AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಕೋಟಿ ಬಿಟ್ ಕಾಯಿನ್ ಹಗರಣ ಕೇಸ್​: ಡಿವೈಎಸ್​ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್​ಐಟಿ

ಎಸ್​ಐಟಿ ರಚನೆ ಬಳಿಕ  ಕಾಟನ್​​ಪೇಟೆ ಠಾಣೆಯಲ್ಲಿ ಶ್ರೀಧರ್​ ವಿರುದ್ಧ ಹೊಸ ಎಫ್​ಐಆರ್​​ ದಾಖಲಾಗಿತ್ತು. ಕಾಟನ್​ಪೇಟೆ ಠಾಣೆಯ ಕೇಸ್​ನ್ನೂ​ ಸಹ ಎಸ್​ಐಟಿ ತನಿಖೆ ನಡೆಸುತ್ತಿದ್ದು, ಸದ್ಯ ಡಿವೈಎಸ್​ಪಿ ಶ್ರೀಧರ್ ಪೂಜಾರಿಯ​ನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

ಬಹುಕೋಟಿ ಬಿಟ್ ಕಾಯಿನ್ ಹಗರಣ ಕೇಸ್​: ಡಿವೈಎಸ್​ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್​ಐಟಿ
ಬಹುಕೋಟಿ ಬಿಟ್ ಕಾಯಿನ್ ಹಗರಣ ಕೇಸ್​: ಡಿವೈಎಸ್​ಪಿ ಶ್ರೀಧರ್ ಪೂಜಾರಿ ಬಂಧಿಸಿದ ಎಸ್​ಐಟಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Oct 07, 2024 | 4:02 PM

Share

ಬೆಂಗಳೂರು, ಅಕ್ಟೋಬರ್​ 07: ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ (Bitcoin Case) ಸಂಬಂಧಿಸಿದಂತೆ ಡಿವೈಎಸ್​ಪಿ ಶ್ರೀಧರ್ ಪೂಜಾರಿ​​ ಅನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಟ್​ ಕಾಯಿನ್ ಪ್ರಕರಣದ ತನಿಖೆ ವೇಳೆ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪ ಅವರ ಮೇಲಿತ್ತು. ಹೀಗಾಗಿ ಇಂದು ವಿಚಾರಣೆಗೆ ಕರೆಸಿ ಸಿಐಡಿ ಕಚೇರಿಯಲ್ಲೇ ಎಸ್​​ಐಟಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ.

ಎಸ್​ಐಟಿ ರಚನೆ ಬಳಿಕ  ಕಾಟನ್​​ಪೇಟೆ ಠಾಣೆಯಲ್ಲಿ ಶ್ರೀಧರ್​ ವಿರುದ್ಧ ಹೊಸ ಎಫ್​ಐಆರ್​​ ದಾಖಲಾಗಿತ್ತು. ಕಾಟನ್​ಪೇಟೆ ಠಾಣೆಯ ಕೇಸ್​ನ್ನೂ​ ಸಹ ಎಸ್​ಐಟಿ ತನಿಖೆ ನಡೆಸುತ್ತಿದ್ದು, ಸದ್ಯ ಡಿವೈಎಸ್​ಪಿ ಶ್ರೀಧರ್ ಪೂಜಾರಿಯ​ನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ. DySP ಶ್ರೀಧರ್ ಈ ಹಿಂದೆ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಂಧಿಸಿ ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್​: ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು

ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ವಿರುದ್ಧ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್​ ಜಾರಿ ಮಾಡಲಾಗಿತ್ತು. ವಾರಂಟ್ ಪ್ರಶ್ನಿಸಿ ಇತ್ತೀಚೆಗೆ ಶ್ರೀಧರ್ ಕೆ. ಪೂಜಾರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಳಿಕ ಘೋಷಿತ ಆರೋಪಿ ಆದೇಶವನ್ನು ರದ್ದುಪಡಿಸಿತ್ತು. ಬಿಟ್ ಕಾಯಿನ್ ಕೇಸ್​​​​ನಲ್ಲಿ ಆರೋಪಿಗಳಿಗೆ ಸಹಾಯ ಮಾಡಿರುವ ಆರೋಪವನ್ನು ಶ್ರೀಧರ್ ಕೆ. ಪೂಜಾರಿ ಎದುರಿಸಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್

ಈಗಾಗಲೇ ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಲಾದೆ. ಈ ವೇಳೆ ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿಯೇ ಎಫ್‍ಐಆರ್ ಕೂಡ ದಾಖಲಾಗಿತ್ತು. ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದ. ಜೊತೆಗೆ ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರ ಹೆಸರುಗಳು ಕೇಳಿಬಂದಿದ್ದವು. ಇದರಿಂದಲೇ ಈ ಬಿಟ್​ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಎಸ್​ಐಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:49 pm, Mon, 7 October 24

Follow Us
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಹಣ ಡ್ರಾ ಮಾಡಿಕೊಡಿ ಅಂದ್ರೆ ATM ಕಾರ್ಡ್ ಬದಲಿಸಿ 60 ಸಾವಿರ ಎಗರಿಸಿದ್ರು!
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
Video: ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ
Video: ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ