ್ ಗೆಟ್ಸ್ ಸಹಿತ ಈ ಬಗ್ಗೆ ಟ್ವಿಟ್‌ ಮಾಡಿದ್ದಾರೆ. ಆದರೆ ಇಂಥ ನಾಯಕರು (ಕಾಂಗ್ರೆಸ್) ಇರುವುದು ನಮ್ಮ ದೇಶದ ದೌರ್ಭಾಗ್ಯವೇ ಸರಿ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಇಡೀ ಜಗತ್ತಿನಲ್ಲಿ 700 ಕೋಟಿ ವ್ಯಾಕ್ಸಿನ್ ಆಗಿದೆ. ಅದರಲ್ಲಿ 100 ಕೋಟಿ ಭಾರತದಲ್ಲಿ ಆಗಿದೆ. ಸಿದ್ಧರಾಮಯ್ಯನವರು ಹಾಗೂ ಅವರ ಮುಖಂಡರು ರಾಹುಲ್ ಗಾಂಧಿ ತರಹ ನೀವು ಆಡಬೇಡಿ. ರಾಹುಲ್ ಗಾಂಧಿಗೆ ಅರ್ಥ ಆಗಲ್ಲ, ನೀವು ಯಾಕೆ ಹೀಗೆ ಮಾತಾಡ್ತಿರಿ ಎಂದು ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು.

ಮೋದಿ ಅವರಿಗೆ ಈ ಕ್ರೆಡಿಟ್ ಕೊಡಬೇಕು ಅಂತಾ ನಾವು‌ ಬಯಸಿಲ್ಲ, ‌‌ಸ್ವತಃ ಮೋದಿನೇ ಬಯಸಿಲ್ಲ. ದೇಶಕ್ಕೆ ಈ ಕ್ರೆಡಿಟ್ ಕೊಡಿ ಎಂದು ಅವರು ಹೇಳಿದರು.

(Bill gates tweet appreciated india’s 100 crore vaccination but congres is criticising says union minister pralhad joshi)

Published On - 1:31 pm, Sat, 23 October 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?