AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ

ವಿಜಯಪುರ: ಎಲ್ಲಾ ಮನುಷ್ಯರು ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದು ಸಾಮಾನ್ಯ ಆದರೆ ಇಲ್ಲಿ ವಿಶಿಷ್ಟವಾಗಿ ಸಾಕು ನಾಯಿಯ ಹುಟ್ಟು ಹಬ್ಬವನ್ನ ಆಚರಿಸಲಾಗಿದೆ. ನಿಡಗುಂದಿ ಪಟ್ಟಣದ ಬಿಎಂಟಿಸಿ ನೌಕರ ಶರಣು ಪತ್ರಿ ಹಾಗೂ ಶರಣು ಮಾವ ಸಂಗಯ್ಯ ಎಂಬುವವರು ತಮ್ಮ ಮುದ್ದಿನ ಸಾಕು ನಾಯಿ ಟೈಗರ್​ನ ಎರಡನೇ ವರ್ಷದ ಬರ್ತಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕಳೆದ ಡಿಸೆಂಬರ್ 28 ರಂದು ಶ್ವಾನದ ಹುಟ್ಟು ಹಬ್ಬವನ್ನು ಹಲವಾರು ಸ್ನೇಹಿತರಿಗೆ ಸ್ಥಳೀಯರಿಗೆ ಊಟ ಹಾಕಿ ಬರ್ತಡೇ ಆಚರಿಸಿದ್ದಾರೆ. ಬರ್ತಡೆ ಗಿಫ್ಟ್ ಆಗಿ […]

ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 30, 2019 | 7:51 PM

Share

ವಿಜಯಪುರ: ಎಲ್ಲಾ ಮನುಷ್ಯರು ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದು ಸಾಮಾನ್ಯ ಆದರೆ ಇಲ್ಲಿ ವಿಶಿಷ್ಟವಾಗಿ ಸಾಕು ನಾಯಿಯ ಹುಟ್ಟು ಹಬ್ಬವನ್ನ ಆಚರಿಸಲಾಗಿದೆ. ನಿಡಗುಂದಿ ಪಟ್ಟಣದ ಬಿಎಂಟಿಸಿ ನೌಕರ ಶರಣು ಪತ್ರಿ ಹಾಗೂ ಶರಣು ಮಾವ ಸಂಗಯ್ಯ ಎಂಬುವವರು ತಮ್ಮ ಮುದ್ದಿನ ಸಾಕು ನಾಯಿ ಟೈಗರ್​ನ ಎರಡನೇ ವರ್ಷದ ಬರ್ತಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಕಳೆದ ಡಿಸೆಂಬರ್ 28 ರಂದು ಶ್ವಾನದ ಹುಟ್ಟು ಹಬ್ಬವನ್ನು ಹಲವಾರು ಸ್ನೇಹಿತರಿಗೆ ಸ್ಥಳೀಯರಿಗೆ ಊಟ ಹಾಕಿ ಬರ್ತಡೇ ಆಚರಿಸಿದ್ದಾರೆ. ಬರ್ತಡೆ ಗಿಫ್ಟ್ ಆಗಿ ಮಾಲೀಕ ನಾಯಿಗೆ 50 ಗ್ರಾಂ ಚಿನ್ನದ ಸರ ಹಾಕಿದ್ದಾರೆ. ನಾಯಿಗೆ ಆರತಿ ಬೆಳಗಿ, ಐದು ಕೇಜಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 500 ಜನರಿಗೆ ಭೋಜನ ವ್ಯವಸ್ಥೆ ಮಾಡಿದ್ದರು. ಪಾಯಸ, ಪೂರಿ, ಬಾಜಿ, ರೈಸ್, ಪಾಪಡ್ ಸೇರಿದಂತೆ ವಿವಿಧ ಖ್ಯಾದ್ಯಗಳಿದ್ದ ಭಾರಿ ಭೋಜನ ಸವಿದು ಜನ ಶ್ವಾನಕ್ಕೆ ಆಶೀರ್ವದಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಪಟಾಕಿ‌ ಸಿಡಿಸಿ ಯುವಕರು ಸಂಭ್ರಮಿಸಿದರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ