AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ​ಗೆ ನಿರೀಕ್ಷಣಾ ಜಾಮೀನು

ಬಿಟ್ ಕಾಯಿನ್ ಹಗರಣ ರಾಜ್ಯದ ರಾಜಕೀಯದಲ್ಲೂ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಅದೆಷ್ಟರ ಮಟ್ಟಿಗೆ ಅಂದರೆ ಇಡೀ ದೇಶದ ಚಿತ್ತ ಕರ್ನಾಟಕದತ್ತ ನೆಟ್ಟಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ​ಗೆ ನಿರೀಕ್ಷಣಾ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಗುರುವಾರ ಆದೇಶ ಹೊರಡಿಸಲಾಗಿದೆ.

ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ​ಗೆ ನಿರೀಕ್ಷಣಾ ಜಾಮೀನು
ಬಿಟ್ ಕಾಯಿನ್ ಹಗರಣ: ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್​ಗೆ ನಿರೀಕ್ಷಣಾ ಜಾಮೀನು
Ramesha M
| Edited By: |

Updated on: Jun 27, 2024 | 6:13 PM

Share

ಬೆಂಗಳೂರು, ಜೂನ್​ 27: ಬಹುಕೋಟಿ ಬಿಟ್ ಕಾಯಿನ್ (Bitcoin) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿಗೆ (Sridhar K Pujar) ಹೈಕೋರ್ಟ್ ಏಕಸದಸ್ಯ ಪೀಠದಿಂದ ಗುರುವಾರ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಪೊಲೀಸರು ತಮ್ಮ ಪ್ರತಿಷ್ಠೆಗಾಗಿ ಕೇಸ್ ದಾಖಲಿಸಿದ್ದಾರೆ. ಒಂದೇ ಕೇಸ್​ಗೆ ಎರಡೆರಡು ಬಾರಿ ಎಫ್​ಐಆರ್​ ಮಾಡಿ ತನಿಖೆ ನಡೆಸಿದ್ದಾರೆ. ಪ್ರಕರಣ ನಡೆದ 4 ವರ್ಷಗಳ ನಂತರ ಬಂಧಿಸಲು ಯತ್ನಿಸಿದ್ದಾರೆ ಎಂದು ಶ್ರೀಧರ್ ಪೂಜಾರ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ.

ಪೊಲೀಸರ ಕ್ರಮಕ್ಕೆ ನ್ಯಾ.ಎಂ.ಜಿ.ಉಮಾ ಅಸಮಾಧಾನ ವ್ಯಕ್ತಪಡಿಸಿದ್ದು, ಜನರನ್ನು ಮೂರ್ಖರನ್ನಾಗಿಸಲು ಪೊಲೀಸರು ಯತ್ನಿಸಿದಂತಿದೆ. ಇಷ್ಟು ವರ್ಷವಾದರೂ ತನಿಖೆಯಲ್ಲಿ ಪ್ರಗತಿ ಏಕಿಲ್ಲ. ವಾಟ್ಸಾಪ್​ ಚಾಟ್ ಆಧಾರದಲ್ಲಿ ಕ್ರಮ ಹೇಗೆ ಸಾಧ್ಯ. ಹಾಗಿದ್ದರೆ ಆಗಿನ ಆಯುಕ್ತರು, ಜಂಟಿ ಆಯುಕ್ತರು ಮತ್ತಿತರರ ಮೇಲೇಕೆ ಕೇಸ್ ದಾಖಲಿಸಲಿಲ್ಲ ಎಂದು ಪೊಲೀಸರಿಗೆ ಹೈಕೋರ್ಟ್ ಏಕಸದಸ್ಯ ಪೀಠ ತರಾಟೆ ತೆಗೆದುಕೊಂಡಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್​: ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು

ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿ ವಿರುದ್ಧ ಮೊದಲು ಆರೋಪ ಕೇಳಿಬಂದಿತ್ತು. ಹಾಗಾಗಿ ಕೇಸ್​ ದಾಖಲಿಸಿಕೊಂಡಿದ್ದ ಎಸ್​ಐಟಿ ಫೆಬ್ರುವರಿ 17ರಂದು ಬಂಧಿಸಲು ಮುಂದಾಗಿದ್ದರು. ಆದರೆ ಈ ವೇಳೆ ಅಧಿಕಾರಿಗಳ ಮೇಲೆ ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದರು. ಈ ವಿಚಾರವಾಗಿ ವಿಧಾನಸೌಧ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ (ಕೊಲೆ ಯತ್ನ) ಮತ್ತು 353 ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಕೇಸ್​: ಡಿವೈಎಸ್​​​​ಪಿ ಶ್ರೀಧರ್ ಕೆ. ಪೂಜಾರಿ ರಿಲೀಫ್, ಘೋಷಿತ ಆರೋಪಿ ಆದೇಶ ರದ್ದು

ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಿದ್ದ ಶ್ರೀಧರ್ ಪೂಜಾರಿ ತೆರೆಮರೆಯಲ್ಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡಿದ್ದರಿಂದ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್​ ಜಾರಿ ಮಾಡಲಾಗಿತ್ತು. ವಾರಂಟ್ ಪ್ರಶ್ನಿಸಿ ಶ್ರೀಧರ್ ಕೆ. ಪೂಜಾರ್ ಹೈಕೋರ್ಟ್​ಗೆ ಅರ್ಜಿ ಕೂಡ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?