ಗೃಹಲಕ್ಷ್ಮಿ ಯೋಜನೆ ಬಗ್ಗೆ ಡಿಕೆಶಿ ಬಿಗ್ ಅಪ್ಡೇಟ್: 2000 ರೂ.ಬೇಕು ಅಂದ್ರೆ ಈ ನಿಯಮಗಳನ್ನ ಪಾಲಿಸಲೇಬೇಕು
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಹಣ ಅನರ್ಹರ ಪಾಲಾಗುತ್ತಿದ್ದು, ಇದೀಗ ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಈ ಯೋಜನೆ ಲಾಭವಾಗಲು ಪರಿಷ್ಕರಣೆ ಮಾಡಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಇಂದಿನ ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಹಾಗಾದ್ರೆ, ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯಲು ಏನೇನು ಮಾಡಬೇಕು ಎನ್ನುವ ವಿವರ ಇಲ್ಲಿದೆ.

ಮುಖ್ಯಾಂಶಗಳು
- ಗೃಹಲಕ್ಷ್ಮಿ ಯೋಜನೆಯ 2000 ರೂ. ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯ
- ಫಲಾನುಭವಿಗಳದ್ದೇ ಪೋನ್ ನಂಬರ್, ಖಾತೆ ಇರಬೇಕು ಎಂದ ಸಿಎಂ ಡಿಕೆ ಶಿವಕುಮಾರ್
- ಫಾರಂ ಯಾವ ರೀತಿ ಇರಬೇಕು ಅಂತ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದೆ ಎಂದ ಸಿಎಂ
ಬೆಂಗಳೂರು, (ಜುಲೈ 19): ಗೃಹಲಕ್ಷ್ಮೀ ಯೋಜನಯನ್ನು (gruhalakshmi scheme) ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇಂದು (ಜುಲೈ 19) ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ಆಗಿದೆ. ಹೌದು…ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ನಡೆಸಲು ಸರ್ಕಾರ ಸಜ್ಜಾಗಿದ್ದು, ಗೃಹಲಕ್ಷ್ಮೀ ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ (Cabinet Meeting) ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಒಂದು ಕುಟುಂಬದ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಗೃಹಲಕ್ಷ್ಮಿ. ಆದ್ರೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಪರಿಷ್ಕರಣೆಗೆ ಮುಂದಾಗಿದ್ದು, ಅರ್ಹ ಫಲಾನುಭವಿಗಳ ಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಖಾತೆ ಇರುವುದು ಕಡ್ಡಾಯಗೊಳಿಸಲಾಗಿದೆ.
ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಗೃಹಲಕ್ಷ್ಮೀ ಹಣಕ್ಕೆ ಬಯೋಮೆಟ್ರಿಕ್ ಕಡ್ಡಾಯವಾಗಿದೆ. ಅವರದ್ದೇ ಫೋನ್ ನಂಬರ್ ಇರಬೇಕು. ಯಾರದ್ದೋ ನಂಬರ್ ಕೊಟ್ಟು ಅವರಿಗೆ ಮೆಸೇಜ್ ಹೋಗಬಾರದು. ಗಂಡನ ಖಾತೆ ಮತ್ತು ಮಕ್ಕಳ ಖಾತೆ ಕೂಡ ಇರಬಾರದು. ಮಹಿಳೆಯರ ಅಕೌಂಟ್ಗೆ ಸರ್ಕಾರದ ಹಣ ಹೋಗಬೇಕು ಎಂದು ವಿವರಿಸಿದರು.
ನಮ್ಮ ಗ್ಯಾರಂಟಿ ತಂಡ ಹೋಗಿ ಮಾಹಿತಿ ಪಡೆಯಬೇಕು. ಇದಕ್ಕಾಗಿ 20 ಕೋಟಿ ರೂಪಾಯಿ ಇಟ್ಟಿದ್ದೇವೆ. ಫಾರಂ ಯಾವ ರೀತಿ ಇರಬೇಕು ಅಂತ ಚರ್ಚಿಸಲಾಗಿದ್ದು, ಗಂಡನ ಖಾತೆ ಮತ್ತು ಮಕ್ಕಳ ಖಾತೆ ಕೂಡ ಇರಬಾರದು. ಮಹಿಳೆಯರ ಅಕೌಂಟ್ಗೆ ಸರ್ಕಾರದ ಹಣ ಹೋಗಬೇಕು. ಯೋಜನೆಯಿಂದ ಯಾರನ್ನು ತೆಗೆಯುವ ಉದ್ದೇಶವಿಲ್ಲ.ನಾವು ಕೊಡುವ ಹಣ ಅವರಿಗೆ ಸರಿಯಾಗಿ ತಲುಪಬೇಕು ಎಂದು ಸ್ಪಷ್ಟಪಡಿಸಿದರು.
ಆಪರೇಷನ್ ಗೃಹಲಕ್ಷ್ಮಿ
ಸರ್ಕಾರ “ಆಪರೇಷನ್ ಗೃಹಲಕ್ಷ್ಮಿ” ಹೆಸರಿನಲ್ಲಿ ನಿಜವಾದ ಫಲಾನುಭವಿಗಳನ್ನು ಗುರುತು ಮಾಡುವ ಕೆಲಸ ಮಾಡ್ತಿದೆ. ಪ್ರತಿ ಒಂದು ಕುಟುಂಬದ ಯಜಮಾನಿಗೆ 2000 ರೂ. ಆರ್ಥಿಕ ನೆರವು ನೀಡುವ ಯೋಜನೆಯೇ ಗೃಹಲಕ್ಷ್ಮಿ. ಆದ್ರೆ ಅನರ್ಹರು ಕೂಡ ಯೋಜನೆಯ ಲಾಭ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕರಣೆಗೆ ಮುಂದಾಗಿದೆ. ಒಟ್ಟು 1.20 ಕೋಟಿಗೂ ಅಧಿಕ ಫಲಾನುಭವಿಗಳಿದ್ದು, ಮೃತಪಟ್ಟವರನ್ನು ಕೈಬಿಡಲಾಗಿದೆ. ಸದ್ಯ 4.30 ಲಕ್ಷ ಫಲಾನುಭವಿಗಳ ಹೆಸರನ್ನು ಡಿಲೀಟ್ ಮಾಡಲಾಗಿದ್ದು, ಈ ಮೂಲಕ ನೂರಾರು ಕೋಟಿ ರೂ. ಉಳಿತಾಯ ಆಗಲಿದೆ.




