AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಐಡಿ ಪೊಲೀಸರಿಗೆ ಶ್ರೀಕಿಯದ್ದೇ ತಲೆನೋವು: ವಿಚಾರಣೆಗೆ ಹಾಜರಾಗದೆ ಕುಂಟು ನೆಪ ಹೇಳುತ್ತಿರುವ ಬಿಟ್​ ಕಾಯಿನ್​ ಕಿಂಗ್​ಪಿನ್​

ಬಿಟ್​​ ಕಾಯಿನ್ ಹಗರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಹಗರಣದ ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದಾನೆ. ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿಲ್ಲ. ಪ್ರತಿಬಾರಿಯೂ ಒಂದೊಂದು ಕಾರಣ ನೀಡುತ್ತಿದ್ದಾನೆ.

ಸಿಐಡಿ ಪೊಲೀಸರಿಗೆ ಶ್ರೀಕಿಯದ್ದೇ ತಲೆನೋವು: ವಿಚಾರಣೆಗೆ ಹಾಜರಾಗದೆ ಕುಂಟು ನೆಪ ಹೇಳುತ್ತಿರುವ ಬಿಟ್​ ಕಾಯಿನ್​ ಕಿಂಗ್​ಪಿನ್​
ಶ್ರೀಕಿ
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 12, 2023 | 8:38 AM

Share

ಬೆಂಗಳೂರು, ಡಿಸೆಂಬರ್​​ 12: ಬಿಟ್​​ ಕಾಯಿನ್ (Bitcoin)​ ಹಗರಣದ ತನಿಖೆಯನ್ನು ಸಿಐಡಿ (CID) ನಡೆಸುತ್ತಿದೆ. ಹಗರಣದ ಆರೋಪಿ ಶ್ರೀಕಿ (Sriki) ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದಾನೆ. ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿಲ್ಲ. ಪ್ರತಿಬಾರಿಯೂ ಒಂದೊಂದು ಕಾರಣ ನೀಡುತ್ತಿದ್ದಾನೆ. ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ, ನನಗೆ ಹುಷಾರಿಲ್ಲ ಎಂದು ಕಾರಣ ನೀಡಿ ಸಿಐಡಿ ಪೊಲೀಸರ ವಿಚಾರಣೆಗೆ ಹಾಜರಾಗುತಿಲ್ಲ.

ಈ ಹಿಂದೆಯೂ ನಾಟಕವಾಡಿದ್ದ ಶ್ರೀಕಿ

ಶ್ರೀಕಿ ಒಂದೂವರೆ ತಿಂಗಳ ಹಿಂದೆ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದನು. ಆದರೆ ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟ ಹಾಗೂ ಮಲಗಲು ಮನೆಗೆ ಹೋಗುತ್ತಿದ್ದನು. ಆಗ ವಿಚಾರಣೆ ನಡೆಸಲು ಸಿಐಡಿ ತಂಡ ನಿಮ್ಹಾನ್ಸ್​ಗೆ ಹೋದರೇ ಬೆದರಿಕೆ ಹಾಕಿದ್ದನು. ನಿಮ್ಮ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದನು. ಶ್ರೀಕಿ ಕಳ್ಳಾಟದಿಂದ ಬೇಸೆತ್ತು ಸಿಐಡಿ ಅಧಿಕಾರಿಗಳು ಶ್ರೀಕಿಯ ಹೆಲ್ತ್ ರಿಪೋರ್ಟ್ ನೀಡುವಂತೆ ವೈದ್ಯರಿಗೆ ಕೇಳಿದ್ದರು. ಆಗ ವೈದ್ಯರು ಶ್ರೀಕಿ ಸಹವಾಸವೇ ಬೇಡವೆಂದು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದರು. ಇದೀಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದರೂ ಹಾಜರಾಗುತ್ತಿಲ್ಲ.

ಇದನ್ನೂ ಓದಿ: ಬಿಟ್​​ಕಾಯಿನ್​ ಕಿಂಗ್​ಪಿನ್​ ಜಾಗತಿಕ ಹ್ಯಾಕರ್​ ಶ್ರೀಕಿ ಪೊಲೀಸರಿಗೆ ಲಾಕ್​ ಆಗ್ತಿದ್ದಂತೆ ತನ್ನ ಬಗ್ಗೆ ಹೇಳಿದ್ದೇನು? ಇನ್​ಸೈಡ್​​ ಡಿಟೆಲ್ಸ್​​

ಏನಿದು ಪ್ರಕರಣ? ಸಿಐಡಿ ತನಿಖೆ ಏಕೆ?

2015ರ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು. 2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು. ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದರು. ಆದರೆ ಸಿಸಿಬಿ ಪೊಲೀಸರ ವಿರುದ್ಧ ದಾಖಲೆ ತಿರುಚಿರುವ ಆರೋಪಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಟ್​ ಕಾಯಿನ್​ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?