AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಐಡಿ ಪೊಲೀಸರಿಗೆ ಶ್ರೀಕಿಯದ್ದೇ ತಲೆನೋವು: ವಿಚಾರಣೆಗೆ ಹಾಜರಾಗದೆ ಕುಂಟು ನೆಪ ಹೇಳುತ್ತಿರುವ ಬಿಟ್​ ಕಾಯಿನ್​ ಕಿಂಗ್​ಪಿನ್​

ಬಿಟ್​​ ಕಾಯಿನ್ ಹಗರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಹಗರಣದ ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದಾನೆ. ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿಲ್ಲ. ಪ್ರತಿಬಾರಿಯೂ ಒಂದೊಂದು ಕಾರಣ ನೀಡುತ್ತಿದ್ದಾನೆ.

ಸಿಐಡಿ ಪೊಲೀಸರಿಗೆ ಶ್ರೀಕಿಯದ್ದೇ ತಲೆನೋವು: ವಿಚಾರಣೆಗೆ ಹಾಜರಾಗದೆ ಕುಂಟು ನೆಪ ಹೇಳುತ್ತಿರುವ ಬಿಟ್​ ಕಾಯಿನ್​ ಕಿಂಗ್​ಪಿನ್​
ಶ್ರೀಕಿ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on: Dec 12, 2023 | 8:38 AM

Share

ಬೆಂಗಳೂರು, ಡಿಸೆಂಬರ್​​ 12: ಬಿಟ್​​ ಕಾಯಿನ್ (Bitcoin)​ ಹಗರಣದ ತನಿಖೆಯನ್ನು ಸಿಐಡಿ (CID) ನಡೆಸುತ್ತಿದೆ. ಹಗರಣದ ಆರೋಪಿ ಶ್ರೀಕಿ (Sriki) ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದಾನೆ. ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿಲ್ಲ. ಪ್ರತಿಬಾರಿಯೂ ಒಂದೊಂದು ಕಾರಣ ನೀಡುತ್ತಿದ್ದಾನೆ. ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ, ನನಗೆ ಹುಷಾರಿಲ್ಲ ಎಂದು ಕಾರಣ ನೀಡಿ ಸಿಐಡಿ ಪೊಲೀಸರ ವಿಚಾರಣೆಗೆ ಹಾಜರಾಗುತಿಲ್ಲ.

ಈ ಹಿಂದೆಯೂ ನಾಟಕವಾಡಿದ್ದ ಶ್ರೀಕಿ

ಶ್ರೀಕಿ ಒಂದೂವರೆ ತಿಂಗಳ ಹಿಂದೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದನು. ಆದರೆ ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಹಾಗೂ ಮಲಗಲು ಮನೆಗೆ ಹೋಗುತ್ತಿದ್ದನು. ಆಗ ವಿಚಾರಣೆ ನಡೆಸಲು ಸಿಐಡಿ ತಂಡ ನಿಮ್ಹಾನ್ಸ್​ಗೆ ಹೋದರೇ ಬೆದರಿಕೆ ಹಾಕಿದ್ದನು. ನಿಮ್ಮ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದನು. ಶ್ರೀಕಿ ಕಳ್ಳಾಟದಿಂದ ಬೇಸೆತ್ತು ಸಿಐಡಿ ಅಧಿಕಾರಿಗಳು ಶ್ರೀಕಿಯ ಹೆಲ್ತ್ ರಿಪೋರ್ಟ್ ನೀಡುವಂತೆ ವೈದ್ಯರಿಗೆ ಕೇಳಿದ್ದರು. ಆಗ ವೈದ್ಯರು ಶ್ರೀಕಿ ಸಹವಾಸವೇ ಬೇಡವೆಂದು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದರು. ಇದೀಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದರೂ ಹಾಜರಾಗುತ್ತಿಲ್ಲ.

ಇದನ್ನೂ ಓದಿ: ಬಿಟ್​​ಕಾಯಿನ್​ ಕಿಂಗ್​ಪಿನ್​ ಜಾಗತಿಕ ಹ್ಯಾಕರ್​ ಶ್ರೀಕಿ ಪೊಲೀಸರಿಗೆ ಲಾಕ್​ ಆಗ್ತಿದ್ದಂತೆ ತನ್ನ ಬಗ್ಗೆ ಹೇಳಿದ್ದೇನು? ಇನ್​ಸೈಡ್​​ ಡಿಟೆಲ್ಸ್​​

ಏನಿದು ಪ್ರಕರಣ? ಸಿಐಡಿ ತನಿಖೆ ಏಕೆ?

2015ರ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. 2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು. ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದರು. ಆದರೆ ಸಿಸಿಬಿ ಪೊಲೀಸರ ವಿರುದ್ಧ ದಾಖಲೆ ತಿರುಚಿರುವ ಆರೋಪಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಟ್​ ಕಾಯಿನ್​ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ