AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ ಕಾಯಿನ್ ಹಗರಣ: ಐಜಿಪಿ ಸಂದೀಪ್ ಪಾಟೀಲ್​ಗೆ ಮತ್ತೆ ಎಸ್​ಐಟಿ ನೋಟಿಸ್

ಬಿಟ್​ ಕಾಯಿನ್ ಹಗರಣ ನಡೆದ ಸಂದರ್ಭದಲ್ಲಿ ಸಂದೀಪ್ ಪಾಟೀಲ್ ಸಿಸಿಬಿ ಮುಖ್ಯಸ್ಥರಾಗಿದ್ದರು. ಹೀಗಾಗಿ ಅವರಿಗೂ ಹಗರಣದ ಉರುಳು ಸುತ್ತಿಕೊಂಡಿದೆ. ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆಗೆ 2023ರ ಜುಲೈನಲ್ಲಿ ಕಾಂಗ್ರೆಸ್ ಸರ್ಕಾರ ಎಸ್​ಐಟಿ ರಚನೆ ಮಾಡಿತ್ತು. ಆಗ ಕಾಟನ್ ಪೇಟೆ ಠಾಣೆಯಲ್ಲಿ ಒಂದು ಕೇಸ್ ದಾಖಲು ಮಾಡಿದ್ದರು.

ಬಿಟ್​ ಕಾಯಿನ್ ಹಗರಣ: ಐಜಿಪಿ ಸಂದೀಪ್ ಪಾಟೀಲ್​ಗೆ ಮತ್ತೆ ಎಸ್​ಐಟಿ ನೋಟಿಸ್
ಬಿಟ್​ ಕಾಯಿನ್ ಹಗರಣ: ಐಜಿಪಿ ಸಂದೀಪ್ ಪಾಟೀಲ್​ಗೆ ಮತ್ತೆ ಎಸ್​ಐಟಿ ನೋಟಿಸ್
Kiran HV
| Edited By: |

Updated on: May 14, 2024 | 11:39 AM

Share

ಬೆಂಗಳೂರು, ಮೇ 14: ಬಿಟ್​ ಕಾಯಿನ್ ಹಗರಣ (Bitcoin Scam Case) ಸಂಬಂಧ ತನಿಖೆ ತೀವ್ರಗೊಳಿಸಿರುವ ಎಸ್​​ಐಟಿ (SIT) ಐಜಿಪಿ ಸಂದೀಪ್ ಪಾಟೀಲ್​ಗೆ ಮತ್ತೆ ನೋಟಿಸ್ ಜಾರಿ ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಸಂದೀಪ್ ಪಾಟೀಲ್​ಗೆ ನೋಟಿಸ್ ನೀಡಲಾಗಿದೆ. ಜತೆಗೆ, ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟಿಸ್ ನೀಡಿತ್ತು. ಆದರೆ, ಸಂದೀಪ್ ಪಾಟೀಲ್​ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಬಗ್ಗೆ ಕಾರಣ ತಿಳಿಸುವಂತೆಯೂ ನೋಟಿಸ್​​ನಲ್ಲಿ ಎಸ್​ಐಟಿ ಸೂಚಿಸಿದೆ.

ಬಿಟ್​ ಕಾಯಿನ್ ಹಗರಣ ಸಂಬಂಧ ಫೆಬ್ರವರಿಯಲ್ಲಿ ಸಂದೀಪ್ ಪಾಟೀಲ್​ರನ್ನು ಎಸ್​​ಐಟಿ ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಸುಮಾರು 3 ತಾಸು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಿತ್ತು. ಬಿಟ್​ ಕಾಯಿನ್ ಹಗರಣ ನಡೆದ ಸಂದರ್ಭದಲ್ಲಿ ಸಂದೀಪ್ ಪಾಟೀಲ್ ಸಿಸಿಬಿ ಮುಖ್ಯಸ್ಥರಾಗಿದ್ದರು. ಹೀಗಾಗಿ ಅವರಿಗೂ ಹಗರಣದ ಉರುಳು ಸುತ್ತಿಕೊಂಡಿದೆ.

ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆಗೆ 2023ರ ಜುಲೈನಲ್ಲಿ ಕಾಂಗ್ರೆಸ್ ಸರ್ಕಾರ ಎಸ್​ಐಟಿ ರಚನೆ ಮಾಡಿತ್ತು. ಆಗ ಕಾಟನ್ ಪೇಟೆ ಠಾಣೆಯಲ್ಲಿ ಒಂದು ಕೇಸ್ ದಾಖಲು ಮಾಡಿದ್ದರು. ಆರೋಪಿಗಳ ಹೆಸರು ಪ್ರಸ್ತಾಪಿಸದೇ ತನಿಖೆ ಶುರುಮಾಡಲಾಗಿತ್ತು. ಇಷ್ಟೇ ಅಲ್ಲದೇ ಪ್ರಕರಣದಲ್ಲಿ ಸಂತೋಷ್ ಮತ್ತು ಪ್ರಶಾಂತ್ ಬಾಬು ಎನ್ನುವವರನ್ನು ಬಂಧಿಸಲಾಗಿತ್ತು.

ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಬಂಧಿಸುವಲ್ಲಿ ಮೇ 7ರಂದು ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದರು.

ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಬಂಧನ

2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. 2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು. ಅಲ್ಲದೆ ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಎಗರಿಸಿದ್ದನು. ಅಲ್ಲದೇ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್​ ಜಾಲತಾಣ ಹ್ಯಾಕ್​ ಮಾಡಿದ್ದನು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆತ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್