AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ, ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು ಎಂದ ಮಾಧುಸ್ವಾಮಿ

40% ದಂಧೆ ಮಾಡೋಕೆ ಅವರು ಮಂತ್ರಿಯಲ್ಲ, ದುಡ್ಡಿಗೆ ಸರಿಯಾದ ದಾಖಲೆ ನೀಡಿದ್ರೆ ನಮ್ಮ ನಿಮ್ಮ ಮಾತುಗಳು ಬಂದ್ ಆಗುತ್ತೆ ಎಂದು ಸಚಿವ ಮಾಧುಸ್ವಾಮಿ ಸಮರ್ಥನೆ ನೀಡಿದ್ದಾರೆ.

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ, ಶಾಸಕರ ಮಗ ಮಾಡಿದ್ದಕ್ಕೆ ಸಿಎಂ ಯಾಕೆ ರಾಜೀನಾಮೆ ಕೊಡಬೇಕು ಎಂದ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 03, 2023 | 1:20 PM

Share

ಮಂಡ್ಯ: ‘40% ದಂಧೆ ಮಾಡೋಕೆ ಅವರು ಮಂತ್ರಿಯಲ್ಲ, ದುಡ್ಡಿಗೆ ಸರಿಯಾದ ದಾಖಲೆ ನೀಡಿದ್ರೆ ನಮ್ಮ ನಿಮ್ಮ ಮಾತುಗಳು ಬಂದ್ ಆಗುತ್ತೆ. ನಾವು ಅದರ ಬಗ್ಗೆ ಕಮೆಂಟ್ ಮಾಡೋಕೆ ಅಗಲ್ಲ, ಶಾಸಕರು, ಸಿಎಂ ಯಾಕೆ ರಾಜೀನಾಮೆ ಕೊಡಬೇಕು‌. ಅವರ ಮಗ ಸರ್ಕಾರಿ ಅಧಿಕಾರಿಯಾಗಿದ್ದಾರೆ‌. ಎಸಿಬಿಯಲ್ಲಿ ಒಬ್ಬ ಆಫೀಸರ್​ ಆಗಿದ್ದು, ದುಡ್ಡು ತೆಗೆದುಕೊಂಡಿದ್ದಾನೆ ಅದರ ಮುಂದಿನ ಪರಿಣಾಮ ಅವನು ಎದುರಿಸುತ್ತಾನೆ ಎಂದು ಸಚಿವ ಮಾಧುಸ್ವಾಮಿ(J.C Madhuswamy) ಹೇಳಿದರು.

ಬಿಜೆಪಿ ಶಾಸಕನ ಮಗನ ಮನೆಯಲ್ಲಿ ಕೋಟಿಗಟ್ಟಲೇ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಹುಲಿಕೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ ‘ವಿರೂಪಾಕ್ಷಪ್ಪನ ಮಗ ಎಸಿಬಿಯಲ್ಲಿ ಒಬ್ಬ ಆಫೀಸರ್, ಅವನು ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡುತ್ತಾರೆ. ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಬಿಜೆಪಿ ಶಾಸಕ, ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ​: ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ, ಕಾಂಗ್ರೆಸ್ ಅವಧಿಯ ಎಲ್ಲ ಕೇಸ್​ ತನಿಕೆಯಾಗಲಿದೆ ಎಂದ ಸಿಎಂ

ಕಾಂಗ್ರೆಸ್‌ನವರಿಗೆ ಏನು ಇಲ್ಲ, ಏನಾದ್ರು ಸಿಕ್ಕಿದರೆ ದೊಡ್ಡದು ಮಾಡಿಕೊಂಡು ಹೋಗ್ತಾರೆ, ದುಡ್ಡು ಸಿಕ್ಕ ತಕ್ಷಣ ಭ್ರಷ್ಟಾಚಾರ ಎನ್ನೊಕೆ ಆಗಲ್ಲ, ಮೊದಲು ಭ್ರಷ್ಟಾಚಾರ ಸಾಬೀತು ಆಗಬೇಕು. ಹಣ ಕೊಟ್ಟವರು, ತೆಗೆದುಕೊಂಡವರು ಎಲ್ಲಾ ಹೇಳಿಕೆ ತೆಗೆದುಕೊಳ್ಳಬೇಕು. ದುಡ್ಡಿಗೆ ದಾಖಲೆ ಸರಿಯಾಗಿ ಇದ್ರೆ ನಮ್ಮ ನಿಮ್ಮ ಮಾತುಗಳು ಬಂದ್ ಆಗುತ್ತೆ ಎಂದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Fri, 3 March 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್