AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bitcoin Case: ಬಿಟ್ ಕಾಯಿನ್ ಹಗರಣದ ತನಿಖೆ ವೇಳೆ ಸಿಕ್ಕಿಬಿದ್ದ ನಟೋರಿಯಸ್ ಹ್ಯಾಕರ್

bitcoin Case: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆ ವೇಳೆ ನಟೋರಿಯಸ್ ಹ್ಯಾಕರ್ ಸಿಕ್ಕಿಬಿದ್ದಿದ್ದಾನೆ. ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ ನಲ್ಲಿ ಕೈಚಳಕ ತೋರಿ ಭೂಗತವಾಗಿದ್ದ ಪಂಜಾಬ್ ಮೂಲದ ನಟೋರಿಯಸ್ ಹ್ಯಾಕರ್ ರಾಜೇಂದ್ರಸಿಂಗ್ ನನ್ನು ಎಸ್​ಐಟಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

Bitcoin Case: ಬಿಟ್ ಕಾಯಿನ್ ಹಗರಣದ ತನಿಖೆ ವೇಳೆ ಸಿಕ್ಕಿಬಿದ್ದ ನಟೋರಿಯಸ್ ಹ್ಯಾಕರ್
ಪ್ರಾತಿನಿಧಿಕ ಚಿತ್ರ
ಜಗದೀಶ ಬಿ.
| Edited By: |

Updated on:Oct 05, 2023 | 7:56 AM

Share

ಬೆಂಗಳೂರು, (ಅಕ್ಟೋಬರ್ 05): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ(bitcoin Case) ತನಿಖೆ ವೇಳೆ ನಟೋರಿಯಸ್ ಹ್ಯಾಕರ್ (hacker) ಸಿಕ್ಕಿಬಿದ್ದಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಭೂಗತವಾಗಿದ್ದ ಇಂಟರ್ ನ್ಯಾಷನಲ್ ಹ್ಯಾಕರ್​ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೀಕಿಗೂ ಮುನ್ನವೇ ಹ್ಯಾಕಿಂಗ್ ನಲ್ಲಿ ಕೈಚಳಕ ತೋರಿ ಭೂಗತವಾಗಿದ್ದ ಪಂಜಾಬ್ ಮೂಲದ ನಟೋರಿಯಸ್ ಹ್ಯಾಕರ್ ರಾಜೇಂದ್ರಸಿಂಗ್ ನನ್ನು ಎಸ್​ಐಟಿ ಬಂಧಿಸಿದ್ದು, ಈ ಪ್ರಕರಣದಲ್ಲಿ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆಗಳಿವೆ.

ಈ ಹ್ಯಾಕರ್ ರಾಜೇಂದ್ರಸಿಂಗ್ ಸರ್ಕಾರಿ ಹಾಗೂ ಖಾಸಗಿ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಈ ಹ್ಯಾಕರ್​ಗಾಗಿ ಹುಡುಕಾಟ ಮಾಡುತ್ತಿದ್ದವು. ಇದೀಗ ಸಿಐಡಿ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದ ತಂಡ ಬಂಧಿಸಿದ್ದು, ಸದ್ಯ ಮುಂದಿನ ತನಿಖಾ ದೃಷ್ಟಿಯಿಂದ ಎಸ್​ಐಟಿ, ಕೇಂದ್ರ ತನಿಖಾ ಸಂಸ್ಥೆಗಳ ನೆರವು ಕೇಳಿದೆ.

ಇದನ್ನೂ ಓದಿ: ಬಿಟ್​ ಕಾಯಿನ್ ಪ್ರಕರಣ: ವಿಚಾರಣೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ, ಶ್ರೀಕಿಯ ಸ್ಫೋಟ ಅಂಶ ಬೆಳಕಿಗೆ

ಸಿಸಿಬಿ ಈಗಾಗಲೇ ಶ್ರೀಕಿಯಿಂದ ಸುಮಾರು 9 ಕೋಟಿ ರೂಪಾಯಿ ಮೌಲ್ಯದ 31 ಬಿಟ್ ಕಾಯಿನ್ ವಶಕ್ಕೆ ಪಡೆದಿದೆ. ತನಿಖೆ ವೇಳೆಯಲ್ಲಿ ಪಂಜಾಬ್​ನ ರಾಜೇಂದ್ರ ಸಿಂಗ್ ಹೆಸರು ಕೇಳಿಬಂದಿತ್ತು. ಹೀಗಾಗಿ ಎಸ್ ಐಟಿ ತಂಡ ಹ್ಯಾಕರ್ ರಾಜೇಂದ್ರಸಿಂಗ್ ಎಂಬಾತನ ಪತ್ತೆಗೆ ಬಲೆ ಬೀಸಿತ್ತು. ಸದ್ಯ ರಾಜೇಂದ್ರ ಸಿಂಗ್​ನನ್ನು ಪಂಜಾಬ್​ನಲ್ಲಿ ಬಂಧಿಸಿ ವಿಚಾರಣೆ ಮಾಡುತ್ತಿದೆ. ರಾಜೇಂದ್ರ ಸಿಂಗ್ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಬರುವ ಸಾಧ್ಯತೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:55 am, Thu, 5 October 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ