Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ವ್ಯಾಪಿಸುತ್ತಲೇ ಇದೆ ಹಕ್ಕಿಜ್ವರ: ಬಳ್ಳಾರಿಯಲ್ಲಿ 17 ಸಾವಿರ ಕೋಳಿಗಳ ಮಾರಣಹೋಮ

ಚಿಕ್ಕಬಳ್ಳಾಪುರ ಮೂಲಕ ಕರ್ನಾಟಕಕ್ಕೆ ಕಾಲಿಟ್ಟಿದ್ದ ಹಕ್ಕಿಜ್ವರ ಬಳ್ಳಾರಿಯಲ್ಲೇ ಠಿಕಾಣಿ ಹೂಡಿದೆ. ನಿತ್ಯ ಸಾವಿರಾರು ಕೋಳಿಗಳ ಮಾರಣಹೋಮ ನಡೆಯುತ್ತಿದೆ. ಒಂದು ಫಾರ್ಮ್‌ನಿಂದ ಮತ್ತೊಂದು ಫಾರ್ಮ್‌ಗೆ ಹಕ್ಕಿಜ್ವರ ಹರಡುತ್ತಿದ್ದಂತೆಯೇ ಅಲರ್ಟ್ ಆಗಿರುವ ಆರೋಗ್ಯ ಇಲಾಖೆ ಗೈಡ್‌ಲೈನ್ಸ್‌ ಜಾರಿಗೊಳಿಸಿದೆ. ಹಕ್ಕಿ ಜ್ವರ ಕುರಿತ ಇತ್ತೀಚಿನ ಅಪ್​ಡೇಟ್ ಇಲ್ಲಿದೆ.

ಕರ್ನಾಟಕದಲ್ಲಿ ವ್ಯಾಪಿಸುತ್ತಲೇ ಇದೆ ಹಕ್ಕಿಜ್ವರ: ಬಳ್ಳಾರಿಯಲ್ಲಿ 17 ಸಾವಿರ ಕೋಳಿಗಳ ಮಾರಣಹೋಮ
ಬಳ್ಳಾರಿಯಲ್ಲಿ 17 ಸಾವಿರ ಕೋಳಿಗಳ ಮಾರಣಹೋಮ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: Ganapathi Sharma

Updated on: Mar 04, 2025 | 6:59 AM

ಬೆಂಗಳೂರು, ಬಳ್ಳಾರಿ, ಮಾರ್ಚ್ 4: ಮನೆಮುಂದೆಯೇ ಕೋಳಿಗಳು ಸತ್ತು ಬೀಳುತ್ತಿವೆ. ಫಾರಂಗಳಲ್ಲಿ ಮಾರಣಹೋಮವೇ ನಡೆಯುತ್ತಿದೆ. ದಿನಕ್ಕೊಂದು ಜಿಲ್ಲೆ, ದಿನಕ್ಕೊಂದು ಊರು ಎಂದು ರಾಜ್ಯದಲ್ಲಿ ಹಕ್ಕಿಜ್ವರ ವ್ಯಾಪಿಸುತ್ತಲೇ ಇದ್ದು, ಬಳ್ಳಾರಿಯಲ್ಲಿ ಹಕ್ಕಿಜ್ವರ ಅಬ್ಬರಕ್ಕೆ ಇಡೀ ಕೋಳಿ ಫಾರಂಗಳೇ ಖಾಲಿ ಆಗುತ್ತಿವೆ. ಜಿಲ್ಲೆಯಲ್ಲಿ ಸುಮಾರು 17 ಸಾವಿರ ಕೋಳಿಗಳ ಹತ್ಯೆ ಮಾಡಲಾಗಿದೆ.

ಆಂಧ್ರ, ತೆಲಂಗಾಣದಲ್ಲಿ ಅಬ್ಬರಿಸುತ್ತಿದ್ದ ಹಕ್ಕಿಜ್ವರ ಕರ್ನಾಟಕಕ್ಕೂ ಕಾಲಿಟ್ಟಿದೆ. ಅದರಲ್ಲೂ ಬಳ್ಳಾರಿಯಲ್ಲಿ ಕೋಳಿಗಳ ಮಾರಣಹೋಮವೇ ನಡೆದಿದೆ. ಹಕ್ಕಿಜ್ವರ ಕಾಣಿಸಿಕೊಂಡ ಕಾರಣಕ್ಕೆ ಜಿಲ್ಲಾಡಳಿತವೇ 7 ಸಾವಿರ ಜೀವಂತ ಕೋಳಿಗಳನ್ನು ವಧೆ ಮಾಡಿದೆ. ಹಕ್ಕಿಜ್ವರದಿಂದ ಕುರೇಕುಪ್ಪದಲ್ಲಿ 2400 ಕೋಳಿಗಳು ಸಾವಿನ ಮನೆ ಸೇರಿವೆ. ಜಿಲ್ಲೆಯಲ್ಲಿ ಈ ವರೆಗೆ 17400 ಕೋಳಿಗಳು ಸತ್ತಿವೆ. ಅಸಿಲ್ ಹಾಗೂ ಕಾವೇರಿ ತಳಿ ಕೋಳಿಗಳೇ ಹಕ್ಕಿಜ್ವರಕ್ಕೆ ಟಾರ್ಗೆಟ್ ಆಗಿವೆ.

ವಲಸೆ ಹಕ್ಕಿಗಳಿಂದಲೇ ಹಕ್ಕಿಜ್ವರ ಎಂಟ್ರಿ ಶಂಕೆ

ಬಳ್ಳಾರಿಯ ದರೋಜಿ ಕೆರೆಗೆ ಸಾವಿರಾರು ವಲಸೆ ಪಕ್ಷಿಗಲು ಬರುತ್ತವೆ. ಇದೇ ಪಕ್ಷಿಗಳಿಂದ ಹಕ್ಕಿಜ್ವರ ಜಿಲ್ಲೆಗೆ ಕಾಲಿಟ್ಟಿರುವ ಶಂಕೆ ವ್ಯಕ್ತಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್‌ ಮಿಶ್ರಾ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಹಕ್ಕಿ ಜ್ವರ: ಕರ್ನಾಟಕದಾದ್ಯಂತ ಹೈ ಅಲರ್ಟ್, ಕೋಳಿ ಉತ್ಪನ್ನ ಸಾಗಾಣಿಕೆ ನಿಷೇಧ
Image
ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ದೃಢ: ಸಾಕು ಕೋಳಿಗಳ ಸಾಮೂಹಿಕ‌ ಹತ್ಯೆ
Image
ನೆರೆ ರಾಜ್ಯಗಳಲ್ಲಿ ಹಕ್ಕಿಜ್ವರ, ರಾಜ್ಯದಲ್ಲಿ ಅಲರ್ಟ್: ಕೋಳಿ ಆಮದು ನಿರ್ಬಂಧ
Image
ಹಕ್ಕಿ ಜ್ವರ ಬಂದಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳಿವು

ಚಿಕ್ಕಬಳ್ಳಾಪುರದಲ್ಲಿ ಜೈವಿಕ ವಿಜ್ಞಾನಿಗಳಿಂದ ಪರಿಶೀಲನೆ

ರಾಜ್ಯದಲ್ಲಿ ಮೊದಲು ಹಕ್ಕಿಜ್ವರ ಕಾಣಿಸಿಕೊಂಡಿದ್ದೇ ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿಯಲ್ಲಿ. ಅದೇ ಗ್ರಾಮಕ್ಕೆ ಸೋಮವಾರ ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ ಆಯುಕ್ತರು ಹಾಗೂ ಜೈವಿಕ ವಿಜ್ಞಾನ ಸಂಸ್ಥೆಯ ಹಿರಿಯ ವಿಜ್ಞಾನಿಗಳು ಕೂಡಾ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಹಕ್ಕಿಜ್ವರ ಕಾಣಿಸಿಕೊಂಡ್ರೆ ಫಾರಂ ಸೀಲ್‌ಡೌನ್‌

ಬಾಗಲಕೋಟೆ ಜಿಲ್ಲೆಯಲ್ಲೂ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಯಾವುದೇ ಕೋಳಿ ಫಾರಂನಲ್ಲೂ ಹಕ್ಕಿಜ್ವರ ಕಾಣಿಸಿಕೊಂಡರೆ ಆ ಫಾರಂ ಅನ್ನು ಸೀಲ್‌ಡೌನ್‌ ಮಾಡುವಂತೆ ಹೇಳಲಾಗಿದೆ .

ಇದನ್ನೂ ಓದಿ: ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ: ಕರ್ನಾಟಕದಲ್ಲಿ ಅಲರ್ಟ್, ಬೇರೆ ರಾಜ್ಯದ ಕೋಳಿಗಳಿಗೆ ನಿರ್ಬಂಧ

ಕೊಡಗು, ಚಾಮರಾಜನಗರ, ಮೈಸೂರು ಗಡಿಯಲ್ಲಿ ತಪಾಸಣೆ

ಕೇರಳದ ಜತೆ ಗಡಿ ಹಂಚಿಕೊಂಡಿರುವ ಕೊಡಗಿನಲ್ಲೂ ಹಕ್ಕಿಜ್ವರ ಆತಂಕ ಇದೆ. ಹೀಗಾಗಿ ವಿರಾಜಪೇಟೆ ತಾಲೂಕಿನ ಮಾಕುಟ್ಟ ಹಾಗೂ ಪೆರುಂಬಾಡಿ ಚೆಕ್‌ಪೋಸ್ಟ್‌, ಪೊನ್ನಂಪೇಟೆ ತಾಲೂಕಿನ ಕುಟ್ಟ ಚೆಕ್‌ಪೋಸ್ಟ್‌ನಲ್ಲಿ ಸಿಬ್ಬಂದಿ ನಿಯೋಜಿಸಲಾಗಿದ್ದು, ಹೊರರಾಜ್ಯದ ಕೋಳಿಗಳನ್ನ ತಪಾಸಣೆ ನಡೆಸಲಾಗ್ತಿದೆ. ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆಯಲ್ಲಿ ಕೇರಳದಿಂದ ಆಗಮಿಸುತ್ತಿರುವ ಕೋಳಿ ಸಾಗಾಣ ವಾಹನಗಳಿಗೆ ಸ್ಯಾನಿಟೈಜೇಷನ್​ ಮಾಡಲಾಗ್ತಿದೆ. ಕರ್ನಾಟಕ- ಕೇರಳ ಗಡಿ ಬಾವಲಿಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ.

ಹಕ್ಕಿಜ್ವರ ನಿಯಂತ್ರಣಕ್ಕೆ ಮಾರ್ಗಸೂಚಿ

  • ಹಕ್ಕಿ ಜ್ವರ ಕಂಡುಬಂದ 3 ಕಿ.ಮೀ. ವ್ಯಾಪ್ತಿಯಲ್ಲಿ ಮಾರಾಟ ಬಂದ್.
  • 3 ಕಿ.ಮೀ. ವ್ಯಾಪ್ತಿಯಲ್ಲಿ ಕೋಳಿ ಮಾಂಸ ಮಾರಾಟ ಮಾಡುವಂತಿಲ್ಲ.
  • ಹಕ್ಕಿಜ್ವರ ಕಂಡು ಬಂದ 10 ಕಿಲೋ ಮೀಟರ್ ಸರ್ವಲೆನ್ಸ್ ಸ್ಥಳ.
  • ಯಾರೂ ಕೂಡ 3 ಕಿ.ಮೀ. ವ್ಯಾಪ್ತಿಯಲ್ಲಿ ಓಡಾಡುವಂತಿಲ್ಲ.
  • ಮಾಂಸ ಬೇಯಿಸಿ ತಿನ್ನಬೇಕು, ಹಸಿ ಮಾಂಸ ತಿನ್ನುವಂತಿಲ್ಲ.
  • ಕೋಳಿ ಮಾಂಸ ಕತ್ತರಿಸುವಾಗ ಮಾಸ್ಕ್, ಗ್ಲೌಸ್ ಧರಿಸುವುದು ಕಡ್ಡಾಯ.
  • ಹಕ್ಕಿಗಳು, ಕೋಳಿಗಳ ಜೊತೆ ಇರುವವರಿಗೆ ಔಷಧ ನೀಡಬೇಕು.
  • ಹಕ್ಕಿ ಜ್ವರದ ಗುಣಲಕ್ಷಣ ಇರುವವರಿಗೆ RTPCR ಟೆಸ್ಟ್ ಕಡ್ಡಾಯ.
  • ಹಕ್ಕಿ ಜ್ವರ ಬಂದವರ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ ತೆರೆಯಬೇಕು .

ಜಿಲ್ಲೆಯಿಂದ ಜಿಲ್ಲೆಗೆ ಹಕ್ಕಿಜ್ವರ ವ್ಯಾಪಿಸುತ್ತಿದ್ದಂತೆ ಆರೋಗ್ಯ ಇಲಾಖೆ ಗೈಡ್‌ಲೈನ್ ಜಾರಿಗೊಳಿಸಿದ್ದು, ಜನ ಇವುಗಳನ್ನ ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್