AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಕೋಟಿ ಬಿಟ್ ಕಾಯಿನ್ ಹಗರಣ ಕೇಸ್​: ಡಿವೈಎಸ್​ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್​ಐಟಿ

ಎಸ್​ಐಟಿ ರಚನೆ ಬಳಿಕ  ಕಾಟನ್​​ಪೇಟೆ ಠಾಣೆಯಲ್ಲಿ ಶ್ರೀಧರ್​ ವಿರುದ್ಧ ಹೊಸ ಎಫ್​ಐಆರ್​​ ದಾಖಲಾಗಿತ್ತು. ಕಾಟನ್​ಪೇಟೆ ಠಾಣೆಯ ಕೇಸ್​ನ್ನೂ​ ಸಹ ಎಸ್​ಐಟಿ ತನಿಖೆ ನಡೆಸುತ್ತಿದ್ದು, ಸದ್ಯ ಡಿವೈಎಸ್​ಪಿ ಶ್ರೀಧರ್ ಪೂಜಾರಿಯ​ನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

ಬಹುಕೋಟಿ ಬಿಟ್ ಕಾಯಿನ್ ಹಗರಣ ಕೇಸ್​: ಡಿವೈಎಸ್​ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್​ಐಟಿ
ಬಹುಕೋಟಿ ಬಿಟ್ ಕಾಯಿನ್ ಹಗರಣ ಕೇಸ್​: ಡಿವೈಎಸ್​ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್​ಐಟಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 07, 2024 | 4:02 PM

Share

ಬೆಂಗಳೂರು, ಅಕ್ಟೋಬರ್​ 07: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ (Bitcoin Case) ಸಂಬಂಧಿಸಿದಂತೆ ಡಿವೈಎಸ್​ಪಿ ಶ್ರೀಧರ್ ಪೂಜಾರಿ​​ ಅನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಟ್​ ಕಾಯಿನ್ ಪ್ರಕರಣದ ತನಿಖೆ ವೇಳೆ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪ ಅವರ ಮೇಲಿತ್ತು. ಹೀಗಾಗಿ ಇಂದು ವಿಚಾರಣೆಗೆ ಕರೆಸಿ ಸಿಐಡಿ ಕಚೇರಿಯಲ್ಲೇ ಎಸ್​​ಐಟಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ.

ಎಸ್​ಐಟಿ ರಚನೆ ಬಳಿಕ  ಕಾಟನ್​​ಪೇಟೆ ಠಾಣೆಯಲ್ಲಿ ಶ್ರೀಧರ್​ ವಿರುದ್ಧ ಹೊಸ ಎಫ್​ಐಆರ್​​ ದಾಖಲಾಗಿತ್ತು. ಕಾಟನ್​ಪೇಟೆ ಠಾಣೆಯ ಕೇಸ್​ನ್ನೂ​ ಸಹ ಎಸ್​ಐಟಿ ತನಿಖೆ ನಡೆಸುತ್ತಿದ್ದು, ಸದ್ಯ ಡಿವೈಎಸ್​ಪಿ ಶ್ರೀಧರ್ ಪೂಜಾರಿಯ​ನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ. DySP ಶ್ರೀಧರ್ ಈ ಹಿಂದೆ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಂಧಿಸಿ ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್​: ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು

ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ವಿರುದ್ಧ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್​ ಜಾರಿ ಮಾಡಲಾಗಿತ್ತು. ವಾರಂಟ್ ಪ್ರಶ್ನಿಸಿ ಇತ್ತೀಚೆಗೆ ಶ್ರೀಧರ್ ಕೆ. ಪೂಜಾರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಳಿಕ ಘೋಷಿತ ಆರೋಪಿ ಆದೇಶವನ್ನು ರದ್ದುಪಡಿಸಿತ್ತು. ಬಿಟ್ ಕಾಯಿನ್ ಕೇಸ್​​​​ನಲ್ಲಿ ಆರೋಪಿಗಳಿಗೆ ಸಹಾಯ ಮಾಡಿರುವ ಆರೋಪವನ್ನು ಶ್ರೀಧರ್ ಕೆ. ಪೂಜಾರಿ ಎದುರಿಸಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್

ಈಗಾಗಲೇ ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಲಾದೆ. ಈ ವೇಳೆ ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿಯೇ ಎಫ್‍ಐಆರ್ ಕೂಡ ದಾಖಲಾಗಿತ್ತು. ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದ. ಜೊತೆಗೆ ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರ ಹೆಸರುಗಳು ಕೇಳಿಬಂದಿದ್ದವು. ಇದರಿಂದಲೇ ಈ ಬಿಟ್​ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಎಸ್​ಐಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:49 pm, Mon, 7 October 24

Follow Us
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!