AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ​ಗೆ ನಿರೀಕ್ಷಣಾ ಜಾಮೀನು

ಬಿಟ್ ಕಾಯಿನ್ ಹಗರಣ ರಾಜ್ಯದ ರಾಜಕೀಯದಲ್ಲೂ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅದೆಷ್ಟರ ಮಟ್ಟಿಗೆ ಅಂದರೆ ಇಡೀ ದೇಶದ ಚಿತ್ತ ಕರ್ನಾಟಕದತ್ತ ನೆಟ್ಟಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ​ಗೆ ನಿರೀಕ್ಷಣಾ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಗುರುವಾರ ಆದೇಶ ಹೊರಡಿಸಲಾಗಿದೆ.

ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ​ಗೆ ನಿರೀಕ್ಷಣಾ ಜಾಮೀನು
ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್​ಗೆ ನಿರೀಕ್ಷಣಾ ಜಾಮೀನು
Ramesha M
| Edited By: |

Updated on: Jun 27, 2024 | 6:13 PM

Share

ಬೆಂಗಳೂರು, ಜೂನ್​ 27: ಬಹುಕೋಟಿ ಬಿಟ್ ಕಾಯಿನ್ (Bitcoin) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿಗೆ (Sridhar K Pujar) ಹೈಕೋರ್ಟ್ ಏಕಸದಸ್ಯ ಪೀಠದಿಂದ ಗುರುವಾರ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಪೊಲೀಸರು ತಮ್ಮ ಪ್ರತಿಷ್ಠೆಗಾಗಿ ಕೇಸ್ ದಾಖಲಿಸಿದ್ದಾರೆ. ಒಂದೇ ಕೇಸ್​ಗೆ ಎರಡೆರಡು ಬಾರಿ ಎಫ್​ಐಆರ್​ ಮಾಡಿ ತನಿಖೆ ನಡೆಸಿದ್ದಾರೆ. ಪ್ರಕರಣ ನಡೆದ 4 ವರ್ಷಗಳ ನಂತರ ಬಂಧಿಸಲು ಯತ್ನಿಸಿದ್ದಾರೆ ಎಂದು ಶ್ರೀಧರ್ ಪೂಜಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ.

ಪೊಲೀಸರ ಕ್ರಮಕ್ಕೆ ನ್ಯಾ.ಎಂ.ಜಿ.ಉಮಾ ಅಸಮಾಧಾನ ವ್ಯಕ್ತಪಡಿಸಿದ್ದು, ಜನರನ್ನು ಮೂರ್ಖರನ್ನಾಗಿಸಲು ಪೊಲೀಸರು ಯತ್ನಿಸಿದಂತಿದೆ. ಇಷ್ಟು ವರ್ಷವಾದರೂ ತನಿಖೆಯಲ್ಲಿ ಪ್ರಗತಿ ಏಕಿಲ್ಲ. ವಾಟ್ಸಾಪ್​ ಚಾಟ್ ಆಧಾರದಲ್ಲಿ ಕ್ರಮ ಹೇಗೆ ಸಾಧ್ಯ. ಹಾಗಿದ್ದರೆ ಆಗಿನ ಆಯುಕ್ತರು, ಜಂಟಿ ಆಯುಕ್ತರು ಮತ್ತಿತರರ ಮೇಲೇಕೆ ಕೇಸ್ ದಾಖಲಿಸಲಿಲ್ಲ ಎಂದು ಪೊಲೀಸರಿಗೆ ಹೈಕೋರ್ಟ್ ಏಕಸದಸ್ಯ ಪೀಠ ತರಾಟೆ ತೆಗೆದುಕೊಂಡಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್​: ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು

ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ ವಿರುದ್ಧ ಮೊದಲು ಆರೋಪ ಕೇಳಿಬಂದಿತ್ತು. ಹಾಗಾಗಿ ಕೇಸ್​ ದಾಖಲಿಸಿಕೊಂಡಿದ್ದ ಎಸ್​ಐಟಿ ಫೆಬ್ರುವರಿ 17ರಂದು ಬಂಧಿಸಲು ಮುಂದಾಗಿದ್ದರು. ಆದರೆ ಈ ವೇಳೆ ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದರು. ಈ ವಿಚಾರವಾಗಿ ವಿಧಾನಸೌಧ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ (ಕೊಲೆ ಯತ್ನ) ಮತ್ತು 353 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್​: ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು

ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದ ಶ್ರೀಧರ್ ಪೂಜಾರಿ ತೆರೆಮರೆಯಲ್ಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡಿದ್ದರಿಂದ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್​ ಜಾರಿ ಮಾಡಲಾಗಿತ್ತು. ವಾರಂಟ್ ಪ್ರಶ್ನಿಸಿ ಶ್ರೀಧರ್ ಕೆ. ಪೂಜಾರ್ ಹೈಕೋರ್ಟ್​ಗೆ ಅರ್ಜಿ ಕೂಡ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ