ಶಿವಮೊಗ್ಗದ ಪಾರ್ಕ್​​​ನಲ್ಲಿ ಸತ್ತುಬಿದ್ದ ಪಕ್ಷಿಗಳು: ರಾಜ್ಯಕ್ಕೂ ವಕ್ಕರಿಸಿತಾ ಹಕ್ಕಿ ಜ್ವರ?

ಹೀಗಾಗಿ ಕೂಡಲೇ ಎಚ್ಚೆತ್ತುಕೊಂಡಿರುವ ಪಾಲಿಕೆ ಆರೋಗ್ಯ ಅಧಿಕಾರಿಗಳು, ಮೃತ ಹಕ್ಕಿಗಳನ್ನು ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಆದರೆ ಇದುವರೆಗೂ ಹಕ್ಕಿಗಳು ಮೃತಪಟ್ಟಿರುವ ಬಗ್ಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ವರದಿ ಬಳಿಕವಷ್ಟೇ ಹಕ್ಕಿಗಳ ಸಾವಿಗೆ ಕಾರಣ ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗದ ಪಾರ್ಕ್​​​ನಲ್ಲಿ ಸತ್ತುಬಿದ್ದ ಪಕ್ಷಿಗಳು: ರಾಜ್ಯಕ್ಕೂ ವಕ್ಕರಿಸಿತಾ ಹಕ್ಕಿ ಜ್ವರ?
ಸತ್ತು ಬಿದ್ದಿರುವ ಪಕ್ಷಿ

Updated on: Jan 07, 2021 | 4:00 PM

ಶಿವಮೊಗ್ಗ: ನಗರದ ಸವಳಂಗ ರಸ್ತೆಯ ರೋಟರಿ ಯುವಕೇಂದ್ರ ಹಾಗೂ ಅದರ ಪಕ್ಕದ ಪಾರ್ಕ್​ನಲ್ಲಿ ಐದಕ್ಕೂ ಹೆಚ್ಚು ಹಕ್ಕಿಗಳ ಸಾವನ್ನಪ್ಪಿದೆ. ಇದರಿಂದ ರಾಜ್ಯಕ್ಕೂ ಹಕ್ಕಿ ಜ್ವರ ವಕ್ಕರಿಸಿದೆಯಾ ಎಂಬ ಅನುಮಾನ ಹುಟ್ಟುಹಾಕಿದೆ.

ದೇಶದಲ್ಲಿ ಕೊರೊನಾ ಸೋಂಕಿನ ಹಾವಳಿಯ ಜೊತೆಗೆ ಈಗ ಹಕ್ಕಿ ಜ್ವರ ಕೂಡ ತನ್ನ ಆರ್ಭಟ ಶುರು ಮಾಡಿದೆ. ಹೀಗಾಗಿ ದೇಶದ ಎಲ್ಲಾ ರಾಜ್ಯಗಳು ಇದರ ಬಗ್ಗೆ ಕಟ್ಟೇಚ್ಚರವಹಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ರಾಜ್ಯದ ಶಿವಮೊಗ್ಗ ಜಿಲ್ಲೆಯ ಪಾರ್ಕ್​ ಒಂದರಲ್ಲಿ ಐದಕ್ಕೂ ಹೆಚ್ಚು ಹಕ್ಕಿಗಳು ಸಾವನ್ನಪ್ಪಿರುವುದು ಆ ಭಾಗದ ಜನರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.

ಹೀಗಾಗಿ ಕೂಡಲೇ ಎಚ್ಚೆತ್ತುಕೊಂಡಿರುವ ಪಾಲಿಕೆ ಆರೋಗ್ಯ ಅಧಿಕಾರಿಗಳು, ಮೃತ ಹಕ್ಕಿಗಳನ್ನು ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಆದರೆ ಇದುವರೆಗೂ ಹಕ್ಕಿಗಳು ಮೃತಪಟ್ಟಿರುವ ಬಗ್ಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ವರದಿ ಬಳಿಕವಷ್ಟೇ ಹಕ್ಕಿಗಳ ಸಾವಿಗೆ ಕಾರಣ ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರಕ್ಕೂ ಕಾಲಿಟ್ಟಿದೆಯಾ ಹಕ್ಕಿ ಜ್ವರ?
ಚಿಕ್ಕಬಳ್ಳಾಪುರದಲ್ಲಿ ಇದ್ದಕ್ಕಿದ್ದಂತೆ ಪಕ್ಷಿಗಳು ಸಾಯುತ್ತಿದ್ದು, ಅಮಾನಿ ಗೋಪಾಲಕೃಷ್ಣ ಕೆರೆಯಂಗಳದಲ್ಲಿ ಪಕ್ಷಿಗಳು ಸಾವನ್ನಪ್ಪಿವೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರುಗಡೆಯೆ ಇರುವ ಕೆರೆಯಲ್ಲಿ ಈ ಘಟನೆ ನಡೆದಿದೆ. ದೇಶ ವಿದೇಶಗಳಿಂದ ವಲಸೆ ಬಂದಿದ್ದ ಪಕ್ಷಿಗಳು ಸಾವನ್ನಪ್ಪಿವೆ. ಹೀಗಾಗಿ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಆತಂಕ.. ಮುಂದುವರೆದ ತಪಾಸಣೆ

Published On - 3:58 pm, Thu, 7 January 21