AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾ ನಾಯಕಿ’ ಕಾಂಗ್ರೆಸ್ ಸಮಾವೇಶಕ್ಕೆ ಬರುವವರಿಗೆ ಹಣ ಹಂಚಿಕೆ ಆರೋಪ; ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

‘ನಾಯಕಿ’ ಕಾರ್ಯಕ್ರಮಕ್ಕೂ 2000 ರೂ. ಕೊಟ್ಟೇ ಕರೆತರಲಾಗಿತ್ತು! ಪ್ರಿಯಾಂಕಾ ಗಾಂಧಿ ನೇತೃತ್ವದ ಸಮಾವೇಶದಲ್ಲಿ ಹರಿದ ಕಾಂಚಾಣವೇ ಬಹುಶಃ ಕಾಂಗ್ರೆಸ್ಸಿಗರ ಗೃಹಲಕ್ಷ್ಮೀ ಯೋಜನೆ ಇರಬೇಕು’ ಎಂದು ಬಿಜೆಪಿ ಹೇಳಿದೆ.

‘ನಾ ನಾಯಕಿ’ ಕಾಂಗ್ರೆಸ್ ಸಮಾವೇಶಕ್ಕೆ ಬರುವವರಿಗೆ ಹಣ ಹಂಚಿಕೆ ಆರೋಪ; ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ
ಬಿಜೆಪಿ ಟ್ವೀಟ್ ಮಾಡಿರುವ ವಿಡಿಯೋದ ಸ್ಕ್ರೀನ್​ಗ್ರ್ಯಾಬ್
TV9 Web
| Edited By: |

Updated on: Jan 16, 2023 | 8:05 PM

Share

ಬೆಂಗಳೂರು: ನಗರದ ಅರಮನೆ ಮೈದಾನದ ಮುಖ್ಯದ್ವಾರ ಬಳಿ ಕಾಂಗ್ರೆಸ್​ (Congress) ಆಯೋಜಿಸಿರುವ ‘ನಾ ನಾಯಕಿ’ ಸಮಾವೇಶದಲ್ಲಿ ಭಾಗವಹಿಸಲು ಬಂದವರಿಗೆ ಹಣ ನೀಡಲಾಗಿತ್ತು ಎಂದು ಬಿಜೆಪಿ (BJP) ಆರೋಪಿಸಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಅಲ್ಲೇ ಡ್ರಾ ಅಲ್ಲೇ ಬಹುಮಾನ ಅಂದ್ರೆ ಇದೇನಾ? ‘ನಾಯಕಿ’ ಕಾರ್ಯಕ್ರಮಕ್ಕೂ 2000 ರೂ. ಕೊಟ್ಟೇ ಕರೆತರಲಾಗಿತ್ತು! ಪ್ರಿಯಾಂಕಾ ಗಾಂಧಿ ನೇತೃತ್ವದ ಸಮಾವೇಶದಲ್ಲಿ ಹರಿದ ಕಾಂಚಾಣವೇ ಬಹುಶಃ ಕಾಂಗ್ರೆಸ್ಸಿಗರ ಗೃಹಲಕ್ಷ್ಮೀ ಯೋಜನೆ ಇರಬೇಕು’ ಎಂದು ಉಲ್ಲೇಖಿಸಿ ವ್ಯಂಗ್ಯವಾಡಿದೆ. ಜತೆಗೆ ಆರೋಪಕ್ಕೆ ಸಂಬಂಧಿಸಿದ ವಿಡಿಯೊ ತುಣುಕನ್ನು ಲಗತ್ತಿಸಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಯ ಮಹಿಳೆಯರಿಗೆ ಬೇಷರತ್ತಾಗಿ 2,000 ರೂ. ನೀಡಲಾಗುವುದು. ಇದಕ್ಕಾಗಿ ಗೃಹಲಕ್ಷ್ಮೀ ಯೋಜನೆ ರೂಪಿಸಲಾಗುವುದು ಎಂದು ‘ನಾ ನಾಯಕಿ’ ಸಮಾವೇಶದಲ್ಲಿ ಘೋಷಿಸಲಾಗಿತ್ತು. ಜತೆಗೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮೀಸಲಾತಿ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಲಾಗಿತ್ತು.

ಇದನ್ನೂ ಓದಿ: ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ನಿರೂಪಿಕಿಯನ್ನು ಕೆಳಗಿನಿಂದ ಮೇಲೆ, ಮೇಲಿಂದ ಕೆಳಗೆ ಆಶ್ಚರ್ಯಚಕಿತರಾಗಿ ನೋಡಿದ್ದು ಯಾಕೋ?

ಮಹಿಳೆಯರಿಗಾಗಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಬಿಜೆಪಿ ಸರ್ಕಾರ ನೀಡಿದ್ದ ಜಾಹೀರಾತಿನ ಬಗ್ಗೆ ಟೀಕಿಸಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ನಾವು ಕಾರ್ಯಕ್ರಮ ಹಮ್ಮಿಕೊಂಡ ಬಳಿಕ ಬಿಜೆಪಿಗೆ ಜ್ಞಾನೋದಯವಾಗಿದೆ ಎಂದು ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ವಿಡಿಯೊ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಅನ್ನು ಲೇವಡಿ ಮಾಡಿದೆ.

ಪ್ರಿಯಾಂಕಾ ಗಾಂಧಿ ಹೋದಲ್ಲಿ ಕಾಂಗ್ರೆಸ್ ಗೆಲ್ಲಲ್ಲ; ಸುಧಾಕರ್ ವ್ಯಂಗ್ಯ

‘ನಾ ನಾಯಕಿ’ ಸಮಾವೇಶದ ಬಗ್ಗೆ ಆರೋಗ್ಯ ಸಚಿವ ಕೆ. ಸುಧಾಕರ್ ವ್ಯಂಗ್ಯವಾಡಿದ್ದು, ಪ್ರಿಯಾಂಕಾ ಗಾಂಧಿ ಹೋದಲ್ಲಿ ಕಾಂಗ್ರೆಸ್ ಗೆಲ್ಲಲ್ಲ ಎಂದು ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಹಿಂದೆ ಕಾಂಗ್ರೆಸ್ 8-10 ಸೀಟ್ ಗೆಲ್ಲುತ್ತಿತ್ತು. ಪ್ರಿಯಾಂಕಾ ಗಾಂಧಿ ಹೋದ ಮೇಲೆ 1-2 ಸ್ಥಾನ ಮಾತ್ರ ಗೆದ್ದಿದ್ದಾರೆ. ಕರ್ನಾಟಕದಲ್ಲಿಯೂ ಹೀಗೆಯೇ ಆಗಲಿದೆ ಎಂದು ನೆಲಮಂಗಲದಲ್ಲಿ ಕೆ. ಸುಧಾಕರ್ ಹೇಳಿದ್ದಾರೆ. ಮಹಿಳೆಯರಿಗಾಗಿ ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳ ಬಗ್ಗೆ ಜಾಹೀರಾತು ನೀಡಿದ್ದೇವೆ. ಕಾಂಗ್ರೆಸ್‌ನ ಪ್ರಣಾಳಿಕೆಗಳು ಘೋಷಣೆಯಾಗಿಯೇ ಉಳಿಯುತ್ತವೆ. ಚುನಾವಣೆಗೂ ಮುನ್ನವೇ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತೇವೆ. ನಮ್ಮ ಸರ್ಕಾರ ಎಲ್ಲಾ ಯೋಜನೆಗಳನ್ನು ಜಾರಿಗೊಳಿಸುತ್ತದೆ ಎಂದು ಸುಧಾಕರ್ ಹೇಳಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!