ದರ್ಶನ್ ಜೊತೆ ಸುಮಾಲತಾ ಮ್ಯಾಚ್ ಫಿಕ್ಸಿಂಗ್ ಆರೋಪ: ಬಿಜೆಪಿ ನಾಯಕನಿಂದಲೇ ಸಿಡಿದ ಬಾಂಬ್, ಮಂಡ್ಯ ಕದನಕಣ ಮತ್ತೆ ರಣಾಂಗಣ

ಚುನಾವಣೆ ಬಳಿಕ ಮಂಡ್ಯ ರಾಜಕಾರಣದಲ್ಲಿ ಕೆಸೆರೆರೆಚಾಟ ಶುರುವಾಗಿದೆ. ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಸಂಸದೆ ಸುಮಲತಾ ವಿರುದ್ದ ತಿರುಗಿ ಬಿದ್ದಿದ್ದಾರೆ. ತನ್ನ ಸೋಲಿಗೆ ಸುಮಲತಾನೇ ಕಾರಣ ಎಂದು ಗಂಭೀರ ಆರೋಪ ಮಾಡುತ್ತಿದ್ದಾರೆ. ರೆಬಲ್ ಲೇಡಿಯ ವಿರುದ್ದ ತಿರುಗಿ ಬಿದ್ದಿದ್ಯಾರು? ಎನ್ನುವ ವಿವರ ಇಲ್ಲಿದೆ.

ದರ್ಶನ್ ಜೊತೆ ಸುಮಾಲತಾ ಮ್ಯಾಚ್ ಫಿಕ್ಸಿಂಗ್ ಆರೋಪ: ಬಿಜೆಪಿ ನಾಯಕನಿಂದಲೇ ಸಿಡಿದ ಬಾಂಬ್, ಮಂಡ್ಯ ಕದನಕಣ ಮತ್ತೆ ರಣಾಂಗಣ
ಸುಮಾಲತಾ ಅಂಬರೀಶ್

Updated on: May 24, 2023 | 9:13 AM

ಮಂಡ್ಯ: ಶತಾಯ ಗತಾಯವಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಹಳೆ ಮೈಸೂರನ್ನ (Old Mysuru) ಕಬ್ಜ ಮಾಡಬೇಕು, ಒಕ್ಕಲಿಗರ ಕೋಟೆ ಮೇಲೆ ಕಮಲ ಪತಾಕೆ ಹಾರಿಸಬೇಕೆಂದು ಪಣತೊಟ್ಟು ದಕ್ಷಿಣ ದಂಡಯಾತ್ರೆಗೆ ಚಾಲನೆ ನೀಡಿದ್ದ ಬಿಜೆಪಿಗರ(BJP) ಲೆಕ್ಕಾಚಾರ ತಲೆಕೆಳಗಾಗಿದೆ. ಮಂಡ್ಯದ 7 ವಿಧಾನಸಭಾ ಕ್ಷೇತ್ರದ ಪೈಕಿ 5 ಕ್ಷೇತ್ರವನ್ನ ಕಾಂಗ್ರೆಸ್​ ಕಬ್ಜ ಮಾಡಿದ್ರೆ, ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಬೆಂಬಲಿತ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಗೆದ್ದು ಬೀಗಿದ್ದಾರೆ. ಆದ್ರೆ ಈಗ ದರ್ಶನ್ ಗೆಲುವಿಗೆ ಪರೋಕ್ಷವಾಗಿ ಸಂಸದೆ ಸುಮಲತಾ (Sumalatha Ambareesh) ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಅದರಲ್ಲೂ ಈ ಆರೋಪವನ್ನ ಸ್ವತಃ ಬಿಜೆಪಿ ಅಭ್ಯರ್ಥಿಯೇ ಮಾಡುತ್ತಿರುವುದು, ಮಂಡ್ಯ ಕದನಕಣ ಮತ್ತೆ ರಣಾಂಗಣವಾಗಿದೆ.

ಇದನ್ನೂ ಓದಿ: ಮೋದಿ ನಾಯಕತ್ವದ ಮೇಲೆ ಯಾವತ್ತಿಗೂ ನಂಬಿಕೆ ಇದೆ; ವದಂತಿಗಳನ್ನು ನಿರಾಕರಿಸಿದ ಸುಮಲತಾ ಕೊಟ್ಟ ವಿವರಣೆ ಇಲ್ಲಿದೆ ನೋಡಿ

ದರ್ಶನ್ ಜೊತೆ ಸುಮಾ ಮ್ಯಾಚ್ ಫಿಕ್ಸಿಂಗ್ ಆರೋಪ

ಸುಮಲತಾ ವರ್ಸಸ್ ದಳಪತಿಗಳ ದಂಗಲ್​ ನಿನ್ನೆ ಮೊನ್ನೆಯದಲ್ಲ. 2019ರ ಲೋಕಸಭಾ ಸಂಗ್ರಾಮದ ವೇಳೆ ಶುರುವಾದ ಈ ಸಮರ ಇನ್ನೂ ಸಹ ನಿಂತಿಲ್ಲ. ಮಂಡ್ಯದ ಜೆಡಿಎಸ್ ಶಾಸಕರ ವಿರುದ್ಧ ಬಹಿರಂಗವಾಗಿಯೇ ಸಿಡಿದೆದ್ದಿದ್ದ ಸುಮಲತಾ, ಅಕ್ರಮ ಗಣಿಗಾರಿಕೆ ಮೂಲಕ ಮಾಜಿ ಶಾಸಕ ಪುಟ್ಟರಾಜು ವಿರುದ್ಧ ಸಮರ ಸಹ ಸಾರಿದ್ದರು. ಈಗ ಸುಮಲತಾರ ಹಳೆ ಸೇಡು ಮತ್ತೆ ಚರ್ಚೆಗೆ ಬಂದಿದೆ.

ಮೇಲುಕೋಟೆಯಲ್ಲಿ ಪುಟ್ಟರಾಜುರನ್ನ ಸೋಲಿಸಲು ಸುಮಲತಾ ರೈತ ಸಂಘದ ಅಭ್ಯರ್ಥಿ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿ ಕೊಂಡಿದ್ರು. ಈ ಕಾರಣಕ್ಕಾಗಿಯೇ ಬಿಜೆಪಿ ಅಭ್ಯರ್ಥಿ ಪರ ಒಂದು ದಿನವೂ ಪ್ರಚಾರಕ್ಕೆ ಬರಲಿಲ್ಲ, ಸುಮಾ ಸೇಡಿನಿಂದ ಬಿಜೆಪಿಗೆ ನಷ್ಟವಾಯ್ತು ಎಂದು ಮೇಲುಕೋಟೆ ಪಾರಾಜಿತ ಬಿಜೆಪಿ ಅಭ್ಯರ್ಥಿ, ಇಂದ್ರೇಶ್ ಹೊಸ ಬಾಂಬ್ ಸಿಡಿಸಿದ್ದಾರೆ. ರೆಬೆಲ್ ಲೇಡಿಯ ವಿರುದ್ದ ಡಾ. ಇಂದ್ರೇಶ್ ಆರೋಪ ಮಾಡುತ್ತಿದ್ದಂತೆಯೇ ಸುಮಲತಾ ಆಪ್ತರು ಎಚ್ಚೆತ್ತುಕೊಂಡು, ಸುಮಾಲತಾ ಎಲ್ಲೂ ದರ್ಶನ್ ಪರ ಪ್ರಚಾರ ಮಾಡಿಲ್ಲ. ಒಂದು ವೇಳೆ ಸುಮಾಲತ ಪ್ರಚಾರ ಮಾಡಿದ್ರೆ ಇನ್ನೂ 15 ಸಾವಿರ ಹೆಚ್ಚು ಲೀಡ್​ನಿಂದ ದರ್ಶನ್ ಗೆಲ್ಲುತ್ತಿದ್ದರು ಎಂದು ತಿರುಗೇಟು ನೀಡಿದ್ದಾರೆ.

ಅದೇನೆ ಆಗ್ಲಿ ಸೋಲಿನ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಬೇಕಾದ ಅಭ್ಯರ್ಥಿಗಳು ತಮ್ಮ ಸೋಲಿಗೆ ಒಬ್ಬರನ್ನೇ ಹೊಣೆ ಮಾಡುವುದು ಎಷ್ಟು ಸರಿ, ಚುನಾವಣೆ ಮುಗಿದ ಬಳಿಕ ರಾಜಕೀಯ ಕೆಸರೆರಚಾಟ ಸೂಕ್ತವೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿವೆ.

ರಾಜ್ಯ ರಾಜಕಾರಣದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us