AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangala Angadi: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ 3,986 ಮತಗಳ ರೋಚಕ ಗೆಲುವು

Belagavi By poll 2021 Results :ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತೇನೆ ಎಂದು ಅವರು ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ದಿವಂಗತ ಸುರೇಶ್ ಅಂಗಡಿ ಕನಸಿನಂತೆಯೇ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.

Mangala Angadi: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಗೆ 3,986 ಮತಗಳ ರೋಚಕ ಗೆಲುವು
ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ
guruganesh bhat
|

Updated on:May 02, 2021 | 8:55 PM

Share

ಬೆಳಗಾವಿ: ಬೆಳಗಾವಿ ಬೈಎಲೆಕ್ಷನ್​ನಲ್ಲಿ ಬಿಜೆಪಿ​ ಅಭ್ಯರ್ಥಿ ಮಂಗಳಾ ಅಂಗಡಿ 3,986 ಮತಗಳ ಅಂತರದಿಂದ ರೋಚಕ ಗೆಲುವು ಸಾಧಿಸಿದ್ದಾರೆ. 4,36,868 ಮತಗಳನ್ನು ಪಡೆದಿರುವ ಮಂಗಳಾ ಅಂಗಡಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಸೋಲಿಸಿದ್ದು, ಸತೀಶ್ ಜಾರಕಿಹೊಳಿ 4,32,882 ಮತಗಳನ್ನು ಪಡೆದಿದ್ದಾರೆ. ಎಂಇಎಸ್​ಗೆ 1,16,923 ಮತಗಳು ಚಲಾವಣೆಯಾಗಿದ್ದು, ಭರ್ಜರಿ ಪೈಪೋಟಿ ನೀಡಿದೆ.

ಗೆಲುವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಿಜೇತ ಅಭ್ಯರ್ಥಿ ಮಂಗಳಾ ಅಂಗಡಿ, ‘ಇದು ನನ್ನ ಗೆಲುವಲ್ಲ, ಬಿಜೆಪಿ ಕಾರ್ಯಕರ್ತರ ಗೆಲುವು. ಬಿಜೆಪಿ ಮಾಡಿದ ಅಭಿವೃದ್ಧಿ ಕೆಲಸಕ್ಕೆ ಮತ ನೀಡಿದ್ದಾರೆ. ಬೆಳಗಾವಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತೇನೆ’ ಎಂದು ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ದಿವಂಗತ ಸುರೇಶ್ ಅಂಗಡಿ ಕನಸಿನಂತೆಯೇ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.

89ನೇ ಸುತ್ತಿನ ಮತ ಎಣಿಕೆಯ ನಂತರ ಬಿಜೆಪಿ ಗೆಲುವು 3986ಮತಗಳಿಂದ ಗೆಲುವು ಪಡೆದಿದ್ದಾರೆ.

ಸುರೇಶ್ ಅಂಗಡಿಯವರಂತೆಯೇ ಕೆಲಸ ಮಾಡುತ್ತೇನೆ ಸುರೇಶ್ ಅಂಗಡಿಯವರ ಯೋಜನೆಗಳನ್ನು ಮುಂದುವರೆಸುತ್ತೇನೆ. ಕ್ಷೇತ್ರದಲ್ಲಿ ಸುರೇಶ್ ಅಂಗಡಿ ಅವರಂತೆಯೇ ಕೆಲಸ ಮಾಡುತ್ತೇನೆ.  ಪ್ರಧಾನಿ ನರೇಂದ್ರ ಮೋದಿ ಸೇರಿ ಎಲ್ಲಾ ಬಿಜೆಪಿ ನಾಯಕರು, ಮತದಾರರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ವಿಜೇತ ಅಭ್ಯರ್ಥಿ ಮಂಗಳಾ ಅಂಗಡಿ ತಿಳಿಸಿದರು.

ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು, ಮತದಾರರಿಗೆ ಧನ್ಯವಾದ ತಿಳಿಸಿದ ಮಂಗಳಾ ಅಂಗಡಿ, ಒಂದು ಮತದಿಂದ ಗೆದ್ದರೂ ಸಹ ಅದು ಗೆಲುವೇ ಆಗಿತ್ತು. ಕೊವಿಡ್ ಇರುವುದರಿಂದ ಮತದಾನ ಕಡಿಮೆಯಾಗಿದೆ. ಹೀಗಾಗಿ ಬಿಜೆಪಿಗೆ ಮತಗಳು ಕಡಿಮೆ ಬಂದಿದೆ. ಗೋಕಾಕ್ ನನಗೆ ತವರು ಮನೆ, ಅಲ್ಲಿಯ ಮತದಾರರು ಮನೆ‌ಮಗಳನ್ನು ಬಿಟ್ಟುಕೊಡಲಿಲ್ಲ. ಬೆಳಗಾವಿ ದಕ್ಷಿಣ ಕ್ಷೇತ್ರದ ಜನರು ಹೆಚ್ಚು ಮತ ನೀಡಿದ್ದು ಅವರಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಅವರು ಹೇಳಿದರು.

ಬೆಳಗಾವಿ ಬೈಎಲೆಕ್ಷನ್​ನಲ್ಲಿ ಜಯ ಗಳಿಸಿದ ಮಂಗಳಾ ಅಂಗಡಿ ಚುನಾವಣಾ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಸಂಸದರಾಗಿ ಆಯ್ಕೆಯಾದ ಪ್ರಮಾಣ ಪತ್ರ ಸ್ವೀಕರಿಸಿದರು.

ಇದನ್ನೂ ಓದಿ: ಮಸ್ಕಿ ಕ್ಷೇತ್ರದಲ್ಲಿ ಒಗ್ಗಟ್ಟಿನ ಹೋರಾಟದಿಂದ ಗೆದ್ದಿದ್ದೇವೆ; ಬಸನಗೌಡ ತುರವಿಹಾಳ್

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು; ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ (BJP candidate Mangala Angadi won by 3,986 votes in Belgaum lok sabha elections 2021)

Published On - 7:19 pm, Sun, 2 May 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ