ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ

ವಿಜಯಪುರ: ಎಲ್ಲಾ ಮನುಷ್ಯರು ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದು ಸಾಮಾನ್ಯ ಆದರೆ ಇಲ್ಲಿ ವಿಶಿಷ್ಟವಾಗಿ ಸಾಕು ನಾಯಿಯ ಹುಟ್ಟು ಹಬ್ಬವನ್ನ ಆಚರಿಸಲಾಗಿದೆ. ನಿಡಗುಂದಿ ಪಟ್ಟಣದ ಬಿಎಂಟಿಸಿ ನೌಕರ ಶರಣು ಪತ್ರಿ ಹಾಗೂ ಶರಣು ಮಾವ ಸಂಗಯ್ಯ ಎಂಬುವವರು ತಮ್ಮ ಮುದ್ದಿನ ಸಾಕು ನಾಯಿ ಟೈಗರ್​ನ ಎರಡನೇ ವರ್ಷದ ಬರ್ತಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕಳೆದ ಡಿಸೆಂಬರ್ 28 ರಂದು ಶ್ವಾನದ ಹುಟ್ಟು ಹಬ್ಬವನ್ನು ಹಲವಾರು ಸ್ನೇಹಿತರಿಗೆ ಸ್ಥಳೀಯರಿಗೆ ಊಟ ಹಾಕಿ ಬರ್ತಡೇ ಆಚರಿಸಿದ್ದಾರೆ. ಬರ್ತಡೆ ಗಿಫ್ಟ್ ಆಗಿ […]

ಆರತಿ ಬೆಳಗಿ ಕೇಕ್ ಕತ್ತರಿಸಿ ಬರ್ತಡೆ ಆಚರಿಸಿದ ನಾಯಿ, ಗಿಫ್ಟ್ ಆಗಿ 50 ಗ್ರಾಂ ಚಿನ್ನದ ಸರ
ಸಾಧು ಶ್ರೀನಾಥ್​

Updated on: Dec 30, 2019 | 7:51 PM

ವಿಜಯಪುರ: ಎಲ್ಲಾ ಮನುಷ್ಯರು ತಮ್ಮ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಳ್ಳುವುದು ಸಾಮಾನ್ಯ ಆದರೆ ಇಲ್ಲಿ ವಿಶಿಷ್ಟವಾಗಿ ಸಾಕು ನಾಯಿಯ ಹುಟ್ಟು ಹಬ್ಬವನ್ನ ಆಚರಿಸಲಾಗಿದೆ. ನಿಡಗುಂದಿ ಪಟ್ಟಣದ ಬಿಎಂಟಿಸಿ ನೌಕರ ಶರಣು ಪತ್ರಿ ಹಾಗೂ ಶರಣು ಮಾವ ಸಂಗಯ್ಯ ಎಂಬುವವರು ತಮ್ಮ ಮುದ್ದಿನ ಸಾಕು ನಾಯಿ ಟೈಗರ್​ನ ಎರಡನೇ ವರ್ಷದ ಬರ್ತಡೇಯನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಕಳೆದ ಡಿಸೆಂಬರ್ 28 ರಂದು ಶ್ವಾನದ ಹುಟ್ಟು ಹಬ್ಬವನ್ನು ಹಲವಾರು ಸ್ನೇಹಿತರಿಗೆ ಸ್ಥಳೀಯರಿಗೆ ಊಟ ಹಾಕಿ ಬರ್ತಡೇ ಆಚರಿಸಿದ್ದಾರೆ. ಬರ್ತಡೆ ಗಿಫ್ಟ್ ಆಗಿ ಮಾಲೀಕ ನಾಯಿಗೆ 50 ಗ್ರಾಂ ಚಿನ್ನದ ಸರ ಹಾಕಿದ್ದಾರೆ. ನಾಯಿಗೆ ಆರತಿ ಬೆಳಗಿ, ಐದು ಕೇಜಿ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಕಾರ್ಯಕ್ರಮದಲ್ಲಿ ಸುಮಾರು 500 ಜನರಿಗೆ ಭೋಜನ ವ್ಯವಸ್ಥೆ ಮಾಡಿದ್ದರು. ಪಾಯಸ, ಪೂರಿ, ಬಾಜಿ, ರೈಸ್, ಪಾಪಡ್ ಸೇರಿದಂತೆ ವಿವಿಧ ಖ್ಯಾದ್ಯಗಳಿದ್ದ ಭಾರಿ ಭೋಜನ ಸವಿದು ಜನ ಶ್ವಾನಕ್ಕೆ ಆಶೀರ್ವದಿಸಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಪಟಾಕಿ‌ ಸಿಡಿಸಿ ಯುವಕರು ಸಂಭ್ರಮಿಸಿದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us