AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ, ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು ಎಂದ ಮಾಧುಸ್ವಾಮಿ

40% ದಂಧೆ ಮಾಡೋಕೆ ಅವರು ಮಂತ್ರಿಯಲ್ಲ, ದುಡ್ಡಿಗೆ ಸರಿಯಾದ ದಾಖಲೆ ನೀಡಿದ್ರೆ ನಮ್ಮ ನಿಮ್ಮ ಮಾತುಗಳು ಬಂದ್ ಆಗುತ್ತೆ ಎಂದು ಸಚಿವ ಮಾಧುಸ್ವಾಮಿ ಸಮರ್ಥನೆ ನೀಡಿದ್ದಾರೆ.

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ, ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು ಎಂದ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ
TV9 Web
| Edited By: |

Updated on:Mar 03, 2023 | 1:20 PM

Share

ಮಂಡ್ಯ: ‘40% ದಂಧೆ ಮಾಡೋಕೆ ಅವರು ಮಂತ್ರಿಯಲ್ಲ, ದುಡ್ಡಿಗೆ ಸರಿಯಾದ ದಾಖಲೆ ನೀಡಿದ್ರೆ ನಮ್ಮ ನಿಮ್ಮ ಮಾತುಗಳು ಬಂದ್ ಆಗುತ್ತೆ. ನಾವು ಅದರ ಬಗ್ಗೆ ಕಮೆಂಟ್ ಮಾಡೋಕೆ ಅಗಲ್ಲ, ಶಾಸಕರು, ಸಿಎಂ ಯಾಕೆ ರಾಜೀನಾಮೆ ಕೊಡಬೇಕು‌. ಅವರ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ‌. ಎಸಿಬಿಯಲ್ಲಿ ಒಬ್ಬ ಆಫೀಸರ್​ ಆಗಿದ್ದು, ದುಡ್ಡು ತೆಗೆದುಕೊಂಡಿದ್ದಾನೆ ಅದರ ಮುಂದಿನ ಪರಿಣಾಮ ಅವನು ಎದುರಿಸುತ್ತಾನೆ ಎಂದು ಸಚಿವ ಮಾಧುಸ್ವಾಮಿ(J.C Madhuswamy) ಹೇಳಿದರು.

ಬಿಜೆಪಿ ಶಾಸಕನ ಮಗನ ಮನೆಯಲ್ಲಿ ಕೋಟಿಗಟ್ಟಲೇ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಹುಲಿಕೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ ‘ವಿರೂಪಾಕ್ಷಪ್ಪನ ಮಗ ಎಸಿಬಿಯಲ್ಲಿ ಒಬ್ಬ ಆಫೀಸರ್, ಅವನು ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡುತ್ತಾರೆ. ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಬಿಜೆಪಿ ಶಾಸಕ, ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ​: ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ, ಕಾಂಗ್ರೆಸ್ ಅವಧಿಯ ಎಲ್ಲ ಕೇಸ್​ ತನಿಕೆಯಾಗಲಿದೆ ಎಂದ ಸಿಎಂ

ಕಾಂಗ್ರೆಸ್‌ನವರಿಗೆ ಏನು ಇಲ್ಲ, ಏನಾದ್ರು ಸಿಕ್ಕಿದರೆ ದೊಡ್ಡದು ಮಾಡಿಕೊಂಡು ಹೋಗ್ತಾರೆ, ದುಡ್ಡು ಸಿಕ್ಕ ತಕ್ಷಣ ಭ್ರಷ್ಟಾಚಾರ ಎನ್ನೊಕೆ ಆಗಲ್ಲ, ಮೊದಲು ಭ್ರಷ್ಟಾಚಾರ ಸಾಬೀತು ಆಗಬೇಕು. ಹಣ ಕೊಟ್ಟವರು, ತೆಗೆದುಕೊಂಡವರು ಎಲ್ಲಾ ಹೇಳಿಕೆ ತೆಗೆದುಕೊಳ್ಳಬೇಕು. ದುಡ್ಡಿಗೆ ದಾಖಲೆ ಸರಿಯಾಗಿ ಇದ್ರೆ ನಮ್ಮ ನಿಮ್ಮ ಮಾತುಗಳು ಬಂದ್ ಆಗುತ್ತೆ ಎಂದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Fri, 3 March 23